News Kannada
Tuesday, March 28 2023

ಸಾಂಡಲ್ ವುಡ್

ಬೆಂಗಳೂರು: ವಿಶ್ವಸಂಸ್ಥೆಯಲ್ಲಿ ಕನ್ನಡದ ಕಂಪು ಪಸರಿಸಿದ ರಿಷಬ್ ಶೆಟ್ಟಿ

Bengaluru: Rishab Shetty spreads kannada at UNITED NATIONS
Photo Credit : Twitter

ಬೆಂಗಳೂರು: ನಿರ್ದೇಶಕ ರಿಷಬ್ ಶೆಟ್ಟಿ ವಿಶ್ವ ಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿದ್ದು, ವಿಶ್ವಸಂಸ್ಥೆಯ (ಯುನೈಟೆಡ್ ನೇಷನ್ಸ್) ಪ್ರಧಾನ ಕಚೇರಿಯಲ್ಲಿ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಪರಿಸರ ಸಂರಕ್ಷಣೆ ಹಾಗೂ ‘ಕಾಂತಾರ’ ಸಿನಿಮಾದ ಬಗ್ಗೆ ವಿಶ್ವಸಂಸ್ಥೆಯಲ್ಲಿ ರಿಷಬ್ ಶೆಟ್ಟಿ ಮಾಡಿದ ಭಾಷಣದ ವಿವರ ಇಲ್ಲಿದೆ.

ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟ ದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ- ನಿರ್ದೇಶಕನಾಗಿ, ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ.

ಪರಿಸರ ಸುಸ್ಥಿರತೆಯ ಶೋಧನೆಗೆ ಜಾಗತಿಕ ಏಜೆನ್ಸಿಗಳು ಹಾಗೂ ಸರ್ಕಾರದ ಸಂಸ್ಥೆಗಳು ಮುಂಚೂಣಿಯಲ್ಲಿವೆ. ಜೊತೆಗೆ ಭಾರತದಲ್ಲಿ ನಾಗರಿಕ ಸಮಾಜ ಸಹ ಸ್ಥಳೀಯ ಪರಿಸರ ರಕ್ಷಣೆಯ ಕಾರ್ಯದಲ್ಲಿ ತೊಡಗಿದೆ. ಇಂತಹ ಪರಿಸರ ಪ್ರಜ್ಞೆಗೆ ಸಿನಿಮಾ ಎಂಬ ಮಾಧ್ಯಮವು ಕನ್ನಡಿ ಹಿಡಿಯುತ್ತದೆ ಹಾಗೂ ವಾಸ್ತವವನ್ನು ಜಗತ್ತಿಗೆ ತೋರಿಸುವ ಪ್ರಮುಖ ಪಾತ್ರ ನಿರ್ವಹಿಸುತ್ತವೆ, ಹಲವಾರು ಭಾರತೀಯ ಸಿನಿಮಾಗಳು ಕಾಲ್ಪನಿಕ ಹಾಗೂ ವಾಸ್ತವ ಕತೆಗಳ ಮೂಲಕ ಪರಿಸರ ಸಂರಕ್ಷಣೆಯ ವಿಚಾರ ಹೇಳಿದ್ದು, ಈ ಕುರಿತು ಜಾಗೃತಿ ಮೂಡಿಸಿವೆ ಎಂಬುದು ನಮ್ಮ ಹೆಮ್ಮೆ.

ಇತ್ತೀಚಿನ ನನ್ನ ಕಾಂತಾರ ಸಿನಿಮಾದಲ್ಲಿ ಸಹ, ನಿಸರ್ಗದ ಮಡಿಲಲ್ಲಿ, ಮನುಷ್ಯನ ಜೀವನ, ಜನರ ಸ್ಥಳೀಯ ನಂಬಿಕೆ, ಆಚರಣೆ ಕುರಿತ ಪ್ರಮುಖ ಅಂಶಗಳು ಅಡಕವಾಗಿವೆ. ಪರಿಸರದ ಜತೆ ನಾವು ಹೊಂದಿರುವ ನಂಟು, ಅದು ನಮ್ಮ ಮೇಲೆ ಬೀರುವ ಪರಿಣಾಮ, ಸಹಬಾಳ್ವೆ, ಸಾಂಸ್ಕೃತಿಕ ಹಿರಿಮೆಗಳು ಹೇಗೆ ಪರಸ್ಪರ ಅವಲಂಬಿಸಿದೆ ಎಂಬುದನ್ನು ಕಾಂತಾರ ಸಿನಿಮಾ ತೋರಿಸಿದೆ. ಸ್ಥಳೀಯ ಪರಿಸರ ರಕ್ಷಣೆ, ಇದರಲ್ಲಿ ಸರ್ಕಾರದ ಪಾತ್ರ, ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಮುದಾಯಗಳ ಪ್ರಾಮುಖ್ಯತೆಗಳನ್ನು ಸಿನಿಮಾ ಎಳೆಎಳೆಯಾಗಿ ಬಿಚ್ಚಿಟ್ಟಿದೆ.

ಕಾಂತಾರದಂತಹ ಸಿನಿಮಾಗಳು ವಾಸ್ತವವನ್ನು ತೆರೆದಿಡುವ ಜತೆಗೆ ಪರಿಸರದ ಸವಾಲುಗಳನ್ನು ಎದುರಿಸಲು, ಸಮಸ್ಯೆಗಳನ್ನು ಬಗೆಹರಿಸಲು ಜನರಿಗೆ ಸ್ಫೂರ್ತಿ ನೀಡುತ್ತವೆ. ಭಾವನೆಗಳನ್ನು ಜಾಗೃತಗೊಳಿಸಿ, ಪರಿಸರ ರಕ್ಷಣೆಯತ್ತ ಜನ ತೆರಳುವಂತೆ ಮಾಡುತ್ತವೆ. ಇಂತಹ ಪ್ರಯತ್ನ ಪರಿಶ್ರಮವನ್ನು ಗುರುತಿಸಬೇಕು, ಪ್ರೋತ್ಸಾಹಿಸಬೇಕು ಎಂಬುದಾಗಿ ಇಲಿ ನೆರೆದಿರುವ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ ಎಂದು ವಿವರಿಸಿದ್ದಾರೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಅಭಿನಂದನೆ ವ್ಯಕ್ತಪಡಿಸಿದ್ದು, ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಕನ್ನಡದಲ್ಲಿ ಮಾತನಾಡಿದ್ದು, ನಿಜಕ್ಕೂ ಅದ್ಬುತ ಅಭಿನಂದನೆಗಳು. ನಿಮ್ಮ ಕನ್ನಡ ಪ್ರೇಮಕ್ಕೆ ಹೃದಯಾಂತರಾಳದದಿಂದ ಗೌರವವನ್ನು ಅರ್ಪಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

See also  ಧ್ರುವ ಸರ್ಜಾರ 33ನೇ ಹುಟ್ಟು ಹಬ್ಬ : ‘ಮಾರ್ಟಿನ್’ ಚಿತ್ರತಂಡ ಕೊಡಲಿದೆ ಧ್ರುವ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು