News Kannada
Thursday, March 23 2023

ಕರ್ನಾಟಕ

ಕೇಂದ್ರ ಪ್ರಾಯೋಜಿತ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ: ಶೋಭ ಕರಂದ್ಲಾಜೆ ಸೂಚನೆ

Photo Credit :

ಕೇಂದ್ರ ಪ್ರಾಯೋಜಿತ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ: ಶೋಭ ಕರಂದ್ಲಾಜೆ ಸೂಚನೆ

ಚಿಕ್ಕಮಗಳೂರು: ಕೇಂದ್ರ ಪ್ರಯೋಜಿತ ಯೋಜನೆಗಳ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರೊಂದಿಗೆ ಪ್ರತಿಶತ ನೂರರಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯೆ, ಶೋಭ ಕರಂದ್ಲಾಜೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ ಸಾಕಷ್ಟು ಅನುದಾನವನ್ನು ನೀಡಲಾಗಿದ್ದು ಇದನ್ನು ಸಾರ್ವಜನಿಕಾರಿಗೆ ಶೇಕಡ ನೂರರಷ್ಟು ತಲುಪಿಸುವ ಕೆಲಸ ಅಧಿಕಾರಿಗಳು ಚಾಚುತಪ್ಪದೆ ಮಾಡಬೇಕು ಎಂದರು. ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕೇಂದ್ರ ಸರ್ಕಾರ ಕನಸಿನ ಯೋಜನೆಗಳಲ್ಲಿ ಒಂದಾದ ಅಮೃತ್ ಯೋಜನೆಯ ಅನುಷ್ಠನಕ್ಕೆ ಅಗತ್ಯ ಇರುವ ಭೂಮಿಯನ್ನು ಪಡೆಯುವುದರೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು.

ಅದಷ್ಟು ಶೀಘ್ರದಲ್ಲಿ ಅಮೃತ್ ಯೋಜನೆಯ ಮಾನಿಟರಿಂಗ್ ಸಮಿತಿಯನ್ನು ರಚನೆ ಮಾಡಬೇಕು ಎಂದವರು ಈ ಯೋಜನೆಯ ಅನುಷ್ಠಾನಕ್ಕೆ ಇತರೆ ಇಲಾಖೆಗಳೊಂದಿಗೆ ಸಮನ್ಚಯದೊಂದಿಗೆ ಕೆಲಸ ಮಾಡಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಬರದ ಛಾಯೆ ಅವರಿಸಿದೆ ಇದರಿಂದಾಗಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಅನೇಕ ಗ್ರಾಮಗಳಲ್ಲಿ ಉಂಟಾಗಿದೆ ಕುಡಿಯುವ ನೀರನ್ನು ವಾರಕೊಮ್ಮೆ ಎರಡು ನೂರು ಲೀಟರ್ ಕೊಡುವ ಬದಲಿಗೆ ಮೂರು ದಿನಗಳಿಗೊಮ್ಮೆ ನೀಡಬೇಕು. ಗೋಶಾಲೆಗಳ ಅಗತ್ಯ ಇರುವ ಕಡೆ ತಕ್ಷಣದಲ್ಲಿ ತೆರೆಯಬೇಕು ರೈತರು ಜನುವಾರುಗಳನ್ನು ಮಾರಿಕೊಂಡ ನಂತರ ಯಾವುದೇ ಪ್ರಯೋಜನವಾಗುವುದಿಲ್ಲ ಎಂದವರು ಮುಂದಿನ ಒಂದುವರೆ ತಿಂಗಳವರೆಗೆ ಮೇವು ಬ್ಯಾಂಕ್ ಗಳ ಮೂಲಕ ಮೇವು ವಿತರಣೆಗೆ ಅಗತ್ಯ ಕ್ರಮವಹಿಸಬೇಕು ಎಂದು ನುಡಿದರು.

See also  ಪರವಾನಗಿ ಪಡೆಯದೆ ಬಿಜೆಪಿಯಿಂದ ಸಭೆ: ದೂರು ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು