ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪ್ರಮಾಣವಚನ ಕಾರ್ಯಕ್ರಮ ಶನಿವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಿತು. ಈ ಬಗ್ಗೆ ಮಾಜಿ ಸಂಸದೆ ಹಾಗೂ ನಟಿ ರಮ್ಯ ಮಾಧ್ಯಮಗಳ ಜೊತೆಗೆ ಸಂತಸ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದು ಬಹಳ ಖುಷಿ ತಂದಿದೆ. ಕಾಂಗ್ರೆಸ್ ನಾಯಕರು ಕೊಟ್ಟ ಭರವಸೆಗಳನ್ನು ಈಡೇರಿಸುತ್ತಾರೆ ಎಂಬ ನಂಬಿಕೆ 100% ರಷ್ಟಿದೆ. ಕಾಂಗ್ರೆಸ್ ನ ಹಿರಿಯ ನಾಯಕರುಗಳಿಗೆ ಸಚಿವ ಸಂಪುಟದಲ್ಲಿ ಅವಕಾಶವನ್ನ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರೆಂಟಿಗಳನ್ನು ಈಡೇರಿಸುತ್ತಾರೆ ಎಂಬ ಭರವಸೆ ನನಗೆ ಇದೆ. ಅದರಲ್ಲಿ ಅನುಮಾನವೇ ಇಲ್ಲ ಎಂದು ರಮ್ಯಾ ಹೇಳಿದ್ದಾರೆ.
ಡಿಪ್ಲೋಮಾ ಶಿಕ್ಷಿತರಿಗೆ ಪ್ರತಿ ತಿಂಗಳು ಹಣ ನೀಡುತ್ತಾರೆ. ಗೃಹಿಣಿಯರಿಗೆ 2000 ಹಣ ನೀಡುತ್ತಾರೆ. ಮತ್ತೆ ಅನ್ನಭಾಗ್ಯ ಅಂತೂ ಕೊಟ್ಟೆ ಕೊಡುತ್ತಾರೆ. ಕಳೆದ ಬಾರಿ ಅನ್ನಭಾಗ್ಯ ಯೋಜನೆ ತಂದಾಗ ಅದರಿಂದ ಬಹಳಷ್ಟು ಬಡಜನರಿಗೆ ಒಳ್ಳೆಯದಾಗಿತ್ತು. ಆ ಯೋಜನೆಯನ್ನು ಈಗ ಮತ್ತೆ ತರುವ ನಿರೀಕ್ಷೆ ಇದೆ ಎಂದು ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ.