News Kannada
Sunday, October 01 2023
ಮಂಗಳೂರು

ಬಂಟ್ವಾಳ: ನಿಟಿಲೇಶ್ವರ ದೇವಸ್ಥಾನದಲ್ಲಿ ಶ್ರೀಸದಾಶಿವ ದೇವರಿಗೆ ಸೀಯಾಳಾಭಿಷೇಕ

Seeyalabhishekam to Lord Sri Sadashiva at Nittileshwara Temple
Photo Credit : News Kannada

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಸ್ವಸಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಯೋಜನೆಯ ವಿಪತ್ತು ನಿರ್ವಹಣಾ ಶೌರ್ಯ ತಂಡ, ಕಲ್ಲಡ್ಕ ವಲಯ ಜನಜಾಗೃತಿ ವೇದಿಕೆ ನವ ಜೀವನ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಬುಧವಾರ ಬಂಟ್ವಾಳ ತಾಲೂಕಿನ ಕಲ್ಲಡ್ಕ ಗೋಳ್ತಮಜಲು ಗ್ರಾಮದ ನೆಟ್ಲ ಶ್ರೀ ನಿಟಿಲೇಶ್ವರ ದೇವಸ್ಥಾನದಲ್ಲಿ ಶ್ರೀಸದಾಶಿವ ದೇವರಿಗೆ ಸೀಯಾಳಾಭಿಷೇಕ ನಡೆಯಿತು.

ಈ ವರ್ಷ ಉತ್ತಮ ಮಳೆ ಬಂದು ಯಾವುದೇ ಅನಾಹುತ ಆಗದೇ, ನಮ್ಮ ಇಡೀ ಗ್ರಾಮ ಸೀಮೆಗೆ ಸುಭಿಕ್ಷೆ ಸಿಗಲಿ , ಸರ್ವೇ ಜನ ಸುಖಿನೋ ಭವಂತು ಎಂಬ ಆಶಯದೊಂದಿಗೆ ಶ್ರೀ ದೇವರಿಗೆ ಬೊಂಡಾಭಿಷೇಕ ಜರಗಿತು. ನಂತರ ಅನ್ನ ಪ್ರಸಾದ ನೆರವೇರಿತು.

ಕಾರ್ಯಕ್ರಮದಲ್ಲಿ ಜನ ಜಾಗೃತಿ ವೇದಿಕೆಯ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ, ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಶೆಟ್ಟಿ, ಶೌರ್ಯ ವಿಪತ್ತು ತಂಡದ ಅಧ್ಯಕ್ಷ ಮಾಧವ ಸಾಲಿಯನ್ ಕುದ್ರೆಬೆಟ್ಟು, ಕಲ್ಲಡ್ಕ ವಲಯಕ್ಕೆ ಸಂಬಂಧಪಟ್ಟ ಒಕ್ಕೂಟಗಳ ಅಧ್ಯಕ್ಷರುಗಳಾದ ಸೀತಾರಾಮ್ ಶೆಟ್ಟಿ, ಶಾಂಭವಿ, ಸೀತಾ, ದಯಾನಂದ, ಒಕ್ಕೂಟಗಳ ಸೇವಾ ಪ್ರತಿನಿಧಿಗಳು, ಯೋಜನೆಯ ಸ್ವಸಹಾಯ ಗುಂಪಿನ ಸದಸ್ಯರುಗಳು, ಜನಜಾಗೃತಿ ವೇದಿಕೆಯ ಸದಸ್ಯರುಗಳು, ಶೌರ್ಯ ವಿಪತ್ತು ತಂಡದ ಸದಸ್ಯರುಗಳು ಭಾಗವಹಿಸಿದ್ದರು. ಸುಮಾರು 1500 ಸೀಯಾಳ ಅಭಿಷೇಕ ಮಾಡಲಾಯಿತು.

See also  ಬೆಳ್ತಂಗಡಿ: ಜ್ವರದಿಂದ 12 ಗಂಟೆಯ ಅವಧಿಯೊಳಗೆ ಎಳೆಯ ಸಹೋದರಿಬ್ಬರು ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು