News Kannada
Thursday, September 28 2023
ಗಾಂಧಿನಗರ

ಎಲ್ಲಿ ನೋಡಿದರೂ ಸನಾತನ ಧರ್ಮದ ಅವಹೇಳನ: ಅನಂತ್‌ನಾಗ್‌ ಬೇಸರ

Sanatan Dharma insulted everywhere: Anant Nag
Photo Credit : Facebook

ಬೆಂಗಳೂರು: ಸನಾತನ ಧರ್ಮದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಪರ ವಿರೋಧ ಚರ್ಚೆಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಹಿರಿಯ ನಟ ಅನಂತನಾಗ್‌ ಮಾತನಾಡಿದ್ದಾರೆ.

ಸನಾತನ ಧರ್ಮದ ಮಹತ್ವ ಅರಿಯದೇ ಅದರ ಬಗ್ಗೆ ಕೆಟ್ಟದಾಗಿ ಟೀಕೆ ಮಾಡುತ್ತಾರೆ. ಅಜ್ಮಾನದಿಂದ ಮಾತನಾಡುವವರನ್ನು ತಿದ್ದುವ ಕೆಲಸ ನಡೆಯಬೇಕು ಎಂದು ಹೇಳಿದ್ದಾರೆ.

ಭಾರತೀಯ ವಿದ್ಯಾಭವನ ಮತ್ತು ಸುಚಿತ್ರ ಫಿಲಂ ಸೊಸೈಟಿ ಆಯೋಜಿಸಿದ್ದ ಮೂರು ದಿನಗಳ ಅನಂತ್‌ ನಾಗ್‌ ಉತ್ಸವದಲ್ಲಿ ಅವರು ಮಾತನಾಡಿದರು, ಸಾವಿರಾರು ವರ್ಷಗಳಿಂದ ಸನಾತನ ಧರ್ಮ ಬೆಳೆದು ಬಂದಿದೆ. ಹಲವು ಮೈಲಿಗಲ್ಲುಗಳನ್ನು ಸಾಧಿಸಿದೆ. ಈ ಧರ್ಮದ ಬಗ್ಗೆ ನನಗೆ ಭಕ್ತಿ, ಗೌರವ, ಪ್ರೀತಿಯಿದೆ.

ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಈಗ ಎಲ್ಲಿ ನೋಡಿದರೂ ಸನಾತನ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ. ಇದು ಆತಂಕವನ್ನುಂಟು ಮಾಡಿದೆ. ಕೈಲಾಗದವರು ಮೈ ಪರಚಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಸನಾತನ ಧರ್ಮದ ಕುರಿತು ಅರಿವು ಮೂಡಿಸುವ ಕೆಲಸ ನಡೆಯಬೇಕು ಎಂದರು.

See also  ಮಾರ್ಚ್ 03 'ವಿಶ್ವ ಕನ್ನಡ ಸಿನಿಮಾ ದಿನ': ಸಿಎಂ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು