News Kannada
Monday, December 11 2023
ಮನರಂಜನೆ

ಸಂಕಷ್ಟ ಸ್ಥಿತಿಯಲ್ಲಿದ್ದ ಜನಪ್ರಿಯ ನಿರ್ಮಾಪಕ ದೊರೈ ನಿಧನ

Popular producer Durai passes away
Photo Credit : News Kannada

ಜನಪ್ರಿಯ ನಿರ್ಮಾಪಕರಾಗಿದ್ದು ಬಳಿಕ ಹಣ ಆಸ್ತಿ ಕಳೆದುಕೊಂಡು ಚಿಕಿತ್ಸೆಗೂ ಹಣವಿಲ್ಲದೆ ಪರದಾಡಿದ್ದ ನಿರ್ಮಾಪಕ ದೊರೈ ನಿಧನ ಹೊಂದಿದ್ದಾರೆ. ಹಣ ಆಸ್ತಿ ಕಳೆದುಕೊಂಡು ನಿರ್ಗತಿಕರಂತಾಗಿದ್ದ ದೊರೈಗೆ ನಟ ರಜನೀಕಾಂತ್ ಸೇರಿ ಹಲವರು ಸಹಾಯ ಮಾಡಿದ್ದರು. ಆದರೆ ಡಯಾಬಿಟೀಸ್ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ದೊರೈ ಅಕ್ಟೋಬರ್ 2ರ ತಡರಾತ್ರಿ ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ದೊರೈ, 90 ಹಾಗೂ 2000 ದಶಕದಲ್ಲಿ ಜನಪ್ರಿಯ ನಿರ್ಮಾಪಕ, ವಿತರಕ ಹಾಗೂ ಸಿನಿಮಾ ಫೈನ್ಯಾನ್ಶಿಯರ್ ಆಗಿದ್ದರು. ವಿಕ್ರಂ-ಸೂರ್ಯ ನಟಿಸಿದ್ದ ಸೂಪರ್ ಹಿಟ್ ಸಿನಿಮಾ ‘ಪಿತಾಮಗನ್’, ವಿಜಯ್​ಕಾಂತ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಗಜೇಂದ್ರ’, ಸತ್ಯರಾಜ್ ನಟನೆಯ ‘ಎನ್ನಮ್ಮ ಕನ್ನೆ’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಜೊತೆಗೆ ರಜನೀಕಾಂತ್​ರ ಜನಪ್ರಿಯ ಸಿನಿಮಾ ‘ಬಾಬಾ’ಕ್ಕೆ ಫೈನ್ಯಾನ್ಸ್ ಮಾಡಿದ್ದರು, ಹಾಗೂ ವಿಕ್ರಂ ಸ್ಟಾರ್ ಆಗಲು ಕಾರಣವಾದ ‘ಸೇತು’ ಸಿನಿಮಾಕ್ಕೂ ಫೈನಾನ್ಸ್ ಮಾಡಿದ್ದರು.

ದೊರೈ ನಿಧನಕ್ಕೆ ನಟ, ರಾಜಕಾರಣಿ ವಿಜಯ್​ಕಾಂತ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

See also  ಪತ್ನಿಯಿಂದ ಅಧಿಕೃತವಾಗಿ ದೂರವಾದ ಬಿಗ್‌ ಬಾಸ್‌ ಖ್ಯಾತಿಯ ಕಿರಿಕ್‌ ಕೀರ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು