News Kannada
Saturday, June 03 2023
ಹೊರನಾಡ ಕನ್ನಡಿಗರು

ಜಪಾನ್‌ನಲ್ಲಿ ಮೇಳೈಸಿದ 37ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭ

37th International Cultural Festival held in Japan
Photo Credit : News Kannada

ಮುಂಬಯಿ (ಜಪಾನ್ ನರಿಟಾ), ಆರ್‌ಬಿಐ, ಎ.10:  ಪ್ರತಿಯೊಬ್ಬರು ಸಾಂಸ್ಕೃತಿಕವಾಗಿ ತೊಡಿಸಿಕೊಳ್ಳುವುದು ಸಮಾಜಕ್ಕೆ ನೀಡುವ ಸೃಜನಶೀಲ ಕೊಡುಗೆ ಆಗಿರುತ್ತದೆ ಎಂದು ವಿಜಾಪುರದ ಡಾ. ನಾಗೂರ್ ಎಜುಕೇಶನ್ ಟ್ರಸ್ಟ್ ನ ಮ್ಯಾನೇಂಗ್ ಟ್ರಸ್ಟಿ ಹಾಗೂ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ಸ್ ಫೆಡೆರೇಷನ್ ಅಧ್ಯಕ್ಷ ಡಾ. ಕೆ.ಬಿ ನಾಗೂರ್ ಅಭಿಪ್ರಾಯಪಟ್ಟರು.

ಕಳೆದ ಶುಕ್ರವಾರ  ಜಪಾನಿನ ಟೋಕಿಯೋ ಸಮೀಪದ ನರಿಟಾ ನಗರದ ಕ್ರೇನ್ ಬಾಂಕ್ವೆಟ್ ಸಭಾಂಗಣದಲ್ಲಿ ನಡೆಸಲ್ಪಟ್ಟ 37ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಶಿವಗಂಗಾ ಕ್ಷೇತ್ರ ಮೇಲಣ ಗವಿಮಠದ ಡಾ. ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾಚನ ನೀಡಿ ನಮ್ಮ ಕಲೆ ಮತ್ತು ಸಂಸ್ಕೃತಿಗಳು ಸಮಾಜಕ್ಕೆ ಬೆಳಕು ಚೆಲ್ಲುವ ದೀವಿಗೆಗಳಿದ್ದಂತೆ. ಅವುಗಳನ್ನು ಸಾಗರದ ಆಚೆಯೂ ಪಸರಿಸುವುದು ಸಾಹಸದ ಕೆಲಸ. ಅಂತಹ ಕೆಲಸ ಮಾಡುವವರಿಗೆ ದೇವರು ಇನ್ನಷ್ಟು ಶಕ್ತಿಯನ್ನು ನೀಡಲಿ ಎಂದರು.

ಐಸಿಎಫ್‌ಸಿ (ಇಂಡಿಯಾ) ಅಧ್ಯಕ್ಷ ಇಂ. ಕೆ.ಪಿ ಮಂಜುನಾಥ್ ಸಾಗರ್ ಮಾತನಾಡಿ ಭಾರತೀಯ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್, ಹೃದವಾಹಿನಿ-ಕರ್ನಾಟಕ ಮತ್ತು ಮಂಜುನಾಥ್ ಎಜುಕೇಶನ್ ಟ್ರಸ್ಟ್ ಸುಮಾರು 20 ವರ್ಷಗಳಿಂದ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.  ನಾವು ವಿಶ್ವ ಸೌಹಾರ್ದ ಪ್ರಿಯರು ಎಂಬ ಧ್ಯೇಯ ವಾಕ್ಯದ ಅಡಿಯಲ್ಲಿ. ವಿದೇಶಗಳಲ್ಲಿ ಅಲ್ಲಿಯ ಕನ್ನಡಿಗರು ಮತ್ತು ಕನ್ನಡಿಗರ ಸಂಸ್ಥೆಗಳ ಮೂಲಕ ವಿಶ್ವ ಕನ್ನಡ ಸಮ್ಮೇಳನ ಮತ್ತು ಅಂತರಾಷ್ಟ್ರೀಯ ಸಾಂಸ್ಕೃತ ಸೌರಭ ಸಮಾರಂಭಗಳನ್ನು ನಿರಂತರವಾಗಿ ಆಯೋಜಿಸುತ್ತಿವೆ. 2004 ರಿಂದ ಈಚೆಗೆ 40 ದೇಶಗಳಲ್ಲಿ 53ಕ್ಕೂ ಹೆಚ್ಚು ಸೌರಭ ಮತ್ತು ಸಮ್ಮೇಳನಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ಹೆಗ್ಗಳಿಕೆ ನಮ್ಮ ಸಂಸ್ಥೆಗಳದ್ದಾಗಿದೆ ಎಂದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ ಕರ್ನಾಟಕವು ಡಿಜಿಟಲ್ ಗ್ರಂಥಾಲಯದಲ್ಲಿ ವಿಶ್ವ ಮಟ್ಟ ಅತೀ ಹೆಚ್ಚು ಸದಸ್ಯರನ್ನು ಹೊಂದಿ ದಾಖಲೆ ಮಾಡಿ ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಿದೆ. ಜಪಾನಿನ ಕನ್ನಡಿಗರು ಸಹ ತಮ್ಮ ಹೆಸರು ನೋಂದಾಯಿಸಿ ಕೊಂಡು ಉಚಿತವಾಗಿ ಸೇವೆಯನ್ನು ಪಡೆದುಕೊಳ್ಳುವಂತೆ ಕೋರಿದರು.

ಟೋಕಿಯೋ ಅನಿವಾಸಿ ಉದ್ಯಮಿ ರವಿ ರಾಮಕೃಷ್ಣ ಮಾತನಾಡಿ, ಜಪಾನಿಯರು ಶಿಸ್ತು ಮತ್ತು ಶ್ರಮ ಜೀವಿಗಳು ಹಾಗಾಗಿ ಈ ದೇಶ ವಿಶ್ವಮಟ್ಟದಲ್ಲಿ ಶ್ರೇಷ್ಠ ಸ್ಥಾನಮಾನ ಹೊಂದಿದೆ. ಇಲ್ಲಿಯ ಜೀವನ ಕಷ್ಟ, ಆದರೆ ಶ್ರಮ ಪಡುವವರಿಗೆ ಯಶಸ್ಸು ನಿಶ್ಚಿತ ಎಂದರು.

ಜಪಾನ್ ನ್ಯಾಶನಲ್ ಇನ್ಸಿಟ್ಯೂಟಿನ ಸಂಶೋಧನಾ ವಿಜ್ಞಾನಿ ಮನು ಮಳ್ಳಹಳ್ಳಿ, ಮೈಸೂರಿನ ಪ್ರೊ. ಆರ್.ಎನ್ ಜಗದೀಶ್, ಸ್ವಾಮಿ ಎಂಟರ್‌ಪ್ರೈಸಸ್‌ನ ಆಡಳಿತ ನಿರ್ದೇಶಕ ಗೋ.ನಾ ಸ್ವಾಮಿ, ಬೆಂಗಳೂರುನ ಮೈಕ್ರಾನ್ ಎಲೆಕ್ಟ್ರಿಕಲ್ಸ್ ಡೈರೆಕ್ಟರ್(ಪ್ರೊಜೆಕ್ಟ್) ಡಾ. ವಿ. ನಾಗರಾಜು ಅತಿಥಿಗಳಾಗಿದ್ದರು. ಸಾಧಕರಾದ ಶಂಕ್ರೆ ಗೌಡ ಮೈಸೂರು, ಡಾ. ವಿ. ನಾಗರಾಜು ಬೆಂಗಳೂರು, ಡಾ. ಸತೀಶ್ ಕುಮಾರ್ ಹೊಸಮನಿ, ಪ್ರಭಾ ಸುವರ್ಣ ಮುಂಬಯಿ ಮತ್ತು ಕೃಷ್ಣ ಬಿ.ಶೆಟ್ಟಿ ಮುಂಬಯಿ  ಅವರಿಗೆ ಚೇರಿ ಬ್ಲೋಸಮ್ ಅವಾರ್ಡ್ 2023 ಪ್ರದಾನಿಸಿ ಗೌರವಿಸಲಾಯಿತು.

See also  ಬೆಳ್ತಂಗಡಿ: ಕಾಡಾನೆ ದಾಳಿ, ಕೃಷಿ ತೋಟಕ್ಕೆ ಹಾನಿ

ಡಾ. ಆಶೋಕ್ ನರೋಡೆ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಜರುಗಿತು. ಕವಿಗಳಾದ ಎಂ.ಪಿ ವರ್ಷ ಮೈಸೂರು, ಗೋವಿಂದ ರಾವ್ ಮೂರ್ತಿ ಮತ್ತು ಪ್ರಭಾ ಸುವರ್ಣ ಸ್ವರಚಿತ ಕವನಗಳನ್ನು ವಾಚಿಸಿದ್ದು ಹುಬ್ಬಳ್ಳಿಯ ನೃತ್ಯಾಂಜಲಿ ನೃತ್ಯ ಕಲಾ ಕೇಂದ್ರದ ಕಲಾವಿದರಾದ ವಿದುಷಿ ಸಿರಿ ಕಿಣಿ, ವಿದುಷಿ ಡಾ. ಮೇಘನಾ ಮತ್ತು ದಿಶಾ ನಾಯಕ್ ನೃತ್ಯ ಪ್ರದರ್ಶನ ನೀಡಿದರು. ಗೋ.ನಾ ಸ್ವಾಮಿ, ಶಿವು ಪಾಂಡೇಶ್ವರ ಮತ್ತು ಮನು ಮಂಗಳೂರು ಜಾನಪದ ಗೀತೆ  ಹಾಡಿ ರಂಜಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು