News Kannada
Saturday, April 01 2023

ಆರೋಗ್ಯ

ಸುರಕ್ಷಿತ, ಶಕ್ತಿವರ್ಧನೆಯ ಪೇಯ ಎಳನೀರು

Photo Credit :

ಸುರಕ್ಷಿತ, ಶಕ್ತಿವರ್ಧನೆಯ ಪೇಯ ಎಳನೀರು

ಆರೋಗ್ಯಪಾಲನೆ ಮತ್ತು ಚೈತನ್ಯವೃದ್ಧಿಗೆ ನೈಸರ್ಗಿಕವಾಗಿ ದೊರೆಯುವ ಶಕ್ತಿವರ್ಧಕ ಪಾನೀಯ ಅಂದರೆ ಎಳನೀರು. ಆರೋಗ್ಯ ಸರಿ ಇರಲಿ ಅಥವಾ ಇಲ್ಲದಿರಲಿ, ಆರೋಗ್ಯದ ಬಗ್ಗೆ ಯಾರು ಹೆಚ್ಚು ಕಾಳಜಿ ಹೊಂದಿರುತ್ತಾರೋ ಅಂಥವರಿಗೆ ಇದು ನಿತ್ಯದ ಪಾನೀಯವಾಗಿದೆ ಎಂದರೆ ಅತಿಶಯೋಕ್ತಿಯಲ್ಲ.

ಇಡೀ ಕುಟುಂಬ ಸದಸ್ಯರ ಅಗತ್ಯ ಪೌಷ್ಠಿಕಾಂಶದ ಬೇಡಿಕೆಗಳನ್ನು ಈಡೇರಿಸಲು ಬಯಸುವ, ಕುಟುಂಬ ಸ್ವಾಸ್ಥ್ಯದ ಬಗ್ಗೆ ವಿಶೇಷ ಕಾಳಜಿಯುಳ್ಳ ವ್ಯಕ್ತಿಗಳಿಗೆ ಎಳನೀರು ದಿನನಿತ್ಯದ ಅಗತ್ಯವಾಗಿದೆ. ಯಾವುದೇ ರಾಸಾಯನಿಕಗಳನ್ನು ಒಳಗೊಂಡಿರದ, ಕೃತಕಬಣ್ಣ, ವಾಸನೆಗಳಿಂದ ಮುಕ್ತವಾದ, ಆಬಾಲ ವೃದ್ಧರಿಗೆ ನೀಡಬಹುದಾದ, ಅತ್ಯಂತ ಸುರಕ್ಷಿತ, ಶಕ್ತಿವರ್ಧನೆಯ ಪೇಯ ಈ ಎಳನೀರು.

ಎಳನೀರಿನ ವಿಶೇಷ ಗುಣಗಳು:
*ಯಾವದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ.

*ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ.

*ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

*ಆಹ್ಲಾದಕರ ಪಾನೀಯ ಮತ್ತು ಒಂದು ಬಾಳೆ ಹಣ್ಣಿನಲ್ಲಿರುವುದಕ್ಕಿಂತ ಹೆಚ್ಚಿನ ಪ್ರಮಾಣದ ಪೊಟಾಷಿಯಂ ಒಳಗೊಂಡಿದೆ.

*ಆಹ್ಲಾದ, ಶಕ್ತಿನೀಡವ ಪಾನೀಯಗಳಿಗಿಂತ ಕಡಿಮೆ ಸೋಡಿಯಂ ಹೊಂದಿದೆ.

*ಹೃದಯಕ್ಕೆ ಸಂಬಂಧಿಸಿದ ತೊಂದರೆಗಳು ಮತ್ತು ದೇಹದ ಜಲಾಂಶ ನಷ್ಟವಾಗುವಿಕೆಯನ್ನು ಕಡಿಮೆ ಮಾಡುತ್ತದೆ.

*ಸಂಸ್ಕರಿಸಿದ ಸಕ್ಕರೆಗೆ ಬದಲಾಗಿ ನೈಸರ್ಗಿಕ ಸಕ್ಕರೆ ಅಂಶ ಮತ್ತು ರುಚಿ ಹೊಂದಿದೆ.

*ಎಳನೀರನ್ನು ಕುಡಿಯುವುದರಿಂದ ರಕ್ತಸಂಚಾರ ಸರಾಗವಾಗಿ ನಡೆಯುತ್ತದಾದ್ದರಿಂದ ಇದು ಜೀವಜಲವೂ ಹೌದು.

*ಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿ ಹೋದವರ ಶರೀರಕ್ಕೆ ತಂಪು ನೀಡಿ ದೇಹದ ಸಮತೋಲನವನ್ನು ಕಾಪಾಡುತ್ತದೆ.

*ದಿಢೀರ್ ಚೇತೋಹಾರಿ ಮತ್ತು ಅತ್ಯಂತ ಶಕ್ತಿದಾಯಕವಾದ್ದರಿಂದ ಅಶಕ್ತರಿಗೆ ಹೊಸ ಚೈತನ್ಯವನ್ನು ತುಂಬುತ್ತದೆ ಮತ್ತು ಹಣ್ಣಿನ ರಸಗಳಿಗಿಂತಲೂ ಹೆಚ್ಚು ಆರೋಗ್ಯಕರವಾಗಿದೆ.

*ದಿನಪೂರ್ತಿ ಲವಲವಿಕೆಯಿಂದ ಕಾರ್ಯಮಗ್ನವಾಗಿರಲು ಉಪಯುಕ್ತ.

*ಸಂಪೂರ್ಣವಾಗಿ ಔಷಧೀಯ ಗುಣಧರ್ಮಗಳನ್ನು ಒಳಗೊಂಡಿರುವುದರಿಂದ ಎಳನೀರನ್ನು ನಿಯಮಿತವಾಗಿ ಬಳಸಬಹುದು.

ಎಳನೀರಿನ ಔಷಧೀಯ ಗುಣಗಳು:

*ಮೂತ್ರಲ ಮತ್ತು ಮೂತ್ರದಸೋಂಕನ್ನು ತಡೆಗಟ್ಟುವ ಗುಣ ಹೊಂದಿರುವ ಕಾರಣ ಕಿಡ್ನಿಕಲ್ಲುಗಳ ಸಂಭವವನ್ನು ಕಡಿಮೆ ಮಾಡುತ್ತದೆ.

*ಕರುಳಿನ ಕಾರ್ಯವನ್ನು ಮತ್ತು ಪಚನಶಕ್ತಿಯನ್ನು ಹೆಚ್ಚಿಸುತ್ತದೆ. ಆದ್ದರಿಂದ ಶಿಶುಗಳಲ್ಲಿ ಪಚನಕ್ರಿಯೆಗೆ ಯಾ ಕರುಳಿನ ಸಮಸ್ಯೆಗೆ ತುಂಬಾ ಪರಿಣಾಮಕಾರಿಯಾಗಿದೆ.

*ಆ್ಯಂಟಿಫಂಗಲ್, ಆ್ಯಂಟಿವೈರಲ್, ಆ್ಯಂಟಿಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ.

*ಅತಿಸಾರಭೇದಿಯಿಂದ ಅಥವಾ ಇನ್ನಾವದೇ ಕಾರಣಗಳಿಂದ ಶರೀರದಲ್ಲಿ ನೀರಿನಂಶದ ಕೊರತೆ ನೀಗಿಸಲು ಉಪಯುಕ್ತ. ಅಲ್ಲದೇ ಮಲಬದ್ಧತೆ ನಿವಾರಣೆಗೂ ಸಹಾಯಕ.

*ದೇಹವನ್ನು ತಂಪಾಗಿಸುವ ಗುಣಹೊಂದಿರುವುದರಿಂದ ಬೇಸಿಗೆಯಲ್ಲಿ ಉಂಟಾಗುವ ಬೆವರುಸಾಲೆ, ಮೀಸಲ್ಸ್, ದಡಾರಗಳಿಂದ ಉಂಟಾಗುವ ಬೊಬ್ಬೆ (ಗುಳ್ಳೆ)ಗಳಿಗೆ ಎಳನೀರು ಲೇಪಿಸುವುದರಿಂದ ಕಡಿಮೆಯಾಗುತ್ತದೆ.

*ಹೊಟ್ಟೆಯಲ್ಲಿರುವ ಕ್ರಿಮಿಗಳನ್ನು ನಾಶಮಾಡುತ್ತದೆ.

*ಎಳನೀರಿನಲ್ಲಿರುವ ಸಲೈನ್ ಮತ್ತು ಅಲ್ಬುಮಿನ್ ಕಾಲರಾ ರೋಗಕ್ಕೆ ಅತ್ಯುಪಯುಕ್ತ ಔಷಧಿ.

*ಖನಿಜ ವಿಷವನ್ನು ದೇಹದಿಂದ ಹೊರದಬ್ಬುತ್ತದೆ.

See also  ಬೊಜ್ಜು ಕಡಿಮೆ ಮಾಡಿಕೊಳ್ಳಲು ಹೀಗೇ ಆಹಾರ ಸೇವಿಸಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು