ಮಡಿಕೇರಿ: ಮಡಿಕೇರಿ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ. 17ರಂದು ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದ್ದು, ಸಿದ್ಧತೆ ಸಮಾರೋಪಾದಿಯಲ್ಲಿ ಸಾಗಿದೆ. ಈ ಸಂಬಂಧ ಸಮ್ಮೇಳನದ ಲಾಂಛನವನ್ನು ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಬಿಡುಗಡೆ ಮಾಡಿದ್ದಾರೆ. ಈಗಾಗಲೇ ಸಮ್ಮೇಳಾಧ್ಯಕ್ಷರನ್ನಾಗಿ ಸಾಹಿತಿ ಬಿ.ಎ.ಷಂಶುದ್ದೀನ್ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರ ನಿವಾಸಕ್ಕೆ ಕಸಾಪ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷ ಹಾಗೂ ಪದಾಧಿಕಾರಿಗಳು ತೆರಳಿ ಆತ್ಮೀಯವಾಗಿ ಸನ್ಮಾನಿಸಿ ಸಮ್ಮೇಳನಕ್ಕೆ ಆಹ್ವಾನ ನೀಡಿದ್ದಾರೆ.
ಸಾಹಿತಿ ಬಿ.ಎ. ಷಂಶುದ್ದಿನ್ ಮಾತನಾಡಿ ಕನ್ನಡದ ಕೆಲಸಕ್ಕೆ ತಾವೂ ಸದಾ ಮುಂದಿದ್ದು, ಕಳೆದೆರಡು ವರ್ಷಗಳಿಂದ ಅನ್ಯಕಾರ್ಯ ನಿಮಿತ್ತ ಕನ್ನಡದ ಕೆಲಸದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮುಂದಿನ ದಿನದಲ್ಲಿ ಕನ್ನಡ ಕೆಲಸಕ್ಕೆ ಸಹಕಾರ ನೀಡುದಾಗಿ ಹೇಳಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್ ಲೋಕೇಶ್ ಸಾಗರ್ ಮಾತನಾಡಿ ಸಾಹಿತ್ಯ ಸಮ್ಮೇಳನವನ್ನು ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಸಮ್ಮೇಳನ ಹಾಗೂ ತಾಲೂಕು ಸಮ್ಮೇಳನ ಮಾಡಲಾಗಿದ್ದು, ಎಲ್ಲವೂ ಅತ್ಯಂತ ಯಶಸ್ಸು ಕಂಡಿವೆ. ಮಡಿಕೇರಿ ತಾಲೂಕು ಸಮ್ಮೇಳನ ಕೂಡ ಯಶಸ್ಸು ಕಾಣಲಿದೆ ಎಂದು ಹೇಳಿದ್ದಾರೆ.
ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಗರದ ಕೋಟೆ ಆವರಣದಿಂದ ಹೊರಟು ಬಸ್ ನಿಲ್ದಾಣಕ್ಕಾಗಿ, ಇಂದಿರಾಗಾಂಧಿ ವೃತ್ತದಿಂದ ಹಿಂದಿರುಗಿ ಜ. ತಿಮ್ಮಯ್ಯ ವೃತ್ತಕ್ಕಾಗಿ ಕಾವೇರಿ ಕಲಾಕ್ಷೇತ್ರಕ್ಕೆ ಆಗಮಿಸುವಂತೆ ತೀಮರ್ಾನಿಸಲಾಗಿದೆ. ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎರಡು ತಂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದರೊಂದಿಗೆ ಕೊಡಗಿನ ವಾದ್ಯ, ಕಂಗೀಲು ನೃತ್ಯ, ಮರಗೋಡಿನ ಕಲಾತಂಡ ಹಾಗೂ ಆಟೋ ಚಾಲಕರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಸಮ್ಮೇಳನದ ಸಂದರ್ಭ ನಗರದಾದ್ಯಂತ ಸುಮಾರು 1,250 ಧ್ವಜಗಳನ್ನು ಬಳಸಿ ಪ್ರತಿಯೊಬ್ಬರಲ್ಲೂ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ.
ಸಮ್ಮೇಳನಕ್ಕೆ ಆಗಿಮಿಸುವ ಕನ್ನಡಾಭಿನಿಗಳಿಗೆ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವಿವಿಧ ಸಭಾ ಕಾರ್ಯಕ್ರಮಗಳನ್ನು ನಡೆಸಲು ತೀಮರ್ಾನಿಸಲಾಗಿದೆ.