News Kannada
Wednesday, March 22 2023

ಸಮುದಾಯ

ಕೆ.ಆರ್.ಪೇಟೆ: ಶ್ರೀಲಕ್ಷ್ಮೀಭೂವರಹನಾಥ ಕ್ಷೇತ್ರದ ಭೂವರಹನಾಥನಿಗೆ ಅಭಿಷೇಕ

k-r-pet-abishek-to-bhoovarahanatha-of-sri-lakshmibhuvarahanatha-kshetra
Photo Credit : By Author

ಕೆ.ಆರ್.ಪೇಟೆ: ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವೈಕುಂಠವೆಂದೇ ಪ್ರಖ್ಯಾತವಾಗಿರುವ ಭೂದೇವಿ ಸಮೇತವಾಗಿ ನೆಲೆಸಿರುವ ಕಲ್ಲಹಳ್ಳಿಯ ಶ್ರೀಲಕ್ಷ್ಮೀಭೂವರಹನಾಥ ಕ್ಷೇತ್ರದಲ್ಲಿ ಭೂವರಹನಾಥ ಶಿಲಾಮೂರ್ತಿಗೆ ಅಭಿಷೇಕ, ಪುಷ್ಪಾಭಿಷೇಕ ಹಾಗೂ ಪಟ್ಟಾಭಿಷೇಕ ಮಾಡಿ ಅಡ್ಡಪಲ್ಲಕಿ ಉತ್ಸವ ನಡೆಸಲಾಯಿತು.

ದೇಶದಲ್ಲಿಯೇ ಅಪರೂಪದ್ದಾಗಿರುವ 17 ಅಡಿ ಎತ್ತರದ ಸಾಲಿಗ್ರಾಮ ಶ್ರೀಕೃಷ್ಣಶಿಲೆಯ ಭೂವರಹನಾಥ ಶಿಲಾಮೂರ್ತಿಗೆ ಪವಿತ್ರ ಗಂಗಾಜಲ, ಒಂದು ಸಾವಿರ ಲೀಟರ್ ಹಾಲು, ಐನೂರು ಲೀಟರ್ ಎಳನೀರು, ಐನೂರು ಲೀಟರ್ ಕಬ್ಬಿನ ಹಾಲು, ಜೇನುತುಪ್ಪ, ಹಸುವಿನತುಪ್ಪ, ಮೊಸರು, ಸುಗಂಧ ದ್ರವ್ಯಗಳಿಂದ ಅಭಿಷೇಕಮಾಡಿ, ಮಲ್ಲಿಗೆ, ಜಾಜಿ, ಸಂಪಿಗೆ, ಸೇವಂತಿಗೆ, ಗುಲಾಬಿ, ಕಮಲ, ಪವಿತ್ರ ಪತ್ರೆಗಳು, ಜವನ, ತುಳಸಿ, ಪಾರಿಜಾತ ಸೇರಿದಂತೆ ೫೮ಬಗೆಯ ವಿವಿಧ ಅಪರೂಪದ ಹೂವುಗಳಿಂದ ಪುಷ್ಪಾಭಿಷೇಕ ನಡೆಸಿ, ಸ್ವಾಮಿಯ ಉತ್ಸವ ಮೂರ್ತಿಗಳ ಅಡ್ಡಪಲ್ಲಕಿ ಉತ್ಸವ ನಡೆಯಿತು.

ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸರಾಘವನ್ ಮಾತನಾಡಿ ಭೂವರನಾಥ ಕ್ಷೇತ್ರವನ್ನು ತಿರುಮಲ ತಿರುಪತಿಯ ಮಾದರಿಯಲ್ಲಿ ಮೂರು ಪ್ರಾಕಾರಗಳ ದೇವಾಲಯವನ್ನಾಗಿ 50ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ದೇವಾಲಯದ ಸೌಂದರ್ಯವನ್ನು ಇಮ್ಮಡಿಗೊಳಿಸುವ ನಿಟ್ಟಿನಲ್ಲಿ 178 ಅಡಿ ಎತ್ತರದ ರಾಜಗೋಪುರವನ್ನು ವಾಸ್ತುಬದ್ಧವಾಗಿ ನಿರ್ಮಿಸಿ ಹೊಯ್ಸಳ ವಾಸ್ತುವೈಭವದ ದೇವಾಲಯವನ್ನಾಗಿ ನಿರ್ಮಾಣ ಮಾಡಲಾಗುತ್ತಿದೆ. ಮುರುಡೇಶ್ವರ, ಮೂಡಬಿದರೆ, ತಮಿಳುನಾಡಿನ ತಂಜಾವೂರು, ರಾಜಸ್ಥಾನದಿಂದ ಶಿಲ್ಪಿಗಳು ಆಗಮಿಸಿದ್ದು ಹಗಲಿರುಳೆನ್ನದೇ ದೇವಾಲಯದ ನಿರ್ಮಾಣ ಕಾರ್ಯವು ವಿಶೇಷವಾಗಿ ಗ್ರಾನೈಟ್ ಕಲ್ಲಿನಿಂದಲೇ ನಿರ್ಮಿಸಲಾಗುತ್ತಿದೆ. ಚಿತ್ರಪಟ್ಟಿಕೆಗಳು, 108 ಕಾಲುಗಳ ಮುಖಮಂಟಪ, ಮೃಚ್ಛಿಕೆಗಳು, ನವರಂಗ, ದೇವಾಲಯದ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತಿದ್ದು ವೈಭವವಾದ ದೇವಾಲಯವು ಕೃಷ್ಣರಾಜಪೇಟೆ ತಾಲೂಕಿನ ಹೇಮಾವತಿ ನದಿಯ ದಡದಲ್ಲಿ ನಿರ್ಮಾಣವಾಗುತ್ತಿರುವುದು ಕ್ಷೇತ್ರದ ಹಿರಿಮೆಗೆ ಗರಿಮೂಡಿಸಿದಂತಾಗಿದೆ ಎಂದು ರಾಘವನ್ ಹೇಳಿದರು.

ನಾಲ್ಕೂವರೆ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಶಿವಿಶ್ವನಾಥನ ಸನ್ನಿಧಿಯ ಮಾದರಿಯಲ್ಲಿ ಸೋಪಾನಘಟ್ಟ, ಸ್ನಾನಗೃಹ, ಶೌಚಗೃಹಗಳು ಹಾಗೂ ಸುಂದರವಾದ ಹೂದೋಟದ ನಿರ್ಮಾಣಕ್ಕೆ ಸಚಿವ ಡಾ.ನಾರಾಯಣಗೌಡರ ನೇತೃತ್ವದಲ್ಲಿ ಭೂಮಿ ಪೂಜೆ ಮಾಡಲಾಗಿದ್ದು ಎರಡು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ವಿವರಿಸಿದ್ದಾರೆ.

See also  ಜನರೊಂದಿಗೆ ಬೆಳೆದು ಬಂದ ಪಕ್ಷ ಬಿಜೆಪಿ: ಸಿ.ಟಿ.ರವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು