News Kannada
Sunday, October 01 2023
ಆರೋಗ್ಯ

ಬೀದರ್ ಜನರಿಗೆ ಕಾಡುತ್ತಿದೆ ಮದ್ರಾಸ್ ಐ ಭಯ : 7 ಸಾವಿರ ಜನರಲ್ಲಿ ಸೋಂಕು ಪತ್ತೆ

Don't be afraid of the Madras Eye, be careful
Photo Credit : News Kannada

ಬೀದರ್: ರಾಜ್ಯದಲ್ಲಿ ಕಾಣಿಸಿಕೊಂಡಿರುವ ಮದ್ರಾಸ್‌ ಐ ಸೋಂಕು ಗಡಿ ಜಿಲ್ಲೆ ಬೀದರ್‌ನಲ್ಲಿ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, 20 ದಿನಗಳ ಅವಧಿಯಲ್ಲಿ 7 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು‌ ಕಾಣಿಸಿಕೊಂಡಿದೆ.

ಕಣ್ಣಿನ‌ ಉರಿ, ನಿರಂತರ ನೀರು ಬರುವುದು ಸೇರಿದಂತೆ ಇತರ ರೋಗ ಲಕ್ಷಣಗಳನ್ನ ಹೊಂದಿರುವ ಮದ್ರಾಸ್ ಐ ಅಥವಾ ಕಂಜಕ್ಟಿವೈಟಿಸ್ ಸೋಂಕು ದಿನದಿಂದ ಉಲ್ಬಣಗೊಳ್ಳುತ್ತಿದೆ.

ಚಿಕ್ಕಮಕ್ಕಳು ಹಾಗೂ ವಯಸ್ಕರಲ್ಲಿ ಹೆಚ್ಚಿನದಾಗಿ ರೋಗಲಕ್ಷಣ ಕಂಡುಬರುತ್ತಿದೆ ಎಂದು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಕಿರಣ ಪಾಟೀಲ ಹೇಳಿದ್ದಾರೆ.

ಬೀದರ್ ನಗರದ ಬ್ರಿಮ್ಸ್ ಜಿಲ್ಲಾಸ್ಪತ್ರೆಗೆ ಮದ್ರಾಸ್ ಐ ಸೋಂಕಿನ ರೋಗಲಕ್ಷಣ ಹೊಂದಿರುವ ಸುಮಾರು 150 ಕ್ಕೂ ಹೆಚ್ಚು ರೋಗಿಗಳು ಪ್ರತಿನಿತ್ಯ ಭೇಟಿ‌ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲೆಯ ಖಾಸಗಿ ಆಸ್ಪತ್ರೆ ಹಾಗೂ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಿಗು ರೋಗಿಗಳು ಭೇಟಿ ನೀಡಿ ಚಿಕಿತ್ಸೆಯನ್ನ ಪಡೆಯುತ್ತಿದ್ದಾರೆ.

ಶೇ.50 ರಷ್ಟು ಜನರಲ್ಲಿ ರೋಗಲಕ್ಷಣ

ಜಿಲ್ಲೆಯಲ್ಲಿ ಈಗಾಗಲೇ ಶೇ.50 ರಷ್ಟು ಜನರು ರೋಗ ಲಕ್ಷಣದಿಂದ ಗುಣಮುಖರಾಗಿದ್ದಾರೆ. ಸರಿ ಸುಮಾರು 4ರಿಂದ 5 ದಿನಗಳ ಕಾಲ ಕಾಣಿಸಿಕೊಳ್ಳುವ ಮದ್ರಾಸ್ ಐ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದೆ. ಹಾಗಾಗಿ, ಸೋಂಕು‌ಹೊಂದಿರುವ ವ್ಯಕ್ತಿಯು ರೋಗ ಲಕ್ಷಣ ಕಂಡು ಬಂದ ಮೇಲೆ ಮನೆಯಲ್ಲಿ ಇದ್ದು, ವಿಶ್ರಾಂತಿ ಪಡೆಯುವುದು ಉತ್ತಮ. ಇದರಿಂದ ರೋಗ ಹರಡದಂತೆ ತಡೆಯಬಹುದು ಎಂದು ಕಿರಣ ಪಾಟೀಲ ಮಾಹಿತಿ ನೀಡಿದ್ದಾರೆ.

See also  ಮೈಸೂರು: ದೇಹದ ಆರೋಗ್ಯ ಕಾಪಾಡುವ ಆಹಾರ ರೂಢಿಸಿಕೊಳ್ಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು