News Kannada
Thursday, March 23 2023

ಕ್ಯಾಂಪಸ್

ಚಿಕ್ಕಮಗಳೂರು: ಸಂತ ಕ್ಸೇವಿಯರ್‌ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟನೆ

smart class inagurated
Photo Credit :

ಚಿಕ್ಕಮಗಳೂರು:  ಸ್ಪರ್ಧಾತ್ಮಕ ಯುಗದಲ್ಲಿ ಮಾನವ ಜೀವನ ನಡೆಸುತ್ತಿದ್ದಾನೆ ಎಂದು ಎಐಟಿ ಕಾಲೇಜಿನ ಪ್ರಾಂಶು ಪಾಲ ಸಿ.ಟಿ.ಜಯದೇವ ಹೇಳಿದರು.

ತಾಲ್ಲೂಕಿನ ಬೀಕನಹಳ್ಳಿ ಸಮೀಪದ ಸಂತ  ಕ್ಸೇವಿಯರ್‌ ಆಂಗ್ಲಮಾಧ್ಯಮ ಶಾಲೆಯಲ್ಲಿ ಕೃತಕಬುದ್ದಿಮತ್ತೆ ಕುರಿತ ಸ್ಮಾರ್ಟ್‌ಕ್ಲಾಸ್‌ನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಾಲೆಯಲ್ಲಿ ಪ್ರಥಮ ಬಾರಿಗೆ ಸ್ಲಾರ್ಟ್ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯ ಬೇಕು. ಕೃತಕಬುದ್ದಿಮತ್ತೆಯು ಕಲಿಕಾ ವಿಧಾನ, ಕೌಶಲ್ಯ ಮತ್ತು ಮನೋಭಾವಗಳ ಜ್ಞಾನ ಸಂಪಾದನೆಯ ಪ್ರಕ್ರಿಯೆ ಯಾಗಿದೆ. ಈ ತಂತ್ರಜ್ಞಾವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಜ್ಞಾನವನ್ನು ಸಂಪಾದಿಸಬೇಕು ಎಂದರು.

ಹಿಂದಿನ ಕಾಲಘಟ್ಟದಲ್ಲಿ ಶಿಕ್ಷಣ ಸಾಂಪ್ರದಾಯಿಕವಾಗಿ ಬೋಧನೆಗೆ ಮಾತ್ರ ಸೀಮಿತವಾಗಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ ಬೋಧನೆ ಮತ್ತು ಕಲಿಕೆ ಒಟ್ಟೊಟ್ಟಿಗೆ ನಡೆಯಬೇಕಿದೆ. ಆ ನಿಟ್ಟಿನಲ್ಲಿ ತಾಂತ್ರಿಕತೆಯ ವಿಜ್ಞಾನ ಮತ್ತು ಗಣಿತ ಮೂಲಭೂತ ಕಲಿಕೆಗೆ ತುಂಬಾ ಉಪಕಾರಿಯಾಗಲಿದೆ ಎಂದು ತಿಳಿಸಿದರು.

ಸ್ಮಾರ್ಟ್‌ಪೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಇಂದಿನ ಸಮಯದಲ್ಲಿ ಮಾಹಿತಿಯನ್ನು ಕಲೆ ಹಾಕಲು ಬಳಸ ಲಾಗುತ್ತಿದ್ದು ಈ ತಾಂತ್ರಿಕತೆಯು ವಿದ್ಯಾರ್ಥಿಗಳ ಜೀವನವನ್ನು ಸರಳಗೊಳಿಸಿ ಅನೇಕ ಪ್ರಯೋಜನಗಳನ್ನು ನೀಡು ತ್ತಿದೆ. ಇದೇ ವೇಳೆ ಪ್ರಥಮ ಬಾರಿಗೆ ಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್ ಆರಂಭಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲ ರೋಷನ್ ಸಿಕ್ವೇರಾ ಕೃತಕಬುದ್ದಿಮತ್ತೆ ತಾಂತ್ರಿಕತೆಯು ವಿದ್ಯಾರ್ಥಿಗಳಲ್ಲಿ ವಿಚಾರಣಾಶಕ್ತಿಯನ್ನು ಅಭಿವೃದ್ದಿಪಡಿಸಿ ವಿಷಯವನ್ನು ವಿಶ್ಲೇ ಷಣೆ ಮಾಡಿ ವಿವಿಧ ಆಯಾಮಗಳಲ್ಲಿ ಕಲಿಕೆಯನ್ನು ಪ್ರೋತ್ಸಾಹಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದರು.

ಈ ತಾಂತ್ರಿಕತೆಯಿಂದ ವಿದ್ಯಾರ್ಥಿಗಳಿಗೆ ಕಲಿಯಲು, ಪ್ರಯತ್ನಶೀಲರಾಗಲು ಮತ್ತು ಪರೀಕ್ಷೆಗೆ ಒಳಪಡಿಸಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ಹೇಳಿದ ವಿಷಯವನ್ನು ಅರ್ಥ ಮಾಡಿಕೊಂಡಿದ್ದಾರೆಯೇ ಅಥವಾ ಇಲ್ಲ ಎಂಬುದನ್ನು ಪರೀಕ್ಷಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಹೋಲಿ ಫ್ಯಾಮಿಲಿ ಸೇವಾ ಸಮಿತಿ ಅಧ್ಯಕ್ಷ ಬಿ.ಜಿ.ಮೋಕ್ಷಿತ್, ವಕೀಲ ಎಂ.ಬಿ.ಜಯಕೀರ್ತಿ, ಆಯೋಜಕರಾದ ಆದಿತ್ಯ, ರಾಕೇಶ್, ಶಾಲೆಯ ಆಡಳಿತ ಮಂಡಳಿಯ ಸೌಮ್ಯಶ್ರೀ, ರೇಷ್ಮಾ ಮತ್ತಿತರರು ಉಪಸ್ಥಿತರಿದ್ದರು.

See also  ಕೇರಳ: ಮರ ಕಡಿದು ಹಕ್ಕಿಗಳ ಸಂಸಾರ ನಾಶ , ಗುತ್ತಿಗೆದಾರ ವಿರುದ್ಧ ಕೇಸ್ ಇಬ್ಬರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು