News Kannada
Wednesday, March 22 2023

ಸಂಪಾದಕೀಯ

ಬೆಂಗಳೂರು: ಸರ್ಕಾರಿ ನೌಕರರ ಮುಷ್ಕರ ಬಡರೋಗಿಗಳು, ವಿದ್ಯಾರ್ಥಿಗಳ ಪಾಡೇನು

What is the fate of poor patients, students on strike by government employees
Photo Credit : News Kannada

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮುಷ್ಕರದಿಂದ ಕೆಲ ಜಿಲ್ಲೆಗಳಲ್ಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್‌ ಆದ ಕಾರಣ ಬಡರೋಗಿಗಳು ಪರದಾಟ ಅನುಭವಿಸುವಂತಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳು ತುರ್ತು ಚಿಕಿತ್ಸೆ ಹೊರತುಪಡಿಸಿ ಬೇರೆ ಯಾವುದೇ ಸೇವೆಗಳು ದೊರೆಯುತ್ತಿಲ್ಲ.

ಮುಷ್ಕರದ ವಿಚಾರ ತಿಳಿಯದ ಬಡರೋಗಿಗಳು ಸೇವೆ ಬಯಸಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ. ಫೆ.22ರಂದೇ ಸಂಘಟನೆಗಳು ಮುಷ್ಕರ ನಡೆಸುವುದಾಗಿ ತಿಳಿಸಿದ್ದರೂ ಸುಮ್ಮನಿದ್ದ ಸರ್ಕಾರ ಮುಷ್ಕರ ನಡೆಯುವ ಹಿಂದಿನ ದಿನವಷ್ಟೆ ಮಾತುಕತೆಗೆ ಮುಂದಾಯಿತು. ಇದರಿಂದ ಮುಷ್ಕರದಿಂದ ಮುಖ್ಯವಾಗಿ ಬಡರೋಗಿಗಳು ದಿಕ್ಕೆಡುವಂತಾಗಿದೆ. ಸಾರ್ವಜಿನಿಕರಿಗೆ ಆದ ತೊಂದರೆಗೆ ಸರ್ಕಾರವೇ ಹೊಣೆ ಎಂದು ಸರ್ಕಾರಿ ನೌಕರರ ಸಂಘಟನೆ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ. ಮಂಗಳವಾರ ರಾತ್ರಿಯೇ ಸಂಘಟನೇ ಮುಖಂಡರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದರೂ ಫಲ ದೊರೆತಿಲ್ಲ.

ಶಾಲೆಗಳಲ್ಲಿ ಅಧ್ಯಾಪಕರಿಲ್ಲ: ಸರ್ಕಾರಿ ನೌಕರರ ಮುಷ್ಕರಕ್ಕೆ ಶಾಲಾ ಶಿಕ್ಷಕರು ಬೆಂಬಲ ನೀಡಿರುವುದರಿಂದ ರಾಜ್ಯದ ಶಾಲೆಗಳು ಬಂದ್‌ ಆಗಿವೆ. ಇದರಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಪಾಠ ಪ್ರವಚನಗಳಿಂದ ವಂಚಿತಾಗುವಂತಾಗಿದೆ. ಬೆಂಗಳೂರಿನ ಗಾಂಧಿನಗರದ ಬಹುತೇಕ ಶಾಲೆ ಕಾಲೇಜುಗಳು ಬಂದ್‌ ಆಗಿದೆ. ಅಲ್ಲದೆ ಪ್ರಥಮ ಪಿಯು ಪರೀಕ್ಷೆ ಮುಂದೂಡಿಕೆಯಾಗಿದೆ.

See also  ಬೆಂಗಳೂರು: ಭಿಕ್ಷಾಟನೆ ನಿಷೇಧ ಕಾಯ್ದೆ  ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದ ಶ್ರೀನಿವಾಸ ಪೂಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು