ಮಡಿಕೇರಿ: ಮಡಿಕೇರಿಯಲ್ಲಿ ಕಳೆದ ಸಾಲಿನಲ್ಲಿ ನಡೆದಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಅವರ ತಂದೆ, ತಾಯಿ, ಸಹೋದರ ಮತ್ತು ಸಹೋದರಿ ಸೇರಿದಂತೆ ನಾಲ್ವರನ್ನು ಪಿರ್ಯಾದಿದಾರರನ್ನನಾಗಿ ಪರಿಗಣಿಸಬೇಕೆ ಎನ್ನುವುದಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ನ್ಯಾಯಾಲಯದ ವಿಚಾರಣೆ ಫೆಬ್ರವರಿ 21ಕ್ಕೆ ಮುಂದೂಡಲ್ಪಟ್ಟಿದೆ.
ನಗರದ ಅಡಿಷನಲ್ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ಬಾಬು ಅವರು ಇದೇ ಜ.28 ರಂದು ಪ್ರಕರಣದ ವಿಚಾರಣೆಯನ್ನು ಮುಂದೂಡಿದರು.
ಕಳೆದ ಸಾಲಿನ ಸೆ.29 ರಂದು ಡಿವೈಎಸ್ಪಿ ಗಣಪತಿ ಅವರ ಪುತ್ರ ನೇಹಾಲ್ ಗಣಪತಿ ಅವರು, ಪ್ರಕರಣದ ಕುರಿತು ಸಿಐಡಿ ಸಲ್ಲಿಸಿದ್ದ ‘ಬಿ’ ಶೀಟ್ ವರದಿಗೆ ಸಮ್ಮತಿ ಸೂಚಿಸುವ ಮೂಲಕ ಪ್ರಕರಣದಿಂದ ಹಿಂದಕ್ಕೆ ಸರಿದಿದ್ದರು. ಆದರೆ, ಗಣಪತಿ ಅವರ ತಂದೆ ಕುಶಾಲಪ್ಪ, ತಾಯಿ ಪೊನ್ನಮ್ಮ, ಸಹೋದರ ಮಾಚಯ್ಯ ಮತ್ತು ಸಹೋದರಿ ಸಬಿತಾ ಅವರುಗಳು, ಒಟ್ಟು ಪ್ರಕರಣದಲ್ಲಿ ತಮ್ಮನ್ನು ಪಿರ್ಯಾದಿದಾರರನ್ನಾಗಿ ಪರಿಗಣಿಸುವಂತೆ ವಕೀಲರಾದ ಸುಮಂತ್ ಪಾಲಾಕ್ಷ ಅವರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.
ಗಣಪತಿ ಅವರ ತಂದೆ ತಾಯಿಯನ್ನು ಒಳಗೊಂಡಂತೆ ನಾಲ್ವರನ್ನು ಪ್ರಕರಣದಲ್ಲಿ ಪಿಯರ್ಾದಿದಾರರನ್ನಾಗಿ ಪರಿಗಣಿಸಿದಲ್ಲಿ ಪ್ರಕರಣಕ್ಕೆ ಮತ್ತೆ ಆರಂಭಗೊಳ್ಳುವ ಸಾಧ್ಯತೆಗಳಿದೆಯಾದರೂ, ಪ್ರಕರಣದ ಪಿಯರ್ಾದಿದಾರರನ್ನಾಗಿ ತಂದೆ, ತಾಯಿ ಸೇರಿದಂತೆ ನಾಲ್ವರನ್ನು ಪರಿಗಣಿಸದಿದ್ದಲ್ಲಿ ಒಟ್ಟು ಪ್ರಕರಣಕ್ಕೆ ತೆರೆ ಬೀಳಲಿದೆ.