ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಕಷ್ಟಪಟ್ಟು ಕೋಟ್ಯಾಂತರ ಹಣ ಹಾಕಿ ನಿರ್ಮಿಸುವ ಸಿನಿಮಾವನ್ನು ಪೈರಸಿ ಮಾಡುವುದರಿಂದ ಚಿತ್ರರಂಗಕ್ಕೆ ದೊಡ್ಡ ಹೊಡೆತ ಬೀಳುತ್ತದೆ. ಪೈರಸಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಕೋಟಿಗೊಬ್ಬ 3 ಸಿನಿಮಾ ನಿರ್ಮಾಪಕರು ಮಧ್ಯಾಹ್ನ ಪೈರಸಿ ಕೃತ್ಯದ ಬಗ್ಗೆ ತಿಳಿಸಿ ಪೈರಸಿಯನ್ನು ನಿಲ್ಲಿಸುವಂತೆ ಮನವಿ ಕೊಟ್ಟಿದ್ದಾರೆ. ಇದೊಂದು ರೀತಿಯಲ್ಲಿ ಉದ್ದೇಶಿತ ಅಪರಾಧದಂತೆ ಭಾಸವಾಗುತ್ತದೆ. ಚಲನಚಿತ್ರರಂಗಕ್ಕೆ ಹೊಡೆತ ಕೊಡುವ ಪೈರಸಿಯನ್ನು ತಡೆಗಟ್ಟಲು ಎಲ್ಲ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ನಿರ್ಮಾಪಕರಾಗಿರುವ ಸೂರಪ್ಪ ಬಾಬು ಅವರೇ ಇದೀಗ ಗೃಹ ಸಚಿವರಿಗೇ ದೂರು ನೀಡಿದ್ದಾರೆ. ಕೋಟಿಗೊಬ್ಬ-3 ಸಿನಿಮಾ ಬಿಡುಗಡೆ ಮಾಡುವುದಕ್ಕೂ ಮುನ್ನವೇ, ಪೈರಸಿ ಮಾಡ್ತೀವಿ ಅಂತಾ ಕಿಡಿಗೇಡಿಗಳು ಅವರಿಗೆ ಬೆದರಿಕೆ ಹಾಕಿದ್ದಾರೆ ಅಂತೆ. ಟೆಲಿಗ್ರಾಂ ಆಯಪ್ನಲ್ಲಿ ಸೂರಪ್ಪ ಬಾಬುಗೆ ಬೆದರಿಕೆ ಬಂದಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದಿರುವ ಸೂರಪ್ಪ ಬಾಬು, ಭದ್ರತೆ ನೀಡುವಂತೆ ಕೋರಿದ್ದಾರೆ.