ಕಲಬುರಗಿ : ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಗ್ರಾಮಗಳಲ್ಲಿ ಸಂಭವಿಸಿದ ಭೂಕಂಪನಗಳ ಬಗ್ಗೆ ಅಧ್ಯಯನ ನಡೆಸಿದ ತಜ್ಞರ ತಂಡ ಸರ್ಕಾರಕ್ಕೆ ವರದಿ ನೀಡಲಿದ್ದು, ರಾಸಾಯನಿಕ ಪ್ರಕ್ರಿಯೆಗಳಿಂದಾಗಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಲಘು ಭೂಕಂಪವಾಗುತ್ತಿದೆ. ರಾಜ್ಯದಲ್ಲಿ ಭಾರಿ ಪ್ರಮಾಣದ ಭೂಕಂಪ ಆಗುವುದಿಲ್ಲ. ಹೀಗಾಗಿ ರಾಜ್ಯದ ಜನರ ಭಯಪಡಬೇಕಾದ ಅಗತ್ಯವಿಲ್ಲ ಎಂದು ತಜ್ಞರ ತಂಡ ಹೇಳಿದೆ.
ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಂಭವಿಸಿದ ಲಘು ಭೂಕಂಪನದ ಕುರಿತು ಕಳೆದ ಕೆಲವು ದಿನಗಳಿಂದ ತಜ್ಞರು ಅಧ್ಯಯನ ನಡೆಸುತ್ತಿದ್ದಾರೆ. ಸದ್ಯ ಈಗ ರಾಸಾಯನಿಕ ಪ್ರಕ್ರಿಯೆಗಳಿಂದಾಗಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಲಘು ಭೂಕಂಪವಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಸಣ್ಣ ಪ್ರಮಾಣದ ಭೂಕಂಪದಿಂದ ಆತಂಕಕ್ಕೊಳಗಾಗಬೇಕಿಲ್ಲ. ಜಗತ್ತಿನಲ್ಲಿ ಪ್ರತಿ ವರ್ಷ 20 ಲಕ್ಷ ಭೂಕಂಪಗಳು ಆಗುತ್ತವೆ ಎಂದು ಅಧ್ಯಯನ ಮಾಡಿದ ವಿಜ್ಞಾನಿಗಳ ತಂಡ ಮಾಹಿತಿ ನೀಡಿದೆ.