News Kannada
Thursday, November 30 2023
ಯುಎಇ

ಅದ್ದೂರಿಯಾಗಿ ನಡೆದ ದುಬೈ ಕನ್ನಡ ರಾಜ್ಯೋತ್ಸವ

Dubai Kannada Rajyotsava held
Photo Credit : News Kannada

ದುಬೈ: ಕನ್ನಡಿಗರ ಕನ್ನಡ ಕೂಟ ದುಬೈ,ಯುಎಇ ವತಿಯಿಂದ 20ನೇ ವರ್ಷದ ಸಂಭ್ರಮಾಚರಣೆಯ ಕರ್ನಾಟಕ ರಾಜ್ಯೋತ್ಸವವು ನ. 11ರಂದು ಸಂಜೆ 4ರಿಂದ ಅಲ್ ಕ್ವಾಸಿಸ್ ನಲ್ಲಿರುವ ಕ್ರೆಸೆಂಟ್ ಇಂಗ್ಲಿಷ್ ಶಾಲೆಯ ಹೊರಾಂಗಣ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಕಾಪ್ಟನ್ ಮತ್ತು ಏರ್ ಡೆಕ್ಕನ್ ಸಂಸ್ಥಾಪಕರಾದ ಕ್ಯಾಪ್ಟನ್ ಗೋಪಿನಾಥ್ ಅವರಿಗೆ ಅಂತರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿಯನ್ನುನೀಡಿ ಗೌರವಿಸಲಾಯಿತು. ಅಂತರಾಷ್ಟ್ರೀಯ ಕನ್ನಡ ಹಾಸ್ಯ ರತ್ನ ಪ್ರಶಸ್ತಿಯನ್ನು ಖ್ಯಾತ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ನೀಡಿ ಗೌರವಿಸಿದರೆ, ಕನ್ನಡಿಗರು ಕನ್ನಡ ಕೂಟ ದುಬೈ ಕೊಡಮಾಡುವ ಅಂತರಾಷ್ಟ್ರೀಯ ಡಾ. ಪುನೀತ್ ರಾಜಕುಮಾರ್ ಪ್ರಶಸ್ತಿಯನ್ನು ಅನಿವಾಸಿ ಉದ್ಯಮಿ ಜ್ಹೈನ್ ಗ್ರೂಪ್ ಆಫ್ ಹೋಟೆಲ್ಸ್, ದುಬೈ ಮಾಲೀಕರಾದ ಝಫರುಲ್ಲಾ ಖಾನ್ ಮಂಡ್ಯ ಅವರಿಗೆ ನೀಡಿ ಸತ್ಕರಿಸಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಅಜ್ಮಾನ್ ಆಡಳಿತ ಕುಟುಂಬ ಸದಸ್ಯ ಮೊಹಮ್ಮದ್ ಸಈದ್ ಅಲ್ ನಯೋಮಿ ಮತ್ತು ದುಬೈ ನಾಗರಿಕ ಉದ್ಯಮಿ ದಾವೂದ್ ಅಬ್ದುಲ್ಲಾ, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾದ ಸತೀಶ್ ಪೂಜಾರಿ, ಉದ್ಯಮಿಗಳಾದ ಕನಕರಾಜ್ (BM ಗ್ರೂಪ್ ಆಫ್ ಕಂಪನೀಸ್), ಜೋಸೆಫ್ ಮಥಾಯಿಸ್, ಗಣಪತಿ ಭಟ್ ಯಕ್ಷಗಾನ ಕಲಾ ಪೋಷಕರು, ಅಲ್ಲದೆ ಸಲಹಾ ಸಮಿತಿಯ ಸದಸ್ಯರಾದ ಇಬ್ರಾಹಿಂ ಖಲೀಲ್, ರೊನಾಲ್ಡ್ ಮಾರ್ಟಿಸ್, ಮಂಜುನಾಥ್ ರಾಜನ್, ಛಾಯಾದೇವಿ, ಸಂಘದ ಮಾಜಿ ಅಧ್ಯಕ್ಷರುಗಳಾದ ವೀರೇಂದ್ರ ಬಾಬು ಮತ್ತುಉಮಾ ವಿದ್ಯಾಧರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಸಂಗೀತ ಸಂಜೆಯ ಮೂಲಕ ನೆರೆದವರನ್ನು ಗಾಯಕಿ ಭೂಮಿಕಾ ಮಧುಸೂದನ್ ಅವರು ರಂಜಿಸಿದರು, ಪಾರ್ವತಿ ನೃತ್ಯ ವಿಹಂಗಮ ಬೆಂಗಳೂರು ತಂಡ ಮತ್ತು ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ನೃತ್ಯ ಹಾಡುಗಾರಿಕೆ ಮುಂತಾದ ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತಮ್ಮ ಹಾಸ್ಯ ಮಾತುಗಳ ಮೂಲಕ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಹಾಮನಿ ಅವರು ನೆರೆದ ಜನರನ್ನು ರಂಜಿಸಿದರು. ಮಾತೃಭಾಷಾ ಕನ್ನಡ ಪರಿಷತ್ ನ ಚಂದನ್ ಅವರು ಕನ್ನಡ ಕಲಿಕೆ ತಂತ್ರಾಂಶ ಅನಾವರಣಗೊಳಿಸಿದರು.

ದುಬೈ ಕನ್ನಡ ಕೂಟದ ಅಧ್ಯಕ್ಷರಾದ ಸದನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ನೆಡೆದ ಕಾರ್ಯಕ್ರಮವನ್ನು ಸವಿಪ್ರಕಾಶ್ ಅವರು ನಿರೂಪಿಸಿದರೆ, ವಿನಾಯಕ್ ಹೆಗಡೆಯವರು ನಿರೂಪಣೆಯಲ್ಲಿ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ವೆಂಕಟರಮಣ ಕಾಮತ್ ಅವರು ಸರ್ವರನ್ನು ಸ್ವಾಗತಿಸಿದರೆ, ಜಂಟಿ ಕಾರ್ಯದರ್ಶಿಗಳಾದ ವಿನೀತ್ ರಾಜ್ ಅವರು ಲಕ್ಕಿ ಡಿಪ್ ಕಾರ್ಯಕ್ರಮವನ್ನು ನೆಡೆಸಿಕೊಟ್ಟರು. ಅಂತಿಮವಾಗಿ ಚೇತನ್ ಸುಬ್ರಹ್ಮಣ್ಯ ಅವರ ವಂದನಾರ್ಪಣೆಯೊಂದಿಗೆ ಸಮಾರಂಭವನ್ನು ಮುಕ್ತಾಯಗೊಳಿಸಲಾಯಿತು.

See also  ಅಬುಧಾಬಿ: ಪ್ರೇಕ್ಷಕರನ್ನು ರಂಜಿಸಿದ ಕೊಂಕಣಿ ನಾಟಕ ಸಿಕೇರಾಮ್ ಡ್ರೈವರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು