News Karnataka Kannada
Friday, March 29 2024
Cricket
ಮಂಗಳೂರು

ಮಂಗಳೂರು: ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶತ ಸೀಯಾಳಾಭಿಷೇಕ

Shata Siyalabhisheka at Sri Kshetra Kudroli
Photo Credit : News Kannada

ಮಂಗಳೂರು: ಲೋಕ ಸುಭಿಕ್ಷೆ ಹಾಗೂ ಕಲ್ಯಾಣಾರ್ಥ, ಭೂಮಿಗೆ ಮಳೆಯ ಕೃಪೆಗಾಗಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶತ ಸೀಯಾಳಾಭಿಷೇಕ, ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.

ಕರಾವಳಿ ಭಾಗದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಜಲಕ್ಷಾಮದಿಂದ ಕರಾವಳಿಯ ಬಹುತೇಕ ನದಿಮೂಲ, ಬಾವಿ, ಕೆರೆ, ಬೋರ್‌ವೆಲ್ ಬತ್ತಿದ್ದು, ಕೃಷಿ ಚಟುವಟಿಕೆಗಳ ಜತೆ ಕುಡಿಯುವ ನೀರಿನ ಕೊರತೆಯಾಗಿದೆ. ಇನ್ನೂ ಮಳೆ ವಿಳಂಬವಾಗುವ ಮುನ್ಸೂಚನೆಯಿದ್ದು, ಶೀಘ್ರ ಮಳೆಯಾಗಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ,ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕ್ಷೇತ್ರದ ಕೋಶಾಧಿಕಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಮಹಿಳಾ ಘಟಕದ ನಾಯಕಿ ಶಾಲೆಟ್ ಪಿಂಟೋ, ಕಾರ್ಪೊರೇಟರ್‌ಗಳಾದ ಭಾಸ್ಕರ್ ಮೊಯ್ಲಿ, ಶಶಿಧರ ಹೆಗ್ಡೆ, ಮಾಜಿ ಕಾರ್ಪೊರೇಟರ್‌ಗಳಾದ ಡಿ.ಕೆ.ಅಶೋಕ್, ಅಪ್ಪಿ, ಕಾಂಗ್ರೆಸ್ ಮುಖಂಡರಾದ ಸತೀಶ್ ಪ್ರಭು, ಗೆಜ್ಜೆಗಿರಿ‌ ಕ್ಷೇತ್ರದ ಉಪಾಧ್ಯಕ್ಷ ರವಿ ಚಿಲಿಂಬಿ, ವಕ್ತಾರ ರಾಜೇಂದ್ರ ಚಿಲಿಂಬಿ ಸೇರಿದಂತೆ ಹಲವರು ಇದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು