News Karnataka Kannada
Friday, April 19 2024
Cricket
ಸಾಂಡಲ್ ವುಡ್

ಜನರಿಗೆ ತಮ್ಮ ಜವಾಬ್ದಾರಿಯ ಅರಿವಿದೆ: ಸೂಪರ್‌ ಸ್ಟಾರ್‌ ಯಶ್‌

People are aware of the responsibility: Actor Yash
Photo Credit : News Kannada

ಬೆಂಗಳೂರು: ಮತದಾನ ಮಾಡುವ ಕುರಿತು ಜನರಿಗೆ ಸಂದೇಶ ನೀಡುವ ಅಗತ್ಯವಿಲ್ಲ. ಅವರಿಗೆ ತಮ್ಮ ಜವಾಬ್ದಾರಿಯ ಅರಿವಿದೆ ಎಂದು ಸೂಪರ್‌ ಸ್ಟಾರ್‌ ಯಶ್‌ ಹೇಳಿದ್ದಾರೆ. ಬುಧವಾರ ಮತಚಲಾವಣೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

“ನಾನು ನನ್ನ ಕರ್ತವ್ಯ ಮಾಡಿದ್ದೇನೆ, ಪ್ರತಿಯೊಬ್ಬ ಮತದಾರರು ಮತ ಚಲಾಯಿಸಬೇಕು ಎಂದು ಅವರು ಹೇಳಿದರು. ಪ್ರಚಾರದಲ್ಲಿ ಏಕೆ ಭಾಗವಹಿಸಲಿಲ್ಲ ಎಂಬ ಪ್ರಶ್ನೆಗೆ, ನನಗೆ ಆಸಕ್ತಿಯಿಲ್ಲ, ಆ ಕಾರಣಕ್ಕಾಗಿ ಈ ಬಾರಿ ರಾಜಕೀಯ ಪಕ್ಷಗಳ ಪ್ರಚಾರಕ್ಕೆ ಮುಂದಾಗಿಲ್ಲ ಎಂದು ಯಶ್ ಹೇಳಿದರು.

“ಕಳೆದ ಬಾರಿ ಕೆಲ ಕಾರಣಕ್ಕೆ ಪ್ರಚಾರದಲ್ಲಿ ಪಾಲ್ಗೊಂಡಿದ್ದೆ. ಅಲ್ಲದೆ ನಾನು ‘ಯಶೋಮಾರ್ಗ’ ಸಂಘಟನೆಯ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಮತದಾನ ಮೂಲಭೂತ ಹಕ್ಕು ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಆರೋಗ್ಯ, ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳನ್ನು ಜನರಿಗೆ ರಾಜಕೀಯ ಪಕ್ಷಗಳು ಒದಗಿಸಿಕೊಡಬೇಕು ಎಂದು ಯಶ್‌ ಹೇಳಿದರು. 2019ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಯಶ್ ಪ್ರಚಾರ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು