ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಅನಿರ್ಧಿಷ್ಠಾವದಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಒಂದು ವಾರದಲ್ಲಿ ಈಡೇರಿಸದಿದ್ದಲ್ಲಿ ರಾಜ್ಯ ಪೌರ ನೌಕರರ ಸಂಘವೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತದೆ ಎಂದು ಜಿಲ್ಲಾಧ್ಯಕ್ಷ ಬಿ.ಅಣ್ಣಯ್ಯ ಎಚ್ಚರಿಕೆ ನೀಡಿದ್ದಾರೆ.
ನಗರಸಭೆ ಆವರಣದಲ್ಲಿ ಗುತ್ತಿಗೆ ಪೌರ ಕಾರ್ಮಿಕರು, ನೀರುಘಂಟಿಗಳು, ವಾಹನ ಚಾಲಕರು ಹಾಗೂ ಡಾಟಾ ಎಂಟ್ರಿ ಆಪರೇಟರ್ಸ್ ನಡೆಸುತ್ತಿರುವ ಪ್ರತಿಭಟನೆ ಸ್ಥಳದಲ್ಲಿ ಮಾತನಾಡಿದರು. ರಾಜ್ಯಧ್ಯಂತ ನೌಕರರುಗಳು ಮುಷ್ಕರ ಹಮ್ಮಿಕೊಂಡಿದ್ದು ಸರ್ಕಾರಕ್ಕೆ ಹಲವು ಬಾರಿ ಈ ಸಮಸ್ಯೆ ಬಗ್ಗೆ ಹೋರಾಟದ ಮೂಲಕ ಎಚ್ಚರಿಸಿದರೂ ವಿಳಂಬ ನೀತಿ ಅನುಸರಿಸುತ್ತಿದೆ. ಕಳೆದ 15-20 ವರ್ಷಗಳಿಂದ ನಗರಸಭೆಯಲ್ಲಿ ಗುತ್ತಿಗೆ ಪೌರಕಾರ್ಮಿಕರಾಗಿ ನೂರಾರು ಜನ ಕಾರ್ಯನಿರ್ವಹಿಸುತ್ತಿದ್ದರೂ ಸರ್ಕಾರ ಮಾತ್ರ ಖಾಯಂ ಮಾಡದೆ ಯಾವುದೆ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ದೂರಿದರು.
ಕಾರ್ಮಿಕ ಕಾಯ್ದೆ ಪ್ರಕಾರ ಗುತ್ತಿಗೆ ನೀಡಬಾರದೆಂದು ಕಾನೂನು ಜಾರಿಯಲ್ಲಿದ್ದರೂ ರಾಜ್ಯ ಸರ್ಕಾರ ಮಾತ್ರ ಮಹಾನಗರ ಪಾಲಿಕೆ, ನಗರಸಭೆ ಹಾಗೂ ಪುರಸಭೆಗಳಲ್ಲಿ ಗುತ್ತಿಗೆ ನೀಡಲಾಗುತ್ತಿದೆ. ಗುತ್ತಿಗೆ ಪದ್ಧತಿಯನ್ನು ರದ್ದು ಮಾಡಿ ಹಾಲಿ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು 2014ನೇ ಸಾಲಿನಲ್ಲಿ ಉಚ್ಚ ನ್ಯಾಯಾಲಯ ಆದೇಶಿಸಿದೆ. 2016ರಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಪೌರಕಾರ್ಮಿಕರನ್ನು ಖಾಯಂಗೆ ನಿರ್ಣಯಿಸಿದೆ .ಇಷ್ಟೆಲ್ಲಾ ಆದೇಶಗಳಿದ್ದರೂ ಗುತ್ತಿಗೆ ನೌಕರರನ್ನು ಖಾಯಂ ಮಾಡದೆ ರಾಜ್ಯ ಸರ್ಕಾರ ವಿಳಂ¨ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ. ಗುತ್ತಿಗೆ ಪೌರಕಾರ್ಮಿಕರನ್ನು ಖಾಯಂ ಮಾಡುವವರೆಗೂ ಕೆಲಸವನ್ನು ಸ್ಥಗಿತಗೊಳಿಸಿ ಕಾರ್ಮಿಕರು ಅನಿರ್ಧಿಷ್ಟಾವಧಿ ಮುಷ್ಕರ ಮಾಡುತ್ತಿದ್ದಾರೆ ಎಂದರು.