ಕೇವಲ ಎರಡೇ ಎರಡು ಚಿತ್ರದಿಂದ ಭರ್ಜರಿ ಯಶಸ್ಸು ಪಡೆದು ಕನ್ನಡದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಮುಂದಿನ ಚಿತ್ರ” ಭರ್ಜರಿ” ಶೂಟಿಂಗ್ ನಲ್ಲಿ ಬಿಝಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಭರ್ಜರಿ ಸಿನೆಮಾ ಭರ್ಜರಿಯಾಗಿ ಚಿತ್ರೀಕರಣಗೊಳ್ಳುತ್ತಿದ್ದು, ಇದೀಗ ಈ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಗಾಗಿ ಸುಮಾರು 22 ಅಡಿ ಎತ್ತರದ ಲಕ್ಷ್ಮೀ ನರಸಿಂಹ ಸ್ವಾಮಿ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
ಈ ಬೃಹತ್ ವಿಗ್ರಹ ನಿರ್ಮಾಣಕ್ಕಾಗಿ 25 ದಿನಗಳ ಕಾಲ, 20 ಜನ ಕಲಾವಿದರು ಕಲಾ ನಿರ್ದೇಶಕ ಶಿವಕುಮಾರ್ ಮಾರ್ಗದರ್ಶನದಲ್ಲಿ ನಿರ್ಮಿಸಿದ್ದಾರೆ.
ಈ ಚಿತ್ರದಲ್ಲಿ ಧ್ರುವ ಸರ್ಜಾ ಗೆ ನಾಯಕಿಯಾಗಿ ರಚಿತಾ ರಾಮ್ ಹಾಗೂ ಹರಿಪ್ರಿಯಾ ಕಾಣಿಸಿಕೊಳ್ಳಲಿದ್ದು, ರಂಘರಾಯಣ ರಘು, ತಾರಾ, ಅವಿನಾಶ್ ಮತ್ತಿತರರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.