News Kannada
Tuesday, March 28 2023

ಕರ್ನಾಟಕ

ವಸತಿ ಗೃಹದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ವ್ಯವಸ್ಥೆ : ನೋಡಲ್ ಅಧಿಕಾರಿಗಳ ನೇಮಕ

Photo Credit :

ವಸತಿ ಗೃಹದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ವ್ಯವಸ್ಥೆ : ನೋಡಲ್ ಅಧಿಕಾರಿಗಳ ನೇಮಕ

ಮಡಿಕೇರಿ: ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಭೂಕುಸಿತ ಹಾಗೂ ಪ್ರವಾಹ ಉಂಟಾಗಿ ಮಾನವ, ಪ್ರಾಣಹಾನಿ, ಜಾನುವಾರು ಪ್ರಾಣಹಾನಿ, ವಾಸದ ಮನೆಹಾನಿ, ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ, ಬೆಳೆಹಾನಿ ಆಗಿದ್ದು, ಈ ಬಗ್ಗೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ವಿವಿಧ ಕಡೆಯ ಸಮುದಾಯ ಭವನಗಳಲ್ಲಿ ತೆರೆಯಲಾಗಿದೆ.

ಮುಂದುವರೆದು ಶಾಲಾ-ಕಾಲೇಜು ವಿದ್ಯಾಥಿಗಳ ಹಿತದೃಷ್ಟಿಯಿಂದ ಮತ್ತು ಜಿಲ್ಲೆಯಲ್ಲಿ ತುರ್ತಾಗಿ ಪರಿಹಾರ ವಿತರಣೆ, ಮೂಲ ಸೌಕರ್ಯಗಳ ಪುನರ್ ನಿರ್ಮಾಣ, ಹಾನಿ ಸಮೀಕ್ಷೆ ಕಾರ್ಯಗಳನ್ನು ಪೂರ್ಣಗೊಳಿಸ ಬೇಕಾಗಿರುವುದರಿಂದ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಕಾಯ್ದೆ 2005ರ ನಿಯಮ 30(2)ರ ಅಡಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿರುವ 13 ಗೃಹ ವಸತಿಗಳನ್ನು ಜಿಲ್ಲಾಡಳಿತದ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಪ್ರಸ್ತುತ ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲಿನ ಹಾನಿಗೊಳಗಾದ ಪ್ರದೇಶದ ಸಂತ್ರಸ್ತರ ಮಕ್ಕಳಿಗೆ ನಗರದಲ್ಲಿರುವ ವಿವಿಧ ಕಾಲೇಜುಗಳಲ್ಲಿ ಶಿಕ್ಷಣ ಮುಂದುವರೆಸಲು ವ್ಯವಸ್ಥೆ ಮಾಡಲಾಗಿದೆ.

ಅದರಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮಡಿಕೇರಿ ತಾಲ್ಲೂಕಿನ ಗ್ರಾಮೀಣ ಭಾಗಗಳಿಂದ ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿಗಳಿಗೆ ಸೂಕ್ತ ವಸತಿ ಸೌಲಭ್ಯಗಳನ್ನು ಒದಗಿಸಲು ಕೋರಿರುವ ಹಿನ್ನೆಲೆ ಸಂತ್ರಸ್ತ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಿ ಬರಲು ಅನುಕೂಲವಾಗುವಂತೆ ವಸತಿಯ ಅವಶ್ಯಕತೆ ಇರುವುದರಿಂದ ನಗರದ ಸುತ್ತ್ತಮುತ್ತಲ ಸಂತ್ರಸ್ತರಾದ ಕುಟುಂಬದ ಜೊತೆಗೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ನಗರ ವ್ಯಾಪ್ತಿಯ ಕಾವೇರಿ ಹಾಲ್ ಹತ್ತಿರವಿರುವ ಹೊಟೇಲ್ ರಾಜ್ ವಸತಿ ಗೃಹದಲ್ಲಿ 60 ವಿದ್ಯಾರ್ಥಿನಿಯರು ತಂಗಲು ವ್ಯವಸ್ಥೆ ಮಾಡಲಾಗಿದೆ, ಈ ವಸತಿ ಗೃಹದ ಮೇಲ್ವಿಚಾರಕರಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಡಾ.ಅನುಪಮ ಸಭಾಪತಿ ಹಾಗೂ ನೋಡಲ್ ಅಧಿಕಾರಿಯಾಗಿ ಹಿರಿಯ ಗಣಿ ಮತ್ತು ಭೂವಿಜ್ಞಾನಿಯಾದ ಬಿ.ರೇಷ್ಮಾ ಅವರನ್ನು ನಿಯೋಜಿಸಲಾಗಿದೆ.

ಹಾಗೆಯೇ ನಗರದ ರಾಜಸೀಟು ರಸ್ತೆ ಬಳಿ ಇರುವ ಹೊಟೇಲ್ ಕಾವೇರಿ ಇನ್ ವಸತಿ ಗೃಹದಲ್ಲಿ 60 ವಿದ್ಯಾರ್ಥಿಗಳು ತಂಗಲು ವ್ಯವಸ್ಥೆ ಮಾಡಲಾಗಿದ್ದು, ಈ ವಸತಿ ಗೃಹದ ಮೇಲ್ವಿಚಾರಕರಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ರಾಘವೇಂದ್ರ ಪ್ರಸಾದ್ ಹಾಗೂ ನೋಡಲ್ ಅಧಿಕಾರಿಯಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ದೇವರಾಜು ಅವರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

See also  ಎನ್‍ಸಿಸಿ ಕೆಡೆಟ್‍ಗಳ ನಿಸ್ವಾರ್ಥ ಸೇವೆ : ಮಾದರಿಯಾದ ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು