News Karnataka Kannada
Wednesday, April 24 2024
Cricket
ಆರೋಗ್ಯ

ಮುಟ್ಟು ಗುಟ್ಟಿನ ವಿಷಯವಲ್ಲ ಅದೊಂದು ಜೈವಿಕ ಕ್ರಿಯೆ

Menstruation is not a matter of secret, it is a biological process.
Photo Credit : By Author

ಮೈಸೂರು: ಮುಟ್ಟಿಗೂ ಒಂದು ಘನತೆ ಇದೆ. ಮೂಢನಂಬಿಕೆ ಮತ್ತು ಕೀಳರಿಮೆಗಳನ್ನು ಬಿಟ್ಟು ಮುಟ್ಟಿನ ಬಗೆಗೆ ಅಗತ್ಯವಿರುವ ಸ್ವಚ್ಛತೆಯ ಕಡೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ ಹೇಳಿದರು.

ಕೃಷ್ಣಾಪುರದೊಡ್ಡಿಯ ಕೆ.ಎಸ್.ಮುದ್ದಪ್ಪ ಸ್ಮಾರಕ ಟ್ರಸ್ಟ್, ಇಎಸ್‌ಎಎಫ್‌ ಫೌಂಡೇಶನ್, ಹ್ಯುಮಾನಿಟಿ ಫಸ್ಟ್ ಫೌಂಡೇಶನ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಹಿಳಾ ಸಬಲೀಕರಣ ವಿಭಾಗ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಮುಟ್ಟಿನ ಆರೋಗ್ಯ ಕುರಿತ ಜಾಗೃತಿ ಕುರಿತು ಉಪನ್ಯಾಸ ನೀಡಿ, ದೈಹಿಕವಾಗಿ ನಿರಂತರ ನಡೆಯುವ ಮುಟ್ಟಿನ ಸರಿಯಾದ ನಿರ್ವಹಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಮತ್ತು ಎಲ್ಲವರ್ಗದ ಮಹಿಳೆಯರಿಗೂ ತಿಳಿಸಬೇಕಾಗಿದೆ ಎಂದು ಹೇಳಿದರು.

ಮಾಜಿ ನಗರಸಭಾ ಅಧ್ಯಕ್ಷೆ ಬಿ ಸಿ ಪಾರ್ವತಮ್ಮ ಮಾತನಾಡಿ ಮುಟ್ಟನ್ನು ಕುರಿತು ಅದರ ನೈರ್ಮಲ್ಯವನ್ನು ಕುರಿತು ಇಡೀ ಮಹಿಳಾ ಲೋಕಕ್ಕೆ ತಿಳಿಯಬೇಕಾದ ಅವಶ್ಯಕತೆ ಇದೆ ಮುಟ್ಟಿನ ವಿಚಾರದಲ್ಲಿ ನಿರ್ಲಕ್ಷ ಮಾಡಿ ಸಾವಿಗೀಡಾದ ಅನೇಕ ದಾಖಲೆಗಳು ನಮ್ಮಲ್ಲಿವೆ. ಆಧುನಿಕ ಯುಗದಲ್ಲಿ ಮುಟ್ಟನ್ನು ಗುಟ್ಟು ಮಾಡುವ ಅವಶ್ಯಕತೆ ಇಲ್ಲ ಎಂದರು.

ನಿಸರ್ಗದತ್ತವಾಗಿ ಉಂಟಾಗುವ ಮುಟ್ಟು ದೇಗುಲಗಳಾಚೆ ಇರಿಸಲು ಹೇಳಲ್ಲ. ಸೂಕ್ತವಾಗಿ ಅದರ ನಿರ್ವಹಣೆ ಮಾಡುವುದರಿಂದ ಎಲ್ಲ ಕಿರಿಕಿರಿಗಳಿಂದ ದೂರವಿರಬೇಕು. ಮುಟ್ಟು ಸೂತಕವಲ್ಲ ಅದೊಂದು ಸಾಮಾನ್ಯ ಪ್ರಕ್ರಿಯೆ. ಮುಟ್ಟನ್ನು ಗುಟ್ಟು ಮಾಡುವ ಅವಶ್ಯಕತೆಯಿಲ್ಲ ಎಂದು ಜಾನಪದ ವಿದ್ವಾಂಸ ಡಾ. ಎಂ ಬೈರೇಗೌಡ ನುಡಿದರು.

ಹ್ಯುಮಾನಿಟಿ ಫಸ್ಟ್ ಫೌಂಡೇಶನ್ ಅಧ್ಯಕ್ಷ ಉದಯ್ ಕುಮಾರ್ ಮಹಿಳಾ ಸಬಲೀಕರಣ ವಿಭಾಗದ ಸಂಚಾಲಕಿ ವೇದಾವತಿ ಕಾಲೇಜು ಕನ್ನಡ ವಿಭಾಗದ ಉಪನ್ಯಾಸಕಿ ರೂಪ ESAF ಫೌಂಡೇಶನ್ ಸತೀಶ್ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲ ಮುದ್ದಿರಯ್ಯ ಅಧ್ಯಕ್ಷತೆ ವಹಿಸಿದ್ದರು. ಭವ್ಯ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು