News Kannada
Thursday, September 28 2023
ಕ್ಯಾಂಪಸ್

ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನಲ್ಲಿ 36 ನೇ ವಿದ್ಯಾರ್ಥಿ ಪರಷತ್ ಉದ್ಘಾಟನೆ

36th Vidyarthi Parashad inaugurated Dr. Nitte Shankara Adyanthaya Memorial First Grade College
Photo Credit : News Kannada

ನಿಟ್ಟೆ: ‘ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ತಮ್ಮ ಅನುಕೂಲಕರವಾದ ವಾತಾವರಣದಿಂದ ಹೊರಬರಬೇಕು. ನಾವು ಡಿಜಿಟಲ್ ಯುಗದಲ್ಲಿ ಬದುಕುತಿದ್ದು ಪ್ರತಿಯೊಬ್ಬರೂ ಡಿಜಿಟಲ್ ಸಾಕ್ಷರತೆಯ ಕಡೆಗೆ ಗಮನಕೊಡಬೇಕು, ಜೊತೆಗೆ ಭಾರತ ದರ್ಶನದಂತಹ ಕಾರ್ಯಕ್ರಮಗಳನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಮೂಲಕ ಮುಂದಿನ ತಲೆಮಾರಿಗೆ ಭಾರತೀಯ ಅಂತಸಃತ್ವವನ್ನು ಪರಿಚಯಿಸಬೇಕು’ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಪ್ರೊ.ಡಾ| ಗೋಪಾಲ ಮುಗೇರಾಯ ಅವರು ಅಭಿಪ್ರಾಯಪಟ್ಟರು.

ಅವರು ಸೆ.೧೧ ರಂದು ಹಮ್ಮಿಕೊಳ್ಳಲಾಗಿದ್ದ ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಪರಿಷತ್ ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಕ್ಯಾಂಪಸ್ ಸಿಎಮ್&ಡಿ ನಿರ್ದೇಶಕ ಯೋಗೀಶ್ ಹೆಗ್ಡೆ ಅವರು ಮಾತನಾಡಿ ‘ನಾಯಕತ್ವ ಎನ್ನುವುದು ಕೇವಲ ವೇದಿಕೆಯ ಮೇಲೆ ಕುಳಿತುಕೊಳ್ಳುವುದಲ್ಲ, ತಮ್ಮ ಸಹವರ್ತಿಗಳನ್ನು ಕೂಡಿಕೊಂಡು ಮುಂದುವರೆಯುವ ಹೊಣೆಗಾರಿಕೆಯಿದೆ’ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ| ವೀಣಾಕುಮಾರಿ ಬಿ.ಕೆ. ಅವರು ವಿದ್ಯಾರ್ಥಿ ಪರಿಷತ್ ಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಇದೇ ಕಾರ್ಯಕ್ರಮದಲ್ಲಿ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಕೊಡಮಾಡುವ 2022-23 ನೇ ಸಾಲಿನ ಅತ್ಯುತ್ತಮ ಅಧ್ಯಾಪಕ ಪ್ರಶಸ್ತಿಯನ್ನು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀ ರಮೇಶ್ ಎಂ ಇವರಿಗೆ ನೀಡಿ ಸನ್ಮಾನಿಸಲಾಯಿತು. ಇವರ ಪ್ರಶಸ್ತಿ ಪತ್ರವನ್ನು ಐಕ್ಯೂಎಸಿ ಸಂಯೋಜಕರಾದ ಶ್ರೀ ಪ್ರಕಾಶ್ ವಾಚಿಸಿದರು. ಪ್ರಶಸ್ತಿಯು 25,000 ರೂ ನಗದು ಬಹುಮಾನವನ್ನು ಒಳಗೊಂಡಿತ್ತು.

ವಿದ್ಯಾರ್ಥಿ ಪರಿಷತ್ ನ ಕಾರ್ಯದರ್ಶಿ ಕುಮಾರಿ ಶ್ರೀಷಾ ಯು ಪೈ 2023-24 ನೇ ಸಾಲಿನ ವಿದ್ಯಾರ್ಥಿ ಪರಿಷತ್ ನ ಕಾರ್ಯಕ್ರಮಗಳನ್ನು ತಿಳಿಸಿದರು. ವಿದ್ಯಾರ್ಥಿ ಪರಿಷತ್ ನ ಸಂಯೋಜಕಿ ಶ್ರೀಮತಿ ರೇಖಾ ಅವರು ಅತಿಥಿ-ಗಣ್ಯರನ್ನು ಸ್ವಾಗತಿಸಿದರು.

ವಿದ್ಯಾರ್ಥಿ ಪರಿಷತ್ ಮುಖ್ಯ ಸಂಯೋಜಕಿಯಾದ ಶ್ರೀಮತಿ ಮಾಲಿನಿ ಜೆ.ರಾವ್ ವಂದನಾರ್ಪಣೆ ನೆರೆವೇರಿಸಿದರು ಹಾಗೂ ವಿದ್ಯಾರ್ಥಿ ಕುಮಾರಿ ನೇಹಾ ಕಾರ್ಯಕ್ರಮವನ್ನು ನಿರೂಪಿಸಿದರು. ಉದ್ಘಾಟನಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

See also  ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಳ್ವಾಸ್‌ ಸಾಧನೆ ಶ್ಲಾಘನೀಯ, ಶ್ರೀಮಾ ಪ್ರಿಯದರ್ಶಿನಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು