News Karnataka Kannada
Wednesday, April 24 2024
Cricket
ಸಮುದಾಯ

ಸರಗೂರಿನಲ್ಲಿ ವಿಜೃಂಭಣೆಯ ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವ

Lakshminarasimhaswamy Rathotsava at Saragur
Photo Credit : By Author

ಸರಗೂರು: ಸರಗೂರು ಪಟ್ಟಣದ 7 ನೇ ವಾರ್ಡಿನಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಮಹಾರಥೋತ್ಸವದ ರಥ ಎಳೆದು ಭಕ್ತರು ತಮ್ಮ ಭಕ್ತಿ ಸಮರ್ಪಿಸಿದರು.

ಪಟ್ಟಣದಲ್ಲಿ ಸುಮಾರು ವರ್ಷಗಳಿಂದ ಇರುವ ಪ್ರಸಿದ್ದ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ರಥೋತ್ಸವದ ಅಂಗವಾಗಿ ತಳಿರುತೋರಣಗಳಿಂದ ಸಿಂಗರಿಸಿ, ರಂಗೋಲಿ ಬಿಡಿಸಿ ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸಿ ದೇವರ ಉತ್ಸವಮೂರ್ತಿಯನ್ನು ರಥದ ಮೇಲೆ ಇರಿಸಿ ದೇವಸ್ಥಾನದ ಮುಂಭಾಗದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಂಗಳವಾದ್ಯ ಇತರ ವೇದಘೋಷ್ಟಿಗಳೊಂದಿಗೆ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು ವಿವಿಧ ಹೂವಿನಿಂದ ಅಲಂಕೃತಗೊಂಡ ರಥೋತ್ಸವದಲ್ಲಿ ಶ್ರೀದೇವಿ ಭೂದೇವಿ ವಾಸುದೇವ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಥ ಎಳೆಯುವ ಮೂಲಕ ಮೆರವಣಿಗೆ ನಡೆಸಲಾಯಿತು.

ದಾರಿ ಉದ್ದಕ್ಕೂ ತೆಂಗಿನಕಾಯಿ ಒಡೆದು ಭಕ್ತರು ಹರಕೆ ತೀರಿಸಿದರು, ದೇವಾಲಯಕ್ಕೆ ಬಂದ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ ಕಸ್ತೂರಿರಂಗನ್ ವೈದೇವಿ ರಂಗನ್ ಬೆಂಗಳೂರಿನ ಮಲ್ಲೇಶ್ವರಂ ನ ಪ್ರಧಾನ ಅರ್ಚಕರಾದ ಭರತ್ ಭಟ್ಟರು ದಾಸೋಹದ ರಾಶಿಗೆ ಪೂಜೆ ಸಲ್ಲಿಸಿ ಇವರ ಮುಖಾಂತರ ಅನ್ನದಾನಕ್ಕೆ ಚಾಲನೆ ನೀಡಿದರು ನಂತರ ಇವರುಗಳನ್ನು ಆರ್ಯ ಈಡಿಗರ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

ಶ್ರೀ ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವದ ಪ್ರಯುಕ್ತ ಆರ್ಯ ಈಡಿಗರ ಸಮುದಾಯ ಭವನದಲ್ಲಿ ಆರ್ಯ ಈಡಿಗ ಜನಾಂಗದವರು ಸಾವಿರಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ ಮಾಡಲಾಯಿತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು