News Kannada
Sunday, March 26 2023

ಆರೋಗ್ಯ

ಬಾಳೆಹಣ್ಣು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

Photo Credit :

ಬಾಳೆಹಣ್ಣು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಎಲ್ಲ ಕಾಲದಲ್ಲಿಯೂ ಸುಲಭವಾಗಿ ಮತ್ತು ಕೈಗೆ ಎಟಕುವ ಬೆಲೆಯಲ್ಲಿ ಸಿಗುವ ಒಂದೇ ಒಂದು ಹಣ್ಣು ಎಂದರೆ ಅದು ಬಾಳೆಹಣ್ಣು ಮಾತ್ರ. ಈ ಬಾಳೆಹಣ್ಣನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಇದರಲ್ಲಿ ಹತ್ತು ಹಲವು ಆರೋಗ್ಯಕ್ಕೆ ಪೂರಕವಾದ ಗುಣಗಳಿದ್ದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಬಾಳೆಹಣ್ಣಿನಲ್ಲಿ ಆರೋಗ್ಯಕಾರಿ, ಶಕ್ತಿವರ್ಧಕ ಗುಣಗಳಿದ್ದು ಇದು ನಮ್ಮ ಶರೀರದ ಹಿತವನ್ನು ಸದಾ ಕಾಪಾಡುತ್ತದೆ. ಹೇರಳವಾದ ವಿಟಮಿನ್‍ಗಳು, ಕಾರ್ಬೋಹೈಡ್ರೇಟ್ಸ್, ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂ ಗುಣಗಳಿದ್ದು, ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯಾಗಿದೆಯಂತೆ.

ಇನ್ನು ಬಾಳೆಹಣ್ಣನ್ನು ಕಿತ್ತಳೆ ಹಣ್ಣಿನೊಂದಿಗೆ ಸೇರಿಸಿ ತಿಂದರೆ ದೇಹದಲ್ಲಿ ರಕ್ತದ ಉತ್ಪಾದನೆ ಹೆಚ್ಚಾಗಿ ರಕ್ತಹೀನತೆಗೆ ಪರಿಹಾರ ಸಿಗಲಿದೆ. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ. ಹೆಚ್ಚಿನ ಪೊಟ್ಯಾಷಿಯಂ ಅಂಶ ಇದರಲ್ಲಿ ಇರುವುದರಿಂದ ಮೂಳೆಗಳಿಗೆ ಬಲ ನೀಡುತ್ತದೆ. ಆದ್ದರಿಂದ ಸದಾ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸುತ್ತಿರಬೇಕು. ಮತ್ತೊಂದು ವಿಚಾರ ಏನೆಂದರೆ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.

ಮಾನಸಿಕ ಖಿನ್ನತೆಗೂ ಬಾಳೆಹಣ್ಣು ರಾಮಬಾಣವಾಗಿದ್ದು, ಇದರಲ್ಲಿರುವ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡಲು ಸಹಕರಿಸುತ್ತದೆಯಂತೆ. ಜತೆಗೆ ಹೀಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮೆದುಳಿಗೆ ಆಮ್ಲಜನಕದ ಪೂರೈಕೆ ಮಾಡಿ ಮೆದುಳು ಕ್ರಿಯಾಶೀಲವಾಗಿರುವಂತೆ ನೋಡಿಕೊಳ್ಳುತ್ತದೆ. ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತಿದೆ.

ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗವು ಹತ್ತಿರ ಸುಳಿಯದಂತೆ ನೋಡಿಕೊಳ್ಳಬಹುದು ಎಂಬುದನ್ನು ಸಂಶೋಧನೆ ಹೇಳಿದೆ. ಹಣ್ಣಿನ ಜತೆಗೆ ಸಿಪ್ಪೆಯಲ್ಲಿ ವಿಟಮಿನ್ ಎ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಅಷ್ಟೇ ಅಲ್ಲದೆ, ದೇಹದಲ್ಲಿ ರೋಗ ಪ್ರತಿರೋಧ ಶಕ್ತಿ ಹೆಚ್ಚಿಸುವ ಸಾಮರ್ಥ್ಯ ಇರುವ ಆಂಟ್ಯಿ ಓಕ್ಷಿಡೆಂಟ್ ಇದ್ದು ವಿಟಮಿನ್ ಬಿ, ಬಿ6 ಹೇರಳವಾಗಿದೆ. ಕಣ್ಣಿನ ಆರೋಗ್ಯ ಕಾಪಾಡುವ ಲುಟೈನ್ ಎಂಬ ಪದಾರ್ಥವೂ ಇದೆ. (ಆದರೆ ಬಾಳೆಹಣ್ಣಿನ ಸಿಪ್ಪೆಯನ್ನು ಉಪಯೋಗಿಸುವ ಮುನ್ನ ಎಚ್ಚರವಾಗಿರುವುದು ಒಳಿತು ಕಾರಣ ಇತ್ತೀಚೆಗೆ ಕಾಯಿಯನ್ನು ಹಣ್ಣು ಮಾಡಲು ರಾಸಾಯನಿಕವನ್ನು ಬಳಸುವುದರಿಂದ ಅದು ಸಿಪ್ಪೆಯಲ್ಲಿ ಉಳಿದುಕೊಂಡು ಮಾರಕವಾಗಿ ಪರಿಣಮಿಸುವ ಸಾಧ್ಯತೆಯೂ ಇದೆ.)

ಹಣ್ಣಿನಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುವುದರಿಂದ ಗರ್ಭಿಣಿ ಮಹಿಳೆಯರು ಪ್ರತಿದಿನ ಬಾಳೆ ಹಣ್ಣು ಸೇವಿಸುವುದನ್ನು ರೂಢಿ ಮಾಡಿಕೊಳ್ಳುವುದು ಒಳ್ಳೆಯದು. ಇದೆಲ್ಲದರ ನಡುವೆ ಮತ್ತೊಂದು ಉಪಕಾರವೂ ಇದೆ. ಅದೇನೆಂದರೆ ಸಾಮಾನ್ಯವಾಗಿ ಧೂಮಪಾನ ಚಟ ಹತ್ತಿಸಿಕೊಂಡು ಸಿಗರೇಟ್ ಸೇವನೆ ಮಾಡದೆ ಬದುಕೋದಕ್ಕೆ ಸಾಧ್ಯವಿಲ್ಲ ಎಂಬಂತೆ ಇರುವ ಜನರು ಸಿಗರೇಟ್‍ನಿಂದ ದೂರವಿರಲು ಬಾಳೆಹಣ್ಣನ್ನು ಉಪಯೋಗಿಸಬಹುದು ಎಂಬುದನ್ನು ಸಂಶೋಧನೆಯೊಂದು ಬೆಳಕಿಗೆ ತಂದಿದೆ.

ಈ ಬಗ್ಗೆ ಸಂಶೋಧನೆ ನಡೆಸಿದ ತಜ್ಞರು ಧೂಮಪಾನ ಮಾಡುವ ವ್ಯಸನಿಗೆ ಆತ ಸಿಗರೇಟು ಸೇದಬೇಕೆನಿಸಿದಾಗಲೆಲ್ಲ ಆತನಿಗೆ ಬಾಳೆಹಣ್ಣು ನೀಡತೊಡಗಿದರಂತೆ. ಹಾಗೆ ಬಾಳೆಹಣ್ಣು ಸೇವಿಸುತ್ತಾ ಬಂದಿದ್ದರಿಂದ ಆತನ ದೇಹದ ಮೇಲೆ ಹಣ್ಣಿನಲ್ಲಿದ್ದ ಬಿ-6, ಬಿ12, ಮ್ಯಾಂಗನೀಸ್ ಅಂಶಗಳು ಪರಿಣಾಮ ಬೀರಲು ಆರಂಭಿಸಿ ಆತನ ಮನಸ್ಸು ಉಲ್ಲಾಸಗೊಂಡು ಚಟ ಮುಕ್ತನಾದನಂತೆ.

See also  ಮಗುವಿನ ಜನನ ನ್ಯೂನತೆ ತಡೆಗೆ ಏನು ಮಾಡಬೇಕು?

ಸಾಮಾನ್ಯವಾಗಿ ನಾವು ಧೂಮಪಾನ ಮಾಡದಿದ್ದರೂ ಬೇರೆಯವರು ಮಾಡುತ್ತಿರುವ ಸಂದರ್ಭ ನಾವಿದ್ದರೆ ಪರೋಕ್ಷವಾಗಿ ನಮಗೂ ತೊಂದರೆ ತಪ್ಪಿದಲ್ಲ ಹೀಗಾಗಿ ಬಾಳೆಹಣ್ಣು ಸರ್ವರಿಗೂ ಸಹಕಾರಿಯಾಗುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು