News Kannada
Sunday, October 01 2023
ಕ್ಯಾಂಪಸ್

ಉಜಿರೆ: ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Ujire: Engineer's Day at SDM Engineering College
Photo Credit : By Author

ಉಜಿರೆ: ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಇಂಜಿನಿಯರ್ ದಿನಾಚರಣೆ ಯಂದು ಕಾಲೇಜಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಇಲೆಕ್ಟ್ರಿಕಲ್ ವಿಭಾಗ ಮುಖ್ಯಸ್ಥರಾದ ಡಾ. ಮಂಜುನಾಥ್ ಮಾತನಾಡುತ್ತಾ ಅಣೆಕಟ್ಟುಗಳು, ಸೇತುವೆಗಳು ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣದ ಹಿಂದೆ ಇಂಜಿನಿಯರಗಳ ಶ್ರಮ ಅಪಾರ, ಅವರು ತಮ್ಮ ಗಮನಾರ್ಹ ಕಾರ್ಯಗಳಿಂದ ಮತ್ತು ಪ್ರತಿಭೆಯಿಂದ ರಾಷ್ಟ್ರವೇ ಹೆಮ್ಮೆ ಪಡುವಂತೆ ಮಾಡುತ್ತಾರೆ ಎಂಬುದಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಅವರು ಶ್ರೇಷ್ಠ ಉದಾಹರಣೆಯಾಗಿರುವರು. ಇವರ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಿ ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಆಶಿಸಿದರು.

ಗ್ರಾಮೀಣ ಪರಿಸರದ ಶಾಲಾಮಕ್ಕಳಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಕಾಲೇಜಿನ ಪ್ರಾದ್ಯಾಪಕರ ಮತ್ತು ವಿದ್ಯಾರ್ಥಿಗಳ ತಂಡವು ಸ್ಥಳೀಯ ಪ್ರೌಢ ಶಾಲೆಗಳಲ್ಲಿ ಕಾರ್ಯಗಾರ ನಡೆಸುವುದಾಗಿ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ತಿಳಿಸಿದರು.

 

See also  ವಿಶ್ವವಿದ್ಯಾನಿಲಯಗಳ ನಿರ್ಧಾರಗಳಲ್ಲಿ ರಾಜಕಾರಣಿಗಳ ಕೈವಾಡ ಬೇಡ: ಪ್ರೊ.ಕೆ.ಎಸ್.ರಂಗಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು