News Karnataka Kannada
Saturday, April 20 2024
Cricket
ಕರ್ನಾಟಕ

ಚಿಕ್ಕರಸಿನಕೆರೆಯಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ: ರೈತರಲ್ಲಿ ಆತಂಕ

Photo Credit :

ಚಿಕ್ಕರಸಿನಕೆರೆಯಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ: ರೈತರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಭತ್ತಕ್ಕೆ ಬೆಂಕಿ ರೋಗ ಕಾಣಿಸಿಕೊಳ್ಳುವ ಮೂಲಕ ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಅಡೀಗೌಡರ ಮಗ ನಿಂಗೇಗೌಡರ ಜಮೀನಿನಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ನಿಂಗೇಗೌಡ ಅವರು ಎಂದಿನಂತೆ ತಮ್ಮ ಮೂರೂವರೆ ಎಕರೆ ಜಮೀನಿನಲ್ಲಿ ಭತ್ತ ಬೆಳೆದಿದ್ದರು. ಭತ್ತ ಇನ್ನೇನು ಕೈಗೆ ಬರುವ ಸಂದರ್ಭದಲ್ಲಿಯೇ ಬೆಂಕಿ ರೋಗ ಕಾಣಿಸಿಕೊಂಡು ನಷ್ಟ ಅನುಭವಿಸುವಂತಾಗಿದೆ. ಮೊದಲಿಗೆ ಅಲ್ಲಲ್ಲಿ ಕಾಣಿಸಿಕೊಂಡ ಬೆಂಕಿರೋಗ ಇದೀಗ ನಿಂಗೇಗೌಡರವರ ಮೂರೂವರೆ ಎಕರೆ ಜಮೀನಿನಲ್ಲಿನ ಬೆಳೆದಿರುವ ಬೆಳೆಯನ್ನು ಸಂಪೂರ್ಣವಾಗಿ ಆವರಿಸಿದೆ.

ವಿಷಯ ತಿಳಿದು  ಕೃಷಿ ಇಲಾಖೆ ಅಧಿಕಾರಿಗಳು  ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಭತ್ತದ ಕೆಲ ಭಾಗಗಳನ್ನು ತೆಗೆದುಕೊಂಡು ಪ್ರಯೋಗಾಲದಲ್ಲಿ ಪರೀಕ್ಷೆಗೆ ಕಳುಹಿಸಿದ್ದಾರೆ. ಬೆಂಕಿ ರೋಗ ತಡೆಗೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಬೆಂಕಿ ರೋಗ ಕಾಣಿಸಿಕೊಂಡು ರೈತರು ನಷ್ಟ ಅನುಭವಿಸಬೇಕಾಗುತ್ತೆ. ರೋಗಬಾಧೆಗೆ ಒಳಗಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಮುಖಂಡ ನಿಂಗೇಗೌಡ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು