News Kannada
Monday, March 27 2023

ಕರ್ನಾಟಕ

ಬಾಲಚಂದ್ರ ಕಳಗಿ ಸಾವಿನ ಸುತ್ತ ಸಂಶಯದ ಹುತ್ತ: ಸೂಕ್ತ ತನಿಖೆಗೆ ಬಿಜೆಪಿ ಆಗ್ರಹ

Photo Credit :

ಬಾಲಚಂದ್ರ ಕಳಗಿ ಸಾವಿನ ಸುತ್ತ ಸಂಶಯದ ಹುತ್ತ: ಸೂಕ್ತ ತನಿಖೆಗೆ ಬಿಜೆಪಿ ಆಗ್ರಹ

ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪಾಜೆಯ ಬಾಲಚಂದ್ರ ಕಳಗಿ ಅವರ ಸಾವು ಹಲವು ಸಂಶಯಗಳನ್ನು ಹುಟ್ಟು ಹಾಕಿದ್ದು, ಇದು ಒಂದು ವ್ಯವಸ್ಥಿತ ಕೊಲೆ ಎಂದು ಕುಟುಂಬದ ಸದಸ್ಯರು ಹಾಗೂ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿರುವ ಹಿನ್ನೆಲೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಲಚಂದ್ರ ಕಳಗಿ ಅವರು, ತಾವು ಚಲಾಯಿಸುತ್ತಿದ್ದ ಮಾರುತಿ ಓಮ್ನಿಗೆ ಲಾರಿ ಡಿಕ್ಕಿಯಾಗಿ ಕೊನೆಯುಸಿರೆಳೆದಿದ್ದು, ಈ ಘಟನೆಯ ಬಗ್ಗೆ ಅವರ ಕುಟುಂಬಸ್ಥರು ಮತ್ತು ಸಂಪಾಜೆ ವಿಭಾಗದ ಜನತೆ ಅಂತ್ಯಸಂಸ್ಕಾರದ ಸಂದರ್ಭ ಅಳಲು ತೋಡಿಕೊಂಡು, ಕಳಗಿ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಇದರಿಂದ ಕಳಗಿ ಸಾವಿನ ಪ್ರಕರಣದ ಬಗ್ಗೆ ಬಿಜೆಪಿಗೂ ಸಂಶಯ ಮೂಡಿದ್ದು, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ತನಿಖೆಯನ್ನು ಚುರುಕುಗೊಳಿಸಬೇಕೆಂದು ಒತ್ತಾಯಿಸಿದರು.

ಲಾರಿ ಚಾಲಕನನ್ನು ತಡವಾಗಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಲಾರಿ ಬ್ರೇಕ್‍ನಲ್ಲಿ ಸಮಸ್ಯೆ ಇತ್ತು ಎಂದು ಆತ ಹೇಳಿಕೆ ನೀಡಿದ್ದು, ಇದನ್ನು ನಂಬಲು ಸಾಧ್ಯವಿಲ್ಲವೆಂದು ತಿಳಿಸಿದ ಭಾರತೀಶ್ ತಕ್ಷಣ ಪೊಲೀಸರು ತನಿಖೆಯನ್ನು ನಡೆಸಿ ಕ್ರಮ ಕೈಗೊಳ್ಳಬೇಕೆಂದರು.

ಸಂಪಾಜೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳ ವಿರುದ್ಧ ಬಾಲಚಂದ್ರ ಕಳಗಿ ಅವರು ಹೋರಾಟ ನಡೆಸಿದ್ದರು. ಇದರ ಪರಿಣಾಮ ಕಳಗಿ ಅವರಿಗೆ ಬೆದರಿಕೆ ಕರೆಗಳು ಕೂಡ ಬರುತ್ತಿತ್ತು ಎಂದು ಕುಟುಂಬದ ಸದಸ್ಯರು ಹೇಳಿಕೊಂಡಿದ್ದು, ಸಮಗ್ರ ತನಿಖೆಯಿಂದಷ್ಟೆ ಸತ್ಯ ಹೊರ ಬರಲು ಸಾಧ್ಯವೆಂದು ಭಾರತೀಶ್ ಹೇಳಿದರು.

ಮಡಿಕೇರಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಮಾತನಾಡಿ, ಸಂಪಾಜೆ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಬಾಲಚಂದ್ರ ಕಳಗಿ ಅವರು ಧ್ವನಿ ಎತ್ತುತ್ತಲೇ ಇದ್ದರು ಎಂದರು.
ಮಡಿಕೇರಿಗೆ ಬರಲು ಉತ್ತಮ ಮಾರ್ಗವಿದ್ದರೂ ಕಳಗಿ ಅವರು ತೆರಳುತ್ತಿದ್ದ ಮಾರ್ಗವನ್ನೇ ಲಾರಿ ಚಾಲಕ ಅವಲಂಬಿಸಿದ ಬಗ್ಗೆಯೂ ಸಂಶಯಗಳಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಬಿನ್ ದೇವಯ್ಯ, ವಿ.ಕೆ. ಲೋಕೇಶ್, ಜಿಲ್ಲಾ ವಕ್ತಾರ ನಾಪಂಡ ಕಾಳಪ್ಪ ಹಾಗೂ ಮಡಿಕೇರಿ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೋಡಿರ ಅಶ್ವತ್ಥ್ ಉಪಸ್ಥಿತರಿದ್ದರು.

See also  ವಚನ ಮಾಂಗಲ್ಯದೊಂದಿಗೆ ಸರಳ ವಿವಾಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು