News Kannada
Tuesday, March 28 2023

ಕರ್ನಾಟಕ

ಬೊಮ್ಮಲಾಪುರ ಬಹಿಷ್ಕಾರ ಪ್ರಕರಣ ಸುಖಾಂತ್ಯ

Photo Credit :

ಬೊಮ್ಮಲಾಪುರ ಬಹಿಷ್ಕಾರ ಪ್ರಕರಣ ಸುಖಾಂತ್ಯ

ಗುಂಡ್ಲುಪೇಟೆ: ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಬಿಜೆಪಿಗೆ ಮತಹಾಕಿದರು ಎಂಬ ಕಾರಣದಿಂದ 25 ಕುಟುಂಬಕ್ಕೆ ಹಾಕಿದ್ದ ಸಾಮಾಜಿಕ ಬಹಿಷ್ಕಾರ ಪ್ರಕರಣ ಸಂಬಂಧ ಜಿಲ್ಲಾಡಳಿತ ಹಾಗೂ ಮುಖಂಡರು ಸೇರಿ ಶಾಂತಿ ಸಭೆ ನಡೆಸಿದ ಪರಿಣಾಮವಾಗಿ ಸುಖಾಂತ್ಯ ಕಂಡಿದೆ.

ಗ್ರಾಮದ ಗ್ರಾಮಪಂಚಾಯಿತಿ ಕಚೇರಿಯಲ್ಲಿ ಜಿ.ಪಂ ಅಧ್ಯಕ್ಷ ಎಂ.ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಸಲಾಯಿತು. ಎಎಸ್ಪಿ ಗೀತಾ ಪ್ರಸನ್ನ, ಡಿವೈಎಸ್ಪಿ ಎಸ್.ಇ.ಗಂಗಾಧರಸ್ವಾಮಿ, ಎರಡೂ ಗುಂಪುಗಳ ಮುಖಂಡರು ಹಾಗೂ ಪ್ರಮುಖ ನಾಯಕರು ಸಭೆ ಸೇರಿ ಮಾತುಕತೆ ನಡೆಸಿದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಎಲ್ಲರೂ ಒಟ್ಟಾಗಿ ಶಾಂತಿಯಿಂದ ಸಹಬಾಳ್ವೆ ನಡೆಸುವ ತೀರ್ಮಾನಕ್ಕೆ ಬರಲಾಯಿತು. ನಂತರ ಎರಡೂ ಗುಂಪುಗಳ ಸದಸ್ಯರನ್ನು ಹಸ್ತಲಾಘವ ಮಾಡಿಸುವ ಮೂಲಕ ರಾಜೀಮಾಡಿಸಲಾಯಿತು.

ಈ ಸಂದರ್ಭ ಜಿ.ಪಂ. ಅಧ್ಯಕ್ಷ ಎಂ.ರಾಮಚಂದ್ರು ಹಾಗೂ ಎಎಸ್ಪಿ ಗೀತಾ ಪ್ರಸನ್ನ ಮಾತನಾಡಿ ಎರಡೂ ಗುಂಪುಗಳ ಸದಸ್ಯರಿಗೆ ಸಾಮಾಜಿಕ ಬಹಿಷ್ಕಾರದ ಬಗ್ಗೆ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತಿರುವ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು. ಪರಸ್ಪರರ ಭಿನ್ನಾಭಿಪ್ರಾಯಗಳನ್ನು ನಿವಾರಿಸಿದ ನಂತರ ಮುಕ್ತ ಮನಸ್ಸಿನಿಂದ ತಮ್ಮ ಭಾವನೆಗಳನ್ನು ಹೊರಹಾಕಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸುವ ಹಾಗೂ ಬಹಿಷ್ಕಾರಕ್ಕೊಳಗಾಗಿದ್ದವರನ್ನು ದೂರವಿಡದೆ ಹಿಂದಿನಂತೆಯೇ ಎಲ್ಲ್ಲ ಕಾರ್ಯಕ್ರಮಗಳಿಗೂ ಆಹ್ವಾನಿಸುವುದಾಗಿ ಜನಾಂಗದ ಮುಖಂಡರು ಭರವಸೆ ನೀಡಿದ್ದಾರೆ. ಇದರಿಂದ ಗ್ರಾಮದಲ್ಲಿ ಉಂಟಾಗಿದ್ದ ಪ್ರಕ್ಷುಬ್ದ ಪರಿಸ್ಥಿತಿ ನಿವಾರಣೆಯಾಗಿದೆ ಎಂದರು.

ಬಹಿಷ್ಕಾರ ಪ್ರಕರಣವನ್ನು ಬಹಿರಂಗಪಡಿಸಿದ್ದ ಗ್ರಾಪಂ ಮಾಜಿ ಸದಸ್ಯ ರಾಜೇಶ್ ಮಾತನಾಡಿ, ಜನಾಂಗದ ಮುಖಂಡರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಮಗೆ ಸಮಾಧಾನಕರ ತೀರ್ಮಾನ ದೊರಕಿದ್ದು, ಹಿಂದಿನಂತೆಯೇ ಗ್ರಾಮದಲ್ಲಿ ಎಲ್ಲರಿಗೂ ಒಗ್ಗಟ್ಟಾಗಿ ಸಾಗುವ ಭರವಸೆ ದೊರಕಿದೆ, ಇಂಥ ಸಮಸ್ಯೆಗಳು ಎದುರಾದಾಗ ಮುಖಂಡರ ಗಮನಕ್ಕೆ ತಂದು ಮಾತುಕತೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದರು.

ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಕೆ.ವಿ.ಕೃಷ್ಣಪ್ಪ, ತಹಸೀಲ್ದಾರ್ ಕೆ.ಸಿದ್ದು, ತಾಪಂ ಇಓ ಪುಷ್ಪಾ ಎಂ.ಕಮ್ಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎಚ್.ಎಸ್.ಬಿಂದ್ಯಾ, ಪುರಸಭೆ ಸದಸ್ಯರಾದ ಸುರೇಶ್, ಪಿ.ಗಿರೀಶ್, ಗ್ರಾಪಂ ಮಾಜಿ ಅಧ್ಯಕ್ಷ ವಿಶ್ವನಾಥ್, ಗ್ರಾಮದ ಮುಖಂಡರುಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

See also  ಹತ್ರಾಸ್ ಅತ್ಯಾಚಾರ ಪ್ರಕರಣದ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು