News Kannada
Friday, June 09 2023
ಹೊರನಾಡ ಕನ್ನಡಿಗರು

ಕರ್ನಾಟಕ ಸಂಘ ಶಾರ್ಜಾ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Satish Poojary elected as new President of Karnataka Sangha Sharjah
Photo Credit : News Kannada

ದುಬಾಯಿ: ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕಾರ್ಯೊನ್ಮುಖವಾಗಿರುವ ಕರ್ನಾಟಕ ಪರ ಸಂಘಟನೆಗಳ ಸಾಲಿನಲ್ಲಿ ಕರ್ನಾಟಕ ಸಂಘ ಶಾರ್ಜಾ ಎರಡು ದಶಕಗಳನ್ನು ಪೂರ್ತಿಗೊಳಿಸಿ, ಇಪ್ಪತ್ತೊಂದನೆಯ ವರ್ಷದತ್ತ ಮುನ್ನಡೆಯುತ್ತಿದೆ.

೨೦೨೩ ಮಾರ್ಚ್ ೧೧ನೇ ತಾರೀಕಿನಂದು ಸಂಜೆ ದುಬಾಯಿ ಫಾರ್ಚೂನ್ ಅಟ್ರಿಯಂ ಹೋಟೆಲ್ ಸಭಾಂಗಣದಲ್ಲಿ ಶಾರ್ಜಾ ಕರ್ನಾಟಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.

ಕರ್ನಾಟಕ ಸಂಘ ಶಾರ್ಜಾದ ೧೨ನೇ ಅಧ್ಯಕ್ಷರಾಗಿ  ಸತೀಶ್ ಪೂಜಾರಿಯವರು ಎರಡನೆಯ ಬಾರಿಗೆ ಸರ್ವಾನುಮತದಿಂದ
ಆಯ್ಕೆಯಾಗಿದ್ದಾರೆ. ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಪ್ರಾರ್ಥನೆ, ಸ್ವಾಗತದೊಂದಿಗೆ ಪ್ರಾರಂಭವಾಗಿ ಪೋಷಕರಾದ  ಮಾರ್ಕ ಡೆನಿಸ್ ಡಿ’ಸೋಜಾ ಎರಡು ದಶಕಗಳು ನಡೆದುಬಂದ ಹಾದಿಯ ಸಾಧನೆಗಳ ಸಂಪೂರ್ಣ ಮಾಹಿತಿಯನ್ನು ಸಭೆಯ ಮುಂದಿಟ್ಟರು.

ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿಯವರು ವಾರ್ಷಿಕ ವರದಿವಾಚಿಸಿ ಅನುಮೋದನೆಯನ್ನು ಪಡೆದುಕೊಂಡರು. ಖಜಾಂಚಿ  ಮಹ್ಮದ್ ಅಬ್ರಾರ್ ರವರು ಅಯ ವ್ಯಯ ಲೆಕ್ಕ ಪತ್ರವನ್ನು ಮಂಡಿಸಿ ಸರ್ವ ಸದಸ್ಯರ ಅನುಮತಿಯನ್ನು ಪಡೆದುಕೊಂಡರು.

ಉಪಾಧ್ಯಕ್ಷರಾದ  ನೋಯಲ್ ಅಲ್ಮೆಡಾ ರವರು ತಮ್ಮ ಅವಧಿಯಲ್ಲಿ ನಡೆದ ಕಾರ್ಯಕ್ರಮಗಳ ಯಶಸ್ಸಿನ ಹಿಂದಿನ ರುವಾರಿಗಳ ಸಾಧನೆಗಳನ್ನು ಶ್ಲಾಘಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಅಧ್ಯಕ್ಷರಾದ  ಮಹ್ಮದ್ ಇಬ್ರಾಹಿಂ ಮೂಳೂರ್ ರವರು ತಮ್ಮ ಅಧಿಕಾರದ ಅವಧಿಯಲ್ಲಿ ಅನಿರೀಕ್ಷಿತ ಕೊರೋನದ ಕಷ್ಟಕರ ದಿನಗಳು ಎದುರಾಗಿದ್ದು ಮಂಗಳೂರಿನಲ್ಲಿ ಸAಕಷ್ಟದಲ್ಲಿದ್ದ ಹಲವಾರು ಕುಟುಂಬಗಳಿಗೆ ಮತ್ತು ಮಧ್ಯ ಕರ್ನಾಟಕದ ಅಮೀನಗಡದಲ್ಲಿ ಸಹ ಹೆಚ್ಚಿನ ಕುಟುಬದವರಿಗೆ ಸಹಾಯ ಹಸ್ತ ನೀಡಿರುವುದು, ಉಡುಪಿ ಜಿಲ್ಲಾಧಿಕಾರಿಗಳ ಸಂತಸ್ತç ನಿಧಿಗೆ ಒಂದು ಲಕ್ಷ ದೇಣಿಗೆಯನ್ನು ನೀಡಿರುವುದು, ರಕ್ತದಾನ ಶಿಬಿರ, ಕ್ರೀಡಾಕೂಟ, ಕರ್ನಾಟಕ ರಾಜ್ಯೋತ್ಸವ ಸಮಾರಂಭ, ಮಯೂರ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ ಪ್ರಧಾನ, ಇತ್ಯಾದಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿಸುವಲ್ಲಿ ಸಹಕಾರ ನೀಡಿರುವ ಸರ್ವರನ್ನು ಸ್ಮರಿಸಿಕೊಂಡು ಕೃತಜ್ಞತೆಗಳನ್ನು ಸಲ್ಲಿಸಿ ತಮ್ಮ ಅಧಿಕಾರವನ್ನು ಹಸ್ತಾಂರಿಸುವ ಮುನ್ನ ವಿದಾಯ ಭಾಷಣ ಮಾಡಿದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಚುನಾವಣಾ ಅಧಿಕಾರೈಯಾಗಿ ಕರ್ನಾಟಕ ಸಂಘದ ಪೂರ್ವ ಅಧ್ಯಕ್ಷರಾದ  ಬಿ. ಕೆ. ಗಣೇಶ್ ರೈಯವರು ೨೦೨೩- ೨೦೨೪ನೇ ಸಾಲಿನ ನೂತನ ಅಧ್ಯಕ್ಷರು ಹಾಗೂ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಹೆಸರುಗಳನ್ನು ಘೋಷಿಸಿ ವೇದಿಕೆಗೆ ಬರಮಾಡಿಕೊಂಡರು. ಪೋಷಕರಾದ  ಮಾರ್ಕ್ ಡೆನಿಸ್ ಡಿ’ಸೋಜಾರವರು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿದಿ ವಿಧಾನಗಳನ್ನು ಬೋಧಿಸಿದರು.

ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ  ಸತೀಶ್ ಪೂಜಾರಿಯವರು ತಮ್ಮನು ಆಯ್ಕೆ ಮಾಡಿದವರಿಗೆ ಕೃತಜ್ಞತೆಗಳ್ಲು ಸಲ್ಲಿಸಿ, ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಿ ಯಶಸ್ವಿ ಪಥದಲ್ಲಿ ಮುನ್ನಡೆಸುವ ಅಸ್ವಾಸನೆಯನ್ನು ನೀಡಿದರು.

ನೂತನ ಸಮಿತಿಗೆ ಪೂರ್ವ ಅಧ್ಯಕ್ಷರುಗಳಾದ ಶ್ರೀಯುತರುಗಳಾದ ಆನಂದ್ ಬೈಲೂರ್, ಪ್ರಭಾಕರ ಅಂಬಲ್ತೆರೆ, ಎಂ.ಇ. ಮೂಳೂರು ಹಾಗೂ ಬಿ. ಕೆ. ಗಣೇಶ್ ರೈಯವರು ಕಾರ್ಯಕ್ರಮ ನಿರೂಪಣೆಯ ಜವಬ್ಧಾರಿಯೊಂದಿಗೆ ಶುಭವನ್ನು ಹಾರೈಸಿದರು.

ಕರ್ನಾಟಕ ಸಂಘ ಶಾರ್ಜಾದ ನೂತನ ಪ್ರಧಾನ ಕಾರ್ಯದರ್ಶಿ  ವಿಘ್ನೇಶ್ ಕುಂದಾಪುರ ಸರ್ವರಿಗೂ ವಂದನಾರ್ಪಣೆಯನ್ನು ಸಲ್ಲಿಸಿದರು.

See also  ಕೆಡಿಎಂಸಿ ಕಾರ್ಪೋರೇಟರ್ ದಯಶಂಕರ್ ಶೆಟ್ಟಿ ನೇತೃತ್ವದಲ್ಲಿ ಆಹಾರ ವಸ್ತುಗಳ ವಿತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು