News Kannada
Thursday, March 30 2023

ಕರ್ನಾಟಕ

ಎಚ್1ಎನ್1ಗೆ ಇಬ್ಬರು ಬಲಿ: ಇನ್ನೂ ಮೂವರಲ್ಲಿ‌ ರೋಗ ಪತ್ತೆ

Photo Credit :

ಎಚ್1ಎನ್1ಗೆ ಇಬ್ಬರು ಬಲಿ: ಇನ್ನೂ ಮೂವರಲ್ಲಿ‌ ರೋಗ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎಚ್1ಎನ್1 ಮಾರಕ ರೋಗಕ್ಕೆ ಈಗಾಗಲೇ ಇಬ್ಬರು ಬಲಿಯಾಗಿದ್ದು ಮೂವರಲ್ಲಿ ರೋಗ ಇರುವುದು ಪತ್ತೆಯಾಗಿದೆ ಎಂದು ಡಿಎಚ್ ಒ ಡಾ.‌ಅಶೋಕ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿಯಿಂದ ಈವರೆಗೆ 25 ಶಂಕಿತ ರೋಗಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರಲ್ಲಿ 5 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಹಳಿಯಾಳ ವ್ಯಾಪ್ತಿಯಲ್ಲಿ ಮೂವರು, ಯಲ್ಲಾಪುರ, ಮುಂಡಗೋಡದಲ್ಲಿ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿತ್ತು. ಯಲ್ಲಾಪುರ ಹಾಗೂ ಮುಂಡಗೋಡದ ಇಬ್ಬರು ಸೋಂಕಿತರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಪ್ರಕರಣದಿಂದಾಗಿ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲಾ ಸರಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಶೀತ, ಜ್ವರ, ಕೆಮ್ಮು, ಮೂಗಿನ ಸೋರುವಿಕೆ, ತಲೆನೋವು, ಮೈ ಕೈ ನೋವು, ಚಳಿ ಮತ್ತು ಸುಸ್ತು ಇತ್ಯಾದಿ ಎಚ್1 ಎನ್1 ಸೋಂಕಿನ ಲಕ್ಷಣಗಳಾಗಿವೆ. ಆರೋಗ್ಯವಂತ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದರಿಂದ ಈ ಜ್ವರ ಕಾಣಿಸಿಕೊಂಡರೂ ಮಾರಣಾಂತಿಕವಲ್ಲ. ಆದರೆ ಜ್ವರ ನಿರ್ಲಕ್ಷಿಸದೆ ತಕ್ಷಣ ಯಾವ ಜ್ವರವೆಂದು ಖಚಿತಪಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಬಗ್ಗೆ ಜನ ಜಾಗೃತಿ ಅತಿ ಮುಖ್ಯ ಎಂದು ತಿಳಿಸಿದರು‌

See also  ಕೇಂದ್ರ ಸರ್ಕಾರದ ಸಶಕ್ತೀಕರಣ ರಾಷ್ಟ್ರಪ್ರಶಸ್ತಿಗೆ ಕೊಡಗು ಸಂಪಾಜೆ ಗ್ರಾಮ ಪಂಚಾಯಿತಿ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು