News Kannada
Thursday, March 30 2023

ಕರ್ನಾಟಕ

ಬೆಳೆಹಾನಿ ಪರಿಹಾರ ಶೀಘ್ರ ಬಿಡುಗಡೆ : ಸಚಿವ ವಿ.ಸೋಮಣ್ಣ ಭರವಸೆ

Photo Credit :

ಬೆಳೆಹಾನಿ ಪರಿಹಾರ ಶೀಘ್ರ ಬಿಡುಗಡೆ : ಸಚಿವ ವಿ.ಸೋಮಣ್ಣ ಭರವಸೆ

ಮಡಿಕೇರಿ: ನಗರದ ಹೊರ ವಲಯದಲ್ಲಿ 35 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಜಿಲ್ಲಾ ಪಂಚಾಯಿತಿ ನೂತನ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ರಾಜ್ಯ ಹಾಗೂ ಜಿಲ್ಲೆಯಲ್ಲಿ ನೆರೆಯಿಂದಾಗಿ ಕೃಷಿ ಸೇರಿದಂತೆ ಇತರೆ ಬೆಳೆ ನಷ್ಟವಾಗಿದ್ದು, ಬೆಳೆ ಪರಿಹಾರವನ್ನು ಎಂಟು ಹತ್ತು ದಿನದಲ್ಲಿ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಅವರು ತಿಳಿಸಿದರು.

ಕಳೆದ ಬಾರಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಮನೆ ಕಳೆದುಕೊಂಡವರಿಗೆ ಈಗಾಗಲೇ ಕರ್ಣಂಗೇರಿಯಲ್ಲಿನ 35 ಮನೆ ಹಸ್ತಾಂತರಿಸಲಾಗಿದೆ. ಉಳಿದ ಮನೆಗಳನ್ನು ಮಾರ್ಚ್ ಅಂತ್ಯದೊಳಗೆ ಹಸ್ತಾಂತರಿಸಲಾಗುವುದು. ಹಾಗೆಯೇ ಈ ಬಾರಿ ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಅವರು ಹೇಳಿದರು.

ಸರ್ಕಾರ ನೆರೆ ಸಂತ್ರಸ್ತರ ನೋವನ್ನು ಅರ್ಥಮಾಡಿಕೊಂಡಿದೆ. ಸಂತ್ರಸ್ತರ ಭವಣೆ ನಿವಾರಿಸಲು ಅಗತ್ಯ ಕ್ರಮಕೈಗೊಂಡಿದೆ ಎಂದರು. 

ಜಿಲ್ಲೆಯಲ್ಲಿನ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ಭರಿಸಲಾಗುವುದು. ಈ ಬಾರಿ ಪ್ರಕೃತಿ ವಿಕೋಪದಿಂದ ವಿವಿಧ ಮಾದರಿಯಲ್ಲಿ ಮನೆ ಕಳೆದುಕೊಂಡವರಿಗೆ ಹಣ ಬಿಡುಗಡೆ ಮಾಡಲಾಗಿದೆ. ಜೊತೆಗೆ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಬಾಡಿಗೆ ಭರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಸಂತ್ರಸ್ತರಿಗೆ ಸಮರ್ಪಕವಾಗಿ ಸವಲತ್ತುಗಳನ್ನು ತಲುಪಿಸಲಾಗುವುದು. ಸಾಮಾನ್ಯ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು. ಜನರ ಜೊತೆ ಸರ್ಕಾರ ಸದಾ ಸ್ಪಂದಿಸಲಿದೆ. ಈ ಬಾರಿ ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಎರಡು ಕಡೆ ಜಾಗ ಗುರುತಿಸಲಾಗಿದ್ದು, ಮಳೆ ನಿಂತ ನಂತರ ಶಾಶ್ವತ ಕಾರ್ಯ ಕೈಗೊಳ್ಳಲಾಗುವುದು ಎಂದು ಸಚಿವರು ನುಡಿದರು. 

See also  ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ರಾಜ್ಯ ವಿಶೇಷ ಸಭೆ; ಪಕ್ಷದ ಬಾವುಟ ಹಾರಿಸಿ ಚಾಲನೆ ನೀಡಿದ ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು