ಬೆಂಗಳೂರು: ನನಗೆ ಸೂಕ್ತ ವರನನ್ನು ಹುಡುಕಿ ಕೊಡಿ. ನನಗೂ ಹುಡುಕಿ… ಹುಡುಕಿ ಸಾಕಾಗಿದೆ ಎಂದು ನಟಿ ರಮ್ಯಾ ಹೇಳಿದ್ದಾರೆ. ಅಭಿಮಾನಿಗಳು ಮಂಡ್ಯ ಚುನಾವಣಾ ಪ್ರಚಾರದ ವೇಳೆ ಕೇಳಿದ ಪ್ರಶ್ನೆಗೆ ರಮ್ಯಾ ಮೇಲಿನಂತೆ ಉತ್ತರಿಸಿದ್ದಾರೆ.
ನನಗೆ ಮೊದಲು ಹುಡುಗನನ್ನು ಹುಡುಕಿ. ಗೌಡರ ಹುಡುಗ ಸಿಕ್ತಾರೆ ಅಂದ್ರೆ ನೋಡಿ. ನನಗೆ ಒಬ್ಬರೂ ಕಾಣುತ್ತಿಲ್ಲ ಎಂದು ಹೇಳಿದ್ದಾರೆ. ನನಗೂ ಹುಡುಗನನ್ನು ನೋಡಿ ನೋಡಿ ಸಾಕಾಗಿದೆ. ಬೇಕಿದ್ದರೆ ನೀವೇ ಸ್ವಯಂವರ ಏರ್ಪಾಟು ಮಾಡಿ, ಮದುವೆ ಆಗುತ್ತೇನೆ ಎಂದು ಹೇಳಿದ್ದಾರೆ. ನಾನು ಯಾವಾಗಲೂ ಮಂಡ್ಯದವಳು. ನಾನು ಗೌಡತಿ ಎಂಬುದನ್ನು ಯಾರೂ ಕಿತ್ತುಕೊಳ್ಳಲು ಆಗಲ್ಲ. ನಮ್ಮ ತಾಯಿ ಊರು ಮಂಡ್ಯ, ನಮ್ಮ ತಂದೆ ಸತ್ತಿದ್ದು ಇಲ್ಲೇ, ನನ್ನ ಅಭ್ಯರ್ಥಿ ಮಾಡಿದ್ದು ಇಲ್ಲೇ, ಮಂಡ್ಯ ಜಿಲ್ಲೆಯ ಜನರು ನನಗೆ ಬೆಂಬಲ ನೀಡಿದ್ದಾರೆ. ಈ ಅಭಿಮಾನವನ್ನು ನಾನು ಯಾವತ್ತೂ ಮರೆಯಲ್ಲ, ಇದು ಕಮ್ಮಿಯೂ ಆಗಲ್ಲ. ಮಂಡ್ಯ ಸಂಬಂಧ ಕೇವಲ ರಾಜಕೀಯವಾಗಿ ಅಲ್ಲ, ನನಗೆ ಮಂಡ್ಯ ಕುಟುಂಬದ ರೀತಿ ಎಂದ ರಮ್ಯಾ, ನಾನು ಮಂಡ್ಯಕ್ಕೆ ಬಂದುಹೋಗುತ್ತಾ ಇರುತ್ತೇನೆ ಎಂದು ರಮ್ಯಾ ಹೇಳಿಕೊಂಡಿದ್ದಾರೆ.