News Kannada
Friday, June 02 2023
ಕೋಸ್ಟಲ್ ವುಡ್

ದುಬೈಯಲ್ಲಿ ಸದ್ದು ಮಾಡಿದ ಪಿಲಿ, ಹಾಡು ಬಿಡುಗಡೆ, ಪ್ರೀಮಿಯರ್ ಪ್ರದರ್ಶನ

Pili, song released, premiere in Dubai
Photo Credit : News Kannada

ದುಬೈ: ಎನ್‌ಎನ್‌ಎಂ ಪ್ರೊಡಕ್ಷ ನಲ್ಲಿ ದುಬೈಯ ಉದ್ಯೋಗಿಗಳಾದ ಆತ್ಮಾನಂದ ರೈ ಮತ್ತು ಭರತ್ ರಾಮ್ ರೈ ನಿರ್ಮಾಣದ ಭರತ್ ಭಂಡಾರಿ ಮತ್ತು ಸ್ವಾತಿ ಶೆಟ್ಟಿ ನಾಯಕ ನಾಯಕಿಯಾರಗಿ ಅಭಿನಯದ “ಪಿಲಿ” ತುಳು ಚಲನ ಚಿತ್ರದ ಯುಎಇಯ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಮತ್ತು ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಜ.೨೨ರಂದು ದುಬೈನಲ್ಲಿ ಜರಗಿತು.

ಫಾರ್ಚೂನ್ ಅಟ್ರ್ಯೂನ್‌ನಲ್ಲಿ ಬಿಡುಗಡೆ ಕಾರ್ಯಕ್ರಮವನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಫಾರ್ಚೂನ್ ಗ್ರೂಪ್ ಸಂಸ್ಥೆಯ ಅಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ, ಉದ್ಯಮಿ ಚಿತ್ರ ನಿರ್ಮಾಪಕರಾದ ಹರೀಶ್ ಶೇರಿಗಾರ್, ಹರೀಶ್ ಬಂಗೇರ, ಬಿಲ್ಲವಾಸ್ ಸಂಘದ ಸತೀಶ್ ಪೂಜಾರಿ, ಯಕ್ಷಗಾನ ಅಭ್ಯಾಸ ಕೇಂದ್ರದ ದಿನೇಶ್ ಶೆಟ್ಟಿ ಕೊಟಿಂಜರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ಫೆ. ೪,೫ ಮತ್ತು ೧೧ರಂದು ಬಿಡುಗಡೆಯಾಗುವ ಸಿನಿಮಾ ಪ್ರಿಮಿಯರ್ ಪ್ರದರ್ಶನದ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದ ಗಣ್ಯರು ಪಿಲಿ ಸಿನಿಮಾಕ್ಕೆ ಶುಭ ಹಾರೈಸಿದರು.

ಸಿನಿಮಾದ ಪ್ರಥಮ ಟಿಕೆಟನ್ನು ಸರ್ವೋತ್ತಮ ಶೆಟ್ಟಿಯವರು ಖರೀದಿಸಿ ಟಿಕೆಟ್ ಖರೀದಿಗೆ ಚಾಲನೆ ನೀಡಿದರು. ಪ್ರವೀಣ್‌ಕುಮಾರ್ ಶೆಟ್ಟಿಯವರು ಸಿನಿಮಾದ ಒಂದು ಹಾಡನ್ನು ಬಿಡು ಗಡೆಗೊಳಿಸಿದರು.

ವೇದಿಕೆಯಲ್ಲಿ ನಟ, ನಿರ್ದೇಶಕ ವಿಜಯಕುಮಾರ್ ಕೋಡಿಯಾಲ್ ಬೈಲ್, ನಾಯಕ ನಾಯಕಿಯರಾದ ಭರತ್ ಭಂಡಾರಿ, ಸ್ವಾತಿ ಶೆಟ್ಟಿ, ನಿರ್ಮಾ ಪಕ ಆತ್ಮಾನಂದ ರೈ ದುಬೈ ಉಪಸ್ಥಿತ ರಿದ್ದರು.

ಗಿರೀಶ್ ನಾರಾಯಣ್ ನೇತೃತ್ವದ ಹುಲಿ ವೇಷದ ಕುಣಿತ ಕಾರ್ಯಕ್ರಮಕ್ಕೆ ಮೆರುಗನ್ನು ತಂದಿತು. ರಾಜೇಶ್ ಕುತ್ತಾರ್ ಕಾರ್ಯಕ್ರಮ ನಿರ್ವ ಹಿಸಿದರು. ನಿರ್ಮಾಪಕ ಆತ್ಮಾನಂದ ರೈ ವಂದಿಸಿದರು.

ಸಿನಿಮಾದಲ್ಲಿ ಮಣಿಕಾಂತ್ ಕದ್ರಿ ಯವರ ಸಂಗೀತದಲ್ಲಿ ನಾಲ್ಕು ಹಾಡು ಗಳಿವೆ. ಪಟ್ಲ ಸತೀಶ್ ಶೆಟ್ಟಿ, ನಿಹಾಲ್ ತಾವ್ರ್ರೊ ಅನುರಾಧ ಭಟ್, ಕಲಾವತಿ, ಉಜ್ವಲ ಆಚಾರ್, ಮುಂತಾದವರು ಹಾಡಿದ್ದಾರೆ.

ಈ ಚಿತ್ರದ ತಾರಾಗಣದಲ್ಲಿ ವಿಜಯ್‌ಕುಮಾರ್ ಕೊಡಿಯಾಲ್ ಬೈಲ್ ಮುಖ್ಯ ಪಾತ್ರದಲ್ಲಿ ಕಾಣಿಸಿ ಕೊಂಡಿದ್ದಾರೆ. ತ್ರಿಷಾ ಶೆಟ್ಟಿ, ಕೃತಿ ಶೆಟ್ಟಿ, ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂ ಜೂರು, ವಿಸ್ಮಯ ವಿನಾಯಕ್, ಸ್ವರಾಜ್ ಶೆಟ್ಟಿ, ಸಂತೋಷ್ ಶೆಟ್ಟಿ, ರೂಪ ಡಿ. ಶೆಟ್ಟಿ, ನಮಿತಾ ಕೂಳೂ ರು, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ ಸೇರಿದಂತೆ ಹಲವಾರು ಪ್ರಭುದ್ಧ ಕಲಾವಿದರು ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದಾರೆ.

ಪಟ್ಲ ಸತೀಶ್ ಶೆಟ್ಟಿಯವರ ಕಂಠಸಿರಿಯಲ್ಲಿ ಮೂಡಿ ಬಂದ ಶೀರ್ಷಿಕೆ ಗೀತೆಯು ಬಿಡುಗಡೆಗೊಂಡಿದ್ದು ಎಲ್ಲಾ ಕಡೆ ಸದ್ದು ಮಾಡುತ್ತಿದೆ.

ಗಣೇಶ್ ನೀರ್ಚಾಲ್‌ರ ಸಂಕಲನ ಈ ಚಿತ್ರಕ್ಕಿದೆ. ಸುಂದರ ವಾದ ನಾಲ್ಕು ಹಾಡುಗಳಿಗೆ ಮಯೂರ್ ಆರ್. ಶೆಟ್ಟಿ, ಡಿ.ಬಿ.ಸಿ ಶೇಖರ್ ಮತ್ತು ಕೆ.ಕೆ. ಪೇಜಾವರ್ ಸಾಹಿತ್ಯ ಬರೆದಿದ್ದಾರೆ. ಈ ಚಿತ್ರಕ್ಕೆ ಸಂದೇಶ್ ಬಿಜೈ ಸಂಭಾಷಣೆ ಬರೆದಿದ್ದು, ನಿರ್ದೇಶನ ತಂಡದಲ್ಲಿ ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ, ಸಂದೇಶ್ ಬಿಜೈ ಮುಂತಾ ದವರು ಕಾರ್ಯನಿರ್ವಹಿಸಿದ್ದಾರೆ. ಪ್ರಚಾರ ಕಲೆ ವಿನ್ಯಾಸ ದೇವಿ ರೈಯವರದ್ದಾಗಿದೆ.

See also  ನ.11ರಂದು ಲಾಸ್ಟ್ ಬೆಂಚ್ ಕರಾವಳಿಯಾದ್ಯಂತ ತೆರೆಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು