News Kannada
Wednesday, November 29 2023
ಶಿವಮೊಗ್ಗ

ಶಿವಮೊಗ್ಗದಲ್ಲಿ ಮತ್ತೆ ಕೋಮುದಳ್ಳುರಿ, ಮಿಲಾದ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ, 144 ಸೆಕ್ಷನ್‌ ಜಾರಿ

Communal riots again in Shimoga: Stone pelting on Eid Milad procession
Photo Credit : News Kannada

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿ ನಡೆದಿದೆ, ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಿದ್ದು, 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ಭಾನುವಾರ ಸಂಜೆ ನಡೆಯುತ್ತಿದ್ದ ಈದ್‌ ಮಿಲಾದ್‌ ಮೆರವಣಿಗೆ ವೇಳೆಯೂ ಕಲ್ಲು ತೂರಾಟದ ಘಟನೆ ನಡೆದಿದೆ. ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಸಾಗುವ ವೇಳೆ ಘರ್ಷಣೆ ಕಲ್ಲು ತೂರಾಟದ ಘಟನೆ ನಡೆದಿದ್ದು, ಮೆರವಣಿಗೆ ಸಾಗುತ್ತಿದ್ದ ಜನರು ದಿಕ್ಕಾ ಪಾಲಾಗಿ ಓಡಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಬೃಹತ್‌ ಮಟ್ಟದ ಈದ್ ಮಿಲಾದ್‌ ಅಂಗವಾಗಿ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ರಾಗಿಗುಡ್ಡದಿಂದ ಒಂದು ಮುಸ್ಲಿಂ ಗುಂಪು ಗಾಂಧಿ ಬಜಾರ್ ನಿಂದ ಹೊರಡುವ ಮೆರವಣಿಗೆ ಹೊರಡುವ ಗುಂಪನ್ನು ಸೇರಿಕೊಳ್ಳಲು ಚಿಕ್ಕದಾಗಿ ಮೆರವಣಿಗೆ ಹೋಗಲಾಗುತಿತ್ತು. ಇನ್ನು ರಾಗಿಗುಡ್ಡದಿಂದ ಮೆರವಣಿಗೆ ಹೊರಟಾಗ ಹಿಂದೂ ದೇಗುಲದ ಬಳಿ ಮೆರವಣಿಗೆ ಹಿಂಬದಿಯ ಯುವಕನ ಜೊತೆ ಮಾತಿನ ಚಕ್ರಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಉಂಟಾದ ಮಾತಿನ ಚಕಮಕಿಯಿಂದಾಗಿ ಮುಂದೆ ಸಾಗಿದ್ದ ಮೆರವಣಿಗೆ ಮರಳಿ ಬಂದಿದೆ.

ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ಘರ್ಷಣೆ ಹಂತಕ್ಕೆ ತಲುಪಿದೆ. ಈ ವೇಳೆ ಕೆಲ ವ್ಯಕ್ತಿಗಳು ಈದ್‌ ಮಿಲಾದ್‌ ಮೆರವಣಿಗೆ ಹೊರಟಿದ್ದ ಗುಂಪಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎನ್ನಲಾಗಿದೆ. ಎರಡು ಕೋಮಿನ ಯುವಕರ ಗುಂಪಿನಿಂದ ಕಲ್ಲುತೂರಾಟ ಮಾಡಲಾಗಿದೆ. ಕಲ್ಲುತೂರಾಟ ಹಿನ್ನೆಲೆ ಹಲವು ಕಾರು, ಬೈಕು, ಮನೆಗಳ ಕಿಟಕಿ ಗಾಜುಗಳು ಜಖಂ ಆಗಿವೆ. ಕಲ್ಲು ತೂರಾಟದಿಂದ ಹಲವರಿಗೆ ಗಾಯಗಳೂ ಉಂಟಾಗಿವೆ.

See also  ಶಿವಮೊಗ್ಗ: ಮಾಚೇನಹಳ್ಳಿ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ, ಸಹಕರಿಸಲು ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು