News Kannada
Friday, September 29 2023
ಆರೋಗ್ಯ

‘ಕುಚ್ಚಲಕ್ಕಿ’ ಸೇವನೆಯಿಂದ ಇದೆ ಆರೋಗ್ಯಕ್ಕೆ ಅತ್ಯುತ್ತಮ ಲಾಭ

boiled rice
Photo Credit : News Kannada

ಬಿಳಿ ಅಕ್ಕಿಯನ್ನು ಸಾಕಷ್ಟು ಪಾಲಿಷ್ ಮಾಡುವುದರಿಂದ ಅದರಲ್ಲಿರುವ ಪೋಷಕಾಂಶಗಳು ದೊಡ್ಡ ಪ್ರಮಾಣದಲ್ಲಿ ನಷ್ಟವಾಗಿರುತ್ತವೆ. ಆದರೆ, ಕುಚ್ಚಲಕ್ಕಿ ಹೆಚ್ಚು ಪಾಲಿಷ್‍ಗೆ ಒಳಗಾಗುವುದಿಲ್ಲ. ಇದರಿಂದಾಗಿ ಅಕ್ಕಿಯಲ್ಲಿ ಆರೋಗ್ಯಕಾರಿಯಾದ ಪೋಷಕಾಂಶಗಳು ಹಾಗೆಯೇ ಉಳಿದುಕೊಂಡಿರುತ್ತವೆ.

ಪೋಷಕಾಂಶಗಳ ಕಣಜ: ಕುಚ್ಚಲಕ್ಕಿಯಲ್ಲಿ ದೇಹಕ್ಕೆ ಅತ್ಯಗತ್ಯವಾದ ಖನಿಜಾಂಶಗಳಾದ ಮ್ಯಾಂಗನೀಸ್, ಐರನ್, ಝಿಂಕ್, ಫಾಸ್ಫರಸ್, ಕ್ಯಾಲ್ಸಿಯಂ, ಸೆಲೆನಿಯಮ್, ಮೆಗ್ನೇಷಿಯಂ ಹಾಗೂ ಪೊಟ್ಯಾಷಿಂ ಇದರಲ್ಲಿವೆ. ವಿಟಮಿನ್ ಬಿ1, ಬಿ2, ಬಿ3, ಬಿ6, ವಿಟಮಿನ್ ಇ, ವಿಟಮಿನ್ ಕೆ ಕೂಡ ಕುಚ್ಚಲಕ್ಕಿಯಲ್ಲಿವೆ. ಇದು ಪ್ರೋಟೀನ್, ಫೈಬರ್ ಹಾಗೂ ಫ್ಯಾಟಿ ಆಸಿಡ್‍ಗಳ ಆಗರವೂ ಆಗಿದೆ.

ಆರೋಗ್ಯಕ್ಕೆ ಎನರ್ಜಿ: ಕುಚ್ಚಲಕ್ಕಿ ಅನೇಕ ಕಾಯಿಲೆಗಳನ್ನು ಹೋಗಲಾಡಿಸುವ ಜೊತೆಗೆ ಅವುಗಳನ್ನು ನಿಯಂತ್ರಣದಲ್ಲಿಡಲು ನೆರವು ನೀಡುತ್ತದೆ. ಸರಳವಾಗಿ ಹೇಳಬೇಕೆಂದರೆ ಕುಚ್ಚಲಕ್ಕಿ ನಮ್ಮ ದೇಹಕ್ಕೆ ಎನರ್ಜಿ ಡ್ರಿಂಕ್‍ನಂತೆ ಶಕ್ತಿ ಒದಗಿಸುವ ಜೊತೆಗೆ ರೋಗಗಳ ವಿರುದ್ಧ ಹೋರಾಡುವ ಸಾಮಥ್ರ್ಯವನ್ನು ನೀಡುತ್ತದೆ.

ಸಕ್ಕರೆಕಾಯಿಲೆ ನಿಯಂತ್ರಣ: ಸಕ್ಕರೆ ಕಾಯಿಲೆಯಿರುವವರು ಕುಚ್ಚಲಕ್ಕಿ ಅನ್ನವನ್ನು ಊಟ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡಬಹುದು. ಕುಚ್ಚಲಕ್ಕಿಯಲ್ಲಿ ಗ್ಲೈಸೆಮಿಕ್ ಪ್ರಮಾಣ ಕಡಿಮೆಯಿರುವ ಕಾರಣ ಇನ್ಸುಲಿನ್ ಉತ್ಪಾದನೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ.

ಹೃದಯದ ಮಿತ್ರ: ಕುಚ್ಚಲಕ್ಕಿಯಲ್ಲಿ ಸೆಲೆನಿಯಂ ಹೇರಳವಾಗಿದ್ದು, ಇದು ಹೃದಯದ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಅಧಿಕ ರಕ್ತದೊತ್ತಡ ಸೇರಿದಂತೆ ಅನೇಕ ಹೃದಯ ಸಂಬಂಧಿ ಕಾಯಿಲೆಗೆ ಕಾರಣವಾಗುವ ಎಂಡ್ರೋಕ್ರೈನ್ ಪ್ರೋಟೀನ್ ಆಂಜಿಯೋಟೆನ್ಷಿನ್ 2ರ ವಿರುದ್ಧ ಹೋರಾಡಬಲ್ಲ ಘಟಕವೊಂದು ಕುಚ್ಚಲಕ್ಕಿಯಲ್ಲಿದೆ.

ಮಿದುಳಿನ ರಕ್ಷಕ: ಮಿದುಳು ಹಾಗೂ ನರ ಮಂಡಲದ ಸಮರ್ಪಕ ಕಾರ್ಯನಿರ್ವಹಣೆಗೆ ಕುಚ್ಚಲಕ್ಕಿ ಸಹಕಾರಿಯಾಗಿದೆ. ಇದರಲ್ಲಿರುವ ಬಿ ವಿಟಮಿನ್ಸ್, ಮ್ಯಾಂಗನೀಸ್ ಮತ್ತು ಮೆಗ್ನೇಷಿಯಂ ಮಿನರಲ್ಸ್‍ಗಳು ದೇಹದಲ್ಲಿ ಕ್ಯಾಲ್ಸಿಯಂನ ಚಟುವಟಿಕೆಯನ್ನು ಸಮತೋಲನದಲ್ಲಿಡುವ ಮೂಲಕ ನರ ಹಾಗೂ ಸ್ನಾಯುಗಳನ್ನು ನಿಯಂತ್ರಿಸಲು ನೆರವು ನೀಡುತ್ತವೆ.

ಕೊಲೆಸ್ಟ್ರಾಲ್ ನಿಯಂತ್ರಕ: ಕುಚ್ಚಲಕ್ಕಿಯಲ್ಲಿ ನೈಸರ್ಗಿಕವಾದ ಎಣ್ಣೆಯಂಶವಿರುವ ಕಾರಣ ಇದು ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ. ಹೀಗಾಗಿ ಕೊಲೆಸ್ಟ್ರಾಲ್ ಹೆಚ್ಚಿರುವವರು ಕೂಡ ಕುಚ್ಚಲಕ್ಕಿ ಅನ್ನವನ್ನು ಸೇವಿಸಬಹುದು.

ಕ್ಯಾನ್ಸರ್ ನಿರೋಧಕ: ಕುಚ್ಚಲಕ್ಕಿ ಸ್ತನಕ್ಯಾನ್ಸರ್, ಬ್ಲಡ್ ಕ್ಯಾನ್ಸರ್ ಸೇರಿದಂತೆ ಕೆಲವು ಕ್ಯಾನ್ಸರ್‍ಗಳಿಂದ ರಕ್ಷಣೆ ಒದಗಿಸುತ್ತದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ಹಾಗೂ ಹೇರಳವಾದ ಫೈಬರ್ ಕ್ಯಾನ್ಸರ್ ಕಾರಕಗಳ ವಿರುದ್ಧ ಹೋರಾಡುತ್ತವೆ.

ಮೂಳೆ ಆರೋಗ್ಯದ ರಕ್ಷಣೆ: ಕುಚ್ಚಲಕ್ಕಿಯಲ್ಲಿ ಮೆಗ್ನೇಷಿಯಂ ಹಾಗೂ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿದ್ದು, ಇವು ಮೂಳೆಗಳ ಸಂರಚನೆ ಹಾಗೂ ಆರೋಗ್ಯ ಸಂರಕ್ಷಣೆಗೆ ನೆರವು ನೀಡುತ್ತವೆ. ಮಗುವಿಗೆ ಎದೆಹಾಲು ನೀಡುತ್ತಿರುವ ತಾಯಂದಿರಲ್ಲಿ ಕಾಣಿಸಿಕೊಳ್ಳುವ ಖಿನ್ನತೆ ಸೇರಿದಂತೆ ಮಾನಸಿಕ ತೊಂದರೆಗಳನ್ನು ದೂರ ಮಾಡುತ್ತದೆ.

See also  ಕೂದಲಿಗೆ ಡೈ ಹಚ್ಚಿದರೆ ಸ್ತನದ ಕ್ಯಾನ್ಸರ್ ಅಪಾಯ ಹೆಚ್ಚು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು