News Kannada
Wednesday, May 31 2023
ಮನರಂಜನೆ

ಬೇರ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿದ ಸ್ವರಾಜ್ ಶೆಟ್ಟಿ

Swaraj Shetty, who played a different role in Bera
Photo Credit : News Kannada

ಬಂಟ್ವಾಳ: ಗುರುವ ಪಾತ್ರದ ಮೂಲಕ ಜನರ ಮನಸ್ಸೇಳೆದ ಸ್ವರಾಜ್ ಶೆಟ್ಟಿಯವರು ಎಸ್.ಎಲ್.ವಿ. ಕಲರ್ಸ್ ಲಾಂಚನದಲ್ಲಿ ವಿನು ಬಳಂಜರವರ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಬೇರ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಸ್ವರಾಜ್ ಶೆಟ್ಟಿಯವರು ಹಲವಾರು ತುಳು ಸಿನಿಮಾದಲ್ಲಿ ನಟಿಸಿದ್ದಾರೆ. ನಟನೆ ರಂಗಕ್ಕೆ ಕಾಲಿಟ್ಟು ಇದಾಗಲೇ ಹನ್ನೆರಡು ವರ್ಷ ಕಳೆದಿದೆ. ನಾಯಕ ನಟನಾಗಿ ಕೃಷ್ಣ ತುಳಸಿ ಧಾರವಾಹಿಯಲ್ಲಿ ನಟಿಸಿದ್ದಾರೆ. ಖಳನಾಯಕನಾಗಿ ರಾಧಾ ಕಲ್ಯಾಣದಲ್ಲಿ ಹಾಗೂ ಅಣ್ಣ ತಂಗಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. ಓಂ ಪ್ರಕಾಶ್ ನಿರ್ಮಾಣದ ಹುಚ್ಚ 2 ಸಿನಿಮಾದಲ್ಲಿ ಖಳನಾಯಕನಾಗಿ ಅಭಿನಯಿಸಿದ್ದಾರೆ. ಕಾಂತಾರ ಚಿತ್ರದಲ್ಲಿ ಗುರುವ ಪಾತ್ರದಲ್ಲಿ ಅತ್ಯದ್ಭುತವಾಗಿ ಕಾಣಿಸಿಕೊಂಡಿದ್ದಾರೆ.

ಇವರು ಕನ್ನಡ ಚಿತ್ರದಲ್ಲಿ ಮಾತ್ರವಲ್ಲ ತುಳು, ತಮಿಳು ಚಿತ್ರದಲ್ಲೂ ನಟಿಸಿದ್ದಾರೆ. ರಾಜ್ ಬಿ. ಶೆಟ್ಟಿರವರ ಒಂದು ಮೊಟ್ಟೆಯ ಕಥೆ ಮತ್ತು ತುಳುನಾಡಿನ ಯಶಸ್ವಿ ನಾಟಕವಾದ ಶಿವದೂತ ಗುಳಿಗೆ ನಾಟಕದ ಗುಳಿಗನ ಪಾತ್ರದಲ್ಲಿ ನಟಿಸಿದ್ದಾರೆ. ಬರ್ಕೆ, ಮಾಜಿ ಮುಖ್ಯಮಂತ್ರಿ, ಜೈ ಮಾರುತಿ ಯುವಕ ಮಂಡಲ, ಪಿಳಿ, ಪುಳಿಮುಂಚಿ ಮುಂತಾದ ತುಳು ಸಿನಿಮಾದಲ್ಲಿ ನಟಿಸಿದ್ದಾರೆ. ಇದೀಗ ಇವರು ಬೇರ ಚಿತ್ರದಲ್ಲಿ ಒಂದು ವಿಭಿನ್ನ ಪಾತ್ರದ ಮೂಲಕ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ಜೋಡಿಯಾಗಿ ಹರ್ಷಿಕಾ ಪೂಣಚ್ಚ ರವರು ನಟಿಸಿದ್ದಾರೆ.

See also  ಪೂಂಡಿ ಜಲಾಶಯ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲು ತಮಿಳುನಾಡು ಸರ್ಕಾರ ನಿರ್ಧಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು