News Karnataka Kannada
Friday, March 29 2024
Cricket
ಮಂಗಳೂರು

ಬಂಟ್ವಾಳ: ಜನರ ಸಂಕಷ್ಟಕ್ಕೆ ಪಕ್ಷ ಸ್ಪಂದಿಸಲಿದೆ -ಸವಿತಾ ರಮೇಶ್

The party will respond to the plight of the people: Savita Ramesh
Photo Credit : By Author

ಬಂಟ್ವಾಳ: ಕಾಂಗ್ರೆಸ್ ಪಕ್ಷ ನೀಡುತ್ತಿರುವ ಗ್ಯಾರಂಟಿ ಭರವಸೆಗಳನ್ನು ಸರಕಾರ ಬಂದರೆ ಈಡೇರಿಸುವುದು ಗ್ಯಾರಂಟಿ. ಜನರ ಸಂಕಷ್ಟಕ್ಕೆ ಪಕ್ಷ ಸ್ಪಂದಿಸಲಿದ್ದು, ಬಿಜೆಪಿ ಸರಕಾರದ ನೀತಿಯಿಂದ ಸೊರಗಿದ ಜನತೆಯ ಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಭರವಸೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್ ಹೇಳಿದ್ದಾರೆ.

ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯುತ್ತಿದ್ದು, ಕುಕ್ಕಾಜೆ ಜಂಕ್ಷನ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ, ರಾಜ್ಯ ಸರಕಾರಗಳ ಸಾಧನೆಗಳನ್ನು ಹೇಳಿ ಮತ ಪಡೆದುಕೊಳ್ಳಲು ಯತ್ನಿಸಲಿ ಎಂದು ಬಿಜೆಪಿಗೆ ಸವಾಲೆಸದ ಅವರು, ಕಾಂಗ್ರೆಸ್ ಪಕ್ಷದ ಸಾಧನೆ ಮುಂದೆ ಬಿಜೆಪಿ ಲೆಕ್ಕಕ್ಕಿಲ್ಲ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ನಾನು ಕ್ಷೇತ್ರದ ಜನರ ಪ್ರೀತಿ ವಿಶ್ವಾಸವನ್ನು ಸಂಪಾದಿಸಿದ್ದು, ಪೊಳ್ಳು ಭರವಸೆ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷದಿಂದ ರೈತರಿಗೆ ಉಚಿತ ವಿದ್ಯುತ್, ಸಾಲ ಮನ್ನಾದಂಥ ಯೋಜನೆ ನೀಡಿದ್ದು, ಇನ್ನೂ ಅವಾಸ್ತವವಾದ ಯೋಜನೆ ಘೋಷಿಸಿಲ್ಲ, ಈಡೇರಿಸುವಂಥ ಪೋಷಣೆಯನ್ನೇ ಹೇಳಿದ್ದೇವೆ ಎಂದರು. ರಾಜಕೀಯದಲ್ಲಿ ಕೋಟ್ಯಂತರ ರೂಪಾಯಿ ಹಣ ನಾನು ಮಾಡಲಿಲ್ಲ, ಕಮೀಷನ್ ಪರ್ಸೆಂಟೇಜ್ ರಾಜಕಾರಣ ಮಾಡಿಲ್ಲ, ಇದು ನನ್ನ ಕೊನೆಯ ಚುನಾವಣೆ ಎಂದರು.

ಯಾತ್ರೆ ಸಂಚಾಲಕ ಪಿಯೂಸ್ ಎಲ್. ರೋಡ್ರಿಗಸ್, ಪಕ್ಷ ಪ್ರಮುಖರಾದ ಚಂದ್ರಪ್ರಕಾಶ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಅಲಿ, ಜಯಂತಿ ಪೂಜಾರಿ, ಸುರೇಶ್ ಜೋರಾ, ಸಿದ್ದೀಕ್ ಗುಡ್ಡೆಯಂಗಡಿ, ಲೋಲಾಕ್ಷ ಶೆಟ್ಟಿ, ವಾಸು ಪೂಜಾರಿ, ಸದಾಶಿವ ಬಂಗೇರ, ಅಬ್ದುಲ್ ರಝಾಕ್ ಕುಕ್ಕಾಜೆ, ಆರ್ಶದ್ ಸರನ್ನ, ಇಬ್ರಾಹಿಂ ನವಾಜ್, ಬಾಲಕೃಷ್ಣ ಆಳ್ವ ಕೊಡಾಜೆ, ಸುಭಾಶ್ಚಂದ್ರ ಶೆಟ್ಟಿ ಕೊಳ್ಳಾಡು, ಪದ್ಮನಾಭ ರೈ, ಡೆಂಝಿಲ್ ನೊರೊನ್ನ, ತಿಲಕ್ ಮಂಚಿ, ವೆಂಕಪ್ಪ ಪೂಜಾರಿ, ಪ್ರವೀಣ್ ರೋಡ್ರಿಗಸ್, ಆಲ್ಬರ್ಟ್ ಮೆನೇಜಸ್‌, ನಜೀಬ್‌, ಸಿದ್ದೀಕ್ ಸರವು ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು