ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿ ನಡೆದಿದೆ, ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ.
ಭಾನುವಾರ ಸಂಜೆ ನಡೆಯುತ್ತಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆಯೂ ಕಲ್ಲು ತೂರಾಟದ ಘಟನೆ ನಡೆದಿದೆ. ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಸಾಗುವ ವೇಳೆ ಘರ್ಷಣೆ ಕಲ್ಲು ತೂರಾಟದ ಘಟನೆ ನಡೆದಿದ್ದು, ಮೆರವಣಿಗೆ ಸಾಗುತ್ತಿದ್ದ ಜನರು ದಿಕ್ಕಾ ಪಾಲಾಗಿ ಓಡಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಬೃಹತ್ ಮಟ್ಟದ ಈದ್ ಮಿಲಾದ್ ಅಂಗವಾಗಿ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ರಾಗಿಗುಡ್ಡದಿಂದ ಒಂದು ಮುಸ್ಲಿಂ ಗುಂಪು ಗಾಂಧಿ ಬಜಾರ್ ನಿಂದ ಹೊರಡುವ ಮೆರವಣಿಗೆ ಹೊರಡುವ ಗುಂಪನ್ನು ಸೇರಿಕೊಳ್ಳಲು ಚಿಕ್ಕದಾಗಿ ಮೆರವಣಿಗೆ ಹೋಗಲಾಗುತಿತ್ತು. ಇನ್ನು ರಾಗಿಗುಡ್ಡದಿಂದ ಮೆರವಣಿಗೆ ಹೊರಟಾಗ ಹಿಂದೂ ದೇಗುಲದ ಬಳಿ ಮೆರವಣಿಗೆ ಹಿಂಬದಿಯ ಯುವಕನ ಜೊತೆ ಮಾತಿನ ಚಕ್ರಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಉಂಟಾದ ಮಾತಿನ ಚಕಮಕಿಯಿಂದಾಗಿ ಮುಂದೆ ಸಾಗಿದ್ದ ಮೆರವಣಿಗೆ ಮರಳಿ ಬಂದಿದೆ.
ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ಘರ್ಷಣೆ ಹಂತಕ್ಕೆ ತಲುಪಿದೆ. ಈ ವೇಳೆ ಕೆಲ ವ್ಯಕ್ತಿಗಳು ಈದ್ ಮಿಲಾದ್ ಮೆರವಣಿಗೆ ಹೊರಟಿದ್ದ ಗುಂಪಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎನ್ನಲಾಗಿದೆ. ಎರಡು ಕೋಮಿನ ಯುವಕರ ಗುಂಪಿನಿಂದ ಕಲ್ಲುತೂರಾಟ ಮಾಡಲಾಗಿದೆ. ಕಲ್ಲುತೂರಾಟ ಹಿನ್ನೆಲೆ ಹಲವು ಕಾರು, ಬೈಕು, ಮನೆಗಳ ಕಿಟಕಿ ಗಾಜುಗಳು ಜಖಂ ಆಗಿವೆ. ಕಲ್ಲು ತೂರಾಟದಿಂದ ಹಲವರಿಗೆ ಗಾಯಗಳೂ ಉಂಟಾಗಿವೆ.