News Kannada
Saturday, April 01 2023

ಕರ್ನಾಟಕ

ವೈದ್ಯಕೀಯ ಸೌಲಭ್ಯಗಳು ನಿವೃತ್ತ ಪೊಲೀಸರಿಗೂ ಬೇಕು: ನಿವೃತ್ತ ಅಧಿಕಾರಿಗಳ ಮನವಿ

Photo Credit :

ವೈದ್ಯಕೀಯ ಸೌಲಭ್ಯಗಳು ನಿವೃತ್ತ ಪೊಲೀಸರಿಗೂ ಬೇಕು: ನಿವೃತ್ತ ಅಧಿಕಾರಿಗಳ ಮನವಿ

ಮಡಿಕೇರಿ: ಕರ್ತವ್ಯ ನಿರತ ಪೊಲೀಸರಿಗೆ ಲಭ್ಯವಾಗುವ ವೈದ್ಯಕೀಯ ಸೌಲಭ್ಯಗಳು ನಿವೃತ್ತ ಪೊಲೀಸರಿಗೂ ಒದಗಿಸುವಂತಾಗಬೇಕು ಎಂದು ನಿವೃತ್ತ ಪೋಲಿಸ್ ಉಪ ಅಧೀಕ್ಷಕರಾದ ವೈ.ಡಿ.ಕೇಶವಾನಂದ ಅವರು ಅಭಿಪ್ರಾಯಪಟ್ಟಿದ್ದಾರೆ.      

ಕೊಡಗು ಜಿಲ್ಲಾ ಪೊಲೀಸ್ ಘಟಕ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ನಡೆದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಪಿ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಿವೃತ್ತ ಪೊಲೀಸರು ವೈದ್ಯಕೀಯ ವೆಚ್ಚ ಭರಿಸುವುದು ಕಷ್ಟಸಾಧ್ಯವಾಗಿದೆ. ಆದ್ದರಿಂದ ವೃತ್ತಿಯಲ್ಲಿರುವ ಪೊಲೀಸರಿಗೆ ಇರುವ ವೈದ್ಯಕೀಯ ಸೌಲಭ್ಯವನ್ನು ನಿವೃತ್ತ ಪೊಲೀಸರಿಗೂ ಮುಂದುವರೆಸುವಂತಾಗಬೇಕು. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಬೇಕಿದೆ ಎಂದು ಅವರು ಸಲಹೆ ನೀಡಿದರು.   

ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಾಜದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವುದು, ಅಪರಾಧ ಪ್ರಕರಣ ಕಡಿಮೆ ಮಾಡುವುದು, ಸಂಚಾರ ದಟ್ಟಣೆ ನಿಯಂತ್ರಣ ಮಾಡುವುದು, ಗಣ್ಯರು ಆಗಮಿಸುವ ಸಂದರ್ಭದಲ್ಲಿ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡುವುದು ಹೀಗೆ ದಿನದ 24 ಗಂಟೆಯೂ ಒಂದಲ್ಲ ಒಂದು ರೀತಿ ಕರ್ತವ್ಯದಲ್ಲಿ ತೊಡಗಿರುತ್ತಾರೆ. ಪೊಲೀಸರ ಸೇವೆ ಸ್ಮರಣೀಯ ಎಂದರು.    

ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಿಸಿ ಮಾತನಾಡಿ, ಪೊಲೀಸ್ ಸೇವೆಯು ಜವಾಬ್ದಾರಿಯುತ ಹಾಗೂ ಕರ್ತವ್ಯ ನಿಷ್ಠ ಕಠಿಣ ಸೇವೆಯಾಗಿದ್ದು, ಪೊಲೀಸರು ಸಮಾಜದ ರಕ್ಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಾರೆ ಎಂದರು.   

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ಪೊಲೀಸರು ಹಗಲು ರಾತ್ರಿ ಎನ್ನದೆ ಸಮಾಜದಲ್ಲಿ ಶಾಂತಿ ಕಾಪಾಡಲು ಕರ್ತವ್ಯದಲ್ಲಿ ನಿರತರಾಗಿರುತ್ತಾರೆ. ಆ ನಿಟ್ಟಿನಲ್ಲಿ ಪೊಲೀಸರ ಸೇವೆ ಸ್ಮರಣೀಯ, ಜೊತೆಗೆ ಪೊಲೀಸರು ಸಹ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು ಎಂದರು.    

ಅಬ್ದುಲ್ ಮಜೀದ್ ಗೆ ಕಾರ್ಯಪ್ಪ ಟ್ರೋಫಿ:

ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸೆಟೇಬಲ್ ಆಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಬ್ದುಲ್ ಮಜೀದ್ ಅವರಿಗೆ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಟ್ರೋಪಿ ವಿತರಿಸಲಾಯಿತು. ನಿವೃತ್ತ 12 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.  

ಆರ್ ಪಿಐ ತಿಮ್ಮಪ್ಪಗೌಡ ಅವರು ಪಥಸಂಚಲನದ ನೇತೃತ್ವ ವಹಿಸಿದರು. ನಿವೃತ್ತ ಪೊಲೀಸ್ ಅಧಿಕಾರಿ ಅಪ್ಪಯ್ಯ, ಕರ್ನಲ್ ಕೆ.ಸಿ.ಸುಬ್ಬಯ್ಯ, ಉತ್ತಯ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಡಿಸಿಪಿ ಪೂಣಚ್ಚ, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಇತರರು ಹಾಜರಿದ್ದರು.

See also  ಕುರುಕ್ಷೇತ್ರ ಚಿತ್ರದ ಎರಡನೇ ಟ್ರೇಲರ್ ನೋಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು