ಮೈಸೂರು: ಹುಚ್ಚ ವೆಂಕಟ್ ಸೇನೆ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಲಿದ್ದು ಮುಂದೊಂದು ದಿನ ನಾನು ಪ್ರಧಾನಿಯಾಗುತ್ತೆನೆ. ಸಿನಿಮಾ ಇಲ್ಲದೇನೇ ನಾನು ಹೀರೋ . ಓಂ ಬ್ಯಾನರ್ ನಡಿ ನಿರ್ಮಿಸಿದ ಪೊರ್ಕಿ ಹುಚ್ಚ ವೆಂಕಟ್’ ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ ಎಂದು ಹುಚ್ಚ ವೆಂಕಟ್ ಸಂತಸ ವ್ಯಕ್ತಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.28ರಂದು ಮೈಸೂರಿನ ಸತ್ಯಂ ಚಿತ್ರಮಂದಿರದಲ್ಲಿ ಪೊರ್ಕಿ ಹುಚ್ಚ ವೆಂಕಟ್’ ಸಿನಿಮಾ ಬಿಡುಗಡೆಗೊಳ್ಳಲಿದೆ. ನನ್ನ ನಿರ್ದೇಶನದಲ್ಲಿ, ನಾನೇ ನಾಯಕ ನಟನಾಗಿ ಅಭಿನಯಿಸಿರುವ ಚಿತ್ರ ಇದಾಗಿದೆ.ಈ ಚಿತ್ರ ನನ್ನ ಜೀವನದ ನೈಜ ಘಟನೆಯಾಧಾರಿತವಾಗಿದೆ. ಸಿನಿಮಾವು ಸಮಾಜವನ್ನು ಬದಲಿಸುವ ಶಕ್ತಿಯನ್ನು ಹೊಂದಿದ್ದು ಕೇವಲ ಬುದ್ದಿವಾದವನ್ನು ಹೇಳಿಲ್ಲ ಬದಲಿಗೆ ಪ್ರೀತಿಯೆಂದರೇನು? ಎನ್ನುವ ನವಿರಾದ ದೃಶ್ಯಗಳು, ಪಂಚಿಂಗ್ ಡೈಲಾಗ್ ಗಳನ್ನು ಒಳಗೊಂಡಿದೆ . ಕನ್ನಡ ಸಿನಿಮಾ ನೋಡಿ ಬೆನ್ನು ತಟ್ಟಿ , ಕನ್ನಡ ಚಿತ್ರವನ್ನು ಚಿತ್ರಮಂದಿರದಲ್ಲಿಯೇ ನೋಡಿ ನಮಗೆ ಆರ್ಶಿವದಿಸಿ ಎಂದರು.
ಸುದ್ದಿಗೋಷ್ಠಿಯಲ್ಲಿ ಪೊರ್ಕಿ ಹುಚ್ಚ ವೆಂಕಟ್ ಚಿತ್ರದ ನಾಯಕಿ ರಚನಾ ಹಾಗೂ ಸೇನೆಯ ಕಾರ್ಯಕರ್ತರು ಹಾಜರಿದ್ದರು.