ಬೆಂಗಳೂರು: ನಟ ರಮೇಶ್ ಅರವಿಂದ ರಾಜಕೀಯದ ಕುರಿತು ಮಾತನಾಡಿದ್ದು, ತಾವೆಂದು ರಾಜಕೀಯ ಕ್ಷೇತ್ರಕ್ಕೆ ಹೋಗುವುದಿಲ್ಲ. ನನಗೆ ಅದು ಹಿಡಿಸುವುದಿಲ್ಲ ಎಂದಿದ್ದಾರೆ. ನನಗೆ ಪ್ರಚಾರಕ್ಕೆ ಬನ್ನಿ ಅಂತ ಹಲವು ಪಕ್ಷದವರು ಕರೆದಿದ್ದರು. ಆದರೆ, ಹೋಗಲಿಲ್ಲ. ನಾನು ರಾಜಕೀಯಕ್ಕೆ ತಲೆ ಹಾಕುವುದಿಲ್ಲ. ಎಲ್ಲರೂ ನನಗೆ ಗೆಳೆಯರೇ, ಎಲ್ಲ ಪಕ್ಷದಲ್ಲೂ ಗೆಳೆಯರಿದ್ದಾರೆ. ನನ್ನ ಮಗಳ ಮದುವೆಗೆ ಆ ಪಕ್ಷ, ಈ ಪಕ್ಷ ಅಂತ ನೋಡದೇ ಎಲ್ಲ ಪಕ್ಷದ ನಾಯಕರೂ ಬಂದಿದ್ದರು ಎಂದು ತಿಳಿಸಿದ್ದಾರೆ.
ಚುನಾವಣಾ ಅಖಾಡದಲ್ಲಿ ತಾರೆಗಳ ರಂಗು: ಶಿವರಾಜಕುಮಾರ್, ಕಿಚ್ಚ ಸುದೀಪ್, ಧ್ರುವ ಸರ್ಜಾ, ಪ್ರೇಮ್ ದಿಗಂತ್, ಹರ್ಷಿಕಾ ಪೂಣಚ್ಚ ಸೇರಿದಂತೆ ಕನ್ನಡದ ಹಲವು ತಾರೆಯರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿಕೊಂಡಿರುವುದನ್ನು ನಾವು ಗಮನಿಸಬಹುದು.