News Kannada
Saturday, March 25 2023

ಕರ್ನಾಟಕ

ಶಾಂತಿ ಕದಡಿದರೆ ಬಂಧನ: ಕೊಡಗು ಎಸ್ ಪಿ ಎಚ್ಚರಿಕೆ

Photo Credit :

ಶಾಂತಿ ಕದಡಿದರೆ ಬಂಧನ: ಕೊಡಗು ಎಸ್ ಪಿ ಎಚ್ಚರಿಕೆ

ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ತಾಲ್ಲೂಕು ಕೇಂದ್ರಗಳಾದ ವೀರಾಜಪೇಟೆ ಮತ್ತು ಸೋಮವಾರಪೇಟೆಗಳಲ್ಲಿ ನ. 10ರಂದು ನಡೆಯಲಿರುವ `ಟಿಪ್ಪು ಜಯಂತಿ’ಗೆ ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನವನ್ನು ಯಾರೂ ಮಾಡಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪನ್ನೇಕರ್ ಮನವಿ ಮಾಡಿದ್ದಾರೆ.

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂದರ್ಭದ ದುರ್ಲಾಭ ಪಡೆದು ಶಾಂತಿ ಕದಡುವ ಪ್ರಯತ್ನಗಳಿಗೆ ಮುಂದಾಗುವ ಯಾವುದೇ ಪ್ರಯತ್ನಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಅಂತಹವರನ್ನು ಬಂಧಿಸಲಿದೆಯೆಂದು ಎಚ್ಚರಿಕೆ ನೀಡಿದರು.

ಸಿಸಿ ಕ್ಯಾಮೆರಾಗಳ ಹದ್ದಿನ ಕಣ್ಣು
ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮಡಿಕೇರಿ, ಸೋಮವಾರಪೇಟೆ , ವೀರಾಜಪೇಟೆ ಸೇರಿದಂತೆ ಜನ ನಿಬಿಡ ಪ್ರದೇಶಗಳಲ್ಲಿ ತಾತ್ಕಾಲಿಕವಾದ 200 ಸಿಸಿ ಟಿವಿಗಳನ್ನು ಅಳವಡಿಸಲಾಗಿದ್ದು, ಪ್ರತಿಯೊಂದು ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆಯೆಂದು ಮಾಹಿತಿ ನೀಡಿದರು.

10 ಕಡೆ ಚೆಕ್ ಪೋಸ್ಟ್
ಜಿಲ್ಲೆಯ ಅಂಚಿನಲ್ಲಿರುವ ಕೇರಳ, ವಯನಾಡು, ಕಾಸರಗೋಡು ಹಾಗೂ ಹಾಸನ ಜಿಲ್ಲೆ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗೆ ಹೊಂದಿಕೊಂಡಂತೆ 10 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದ್ದು, ಇವುಗಳ ಮೂಲಕ ಹೊರ ಜಿಲ್ಲೆಯಿಂದ ಬರುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸುವ `ನಾಕಾಬಂದಿ’ ಕಾರ್ಯವನ್ನು ಮಾಡಲಾಗುತ್ತಿದೆ. ಆ ಮೂಲಕ ಕಿಡಿಗೇಡಿಗಳು ಜಿಲ್ಲೆಗೆ ಬಂದು ದುಷ್ಕೃತ್ಯಗಳನ್ನು ನಡೆಸಲು ಮುಂದಾಗದಂತೆ ನಿಗಾ ವಹಿಸಲಾಗಿದೆ. ಈ ಚೆಕ್ ಪೋಸ್ಟ್ ಗಳಲ್ಲಿ ತಲಾ 4ರಂತೆ ಒಟ್ಟು 40 ಸಿಸಿ ಟಿವಿಗಳನ್ನು ಅಳವಡಿಸಲಾಗಿದೆಯೆಂದು ತಿಳಿಸಿದರು.
2 ಸಾವಿರ ಸಿಬ್ಬಂದಿಗಳ ನಿಯುಕ್ತಿ
ಟಿಪ್ಪು ಜಯಂತಿಯ ಬಂದೋಸ್ತ್ ಗೆ ಜಿಲ್ಲೆ ಹಾಗೂ ಹೊರ ಜಿಲ್ಲೆಯ 1500 ರಿಂದ 2 ಸಾವಿರ ಪೊಲೀಸ್ ಸಿಬ್ಬಂದಿಗಳು ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಚಾಮರಾಜನಗರದ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನು ಜಿಲ್ಲೆಗೆ ನಿಯುಕ್ತಿಮಾಡಲಾಗಿದೆ, 6 ಡಿವೈಎಸ್‍ಪಿ, 20 ಪೊಲೀಸ್ ಇನ್ಸ್‍ಪೆಕ್ಟರ್, 46 ಸಬ್ ಇನ್ಸ್‍ಪೆಕ್ಟರ್, 104 ಎಎಸ್‍ಐ, 300 ಹೋಂ ಗಾಡ್ರ್ಸ್, 850 ಪೊಲೀಸ್ ಸಿಬ್ಬಂದಿಗಳು, 21 ಡಿಎಆರ್ ತುಕಡಿಗಳು, 10 ಕೆಎಸ್‍ಆರ್‍ಪಿ ತುಕಡಿಗಳನ್ನು ಹಾಗೂ ರ್ಯಾಪಿಡ್ ಆಕ್ಷನ್ ಫೋರ್ಸ್‍ನ್ನು ನಿಯುಕ್ತಿಗೊಳಿಸಲಾಗಿದೆಯೆಂದು ತಿಳಿಸಿದರು.

See also  ಕಾಸರಗೋಡು ಜಿ.ಪಂ ಮಾಜಿ ಅಧ್ಯಕ್ಷ ಸಿ. ಅಹಮ್ಮದ್ ಕುಂಞ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು