News Kannada
Friday, March 31 2023

ಕ್ಯಾಂಪಸ್

ಅಂತರ ವಿವಿ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ

Moodbidri Janaspandana meeting: 240 people issued title deeds
Photo Credit : News Kannada

ಮೂಡುಬಿದಿರೆ: ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ 36ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಆಳ್ವಾಸ್ ಕಾಲೇಜು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಆಳ್ವಾಸ್ ಕಾಲೇಜು ತಂಡವು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದೆ.

ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನರಾಮ್ ಸುಳ್ಯ ಮಾರ್ಗದರ್ಶನದಲ್ಲಿ ಭುವನ್ ಮಣಿಪಾಲ್ ನಿರ್ದೇಶಿಸಿದ ಹಾಗೂ ಉಜ್ವಲ್ ಯುವಿ ವಿನ್ಯಾಸ ಮಾಡಿದ ದುರ್ಯೋಧ ನಾಟಕ ಪ್ರಥಮ ಬಹುಮಾನ ಪಡೆದಿದೆ.

ಸುರೇಶ್ ಕುಮಾರ್ ನಿರ್ದೇಶನದ ಜಾನಪದ ನೃತ್ಯವು ದ್ವಿತೀಯ ಸ್ಥಾನ ಪಡೆಯಿತು. ಸಾಂಸ್ಕೃತಿಕ ಪ್ರತಿಭೆಗಳಿಗೆ ದತ್ತು ಯೋಜನೆ ಅಡಿಯಲ್ಲಿ ಉಚಿತ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನಳ್ವ ವಿಜೇತರನ್ನು ಅಭಿನಂದಿಸಿದರು.

ಆಳ್ವಾಸ್ ರಂಗ ಅಧ್ಯಯನ ಕೇಂದ್ರವು 11 ಬಾರಿ ರಾಷ್ಟ್ರೀಯ ರಂಗಪುರಸ್ಕಾರಕ್ಕೆ ಪಾತ್ರವಾಗಿದೆ.

See also  ಸಹ್ಯಾದ್ರಿ ಕಾಲೇಜಿನಲ್ಲಿ 11 ಮತ್ತು 12ನೇ ಎಂಬಿಎ ಪದವಿ ದಿನಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು