News Kannada
Friday, March 24 2023

ಕರ್ನಾಟಕ

ಮನೆಗಳ ಹಸ್ತಾಂತರಕ್ಕೆ ಮಾಜಿ ಸಿಎಂ ಹೆಚ್‍ಡಿಕೆಗೆ ಇಲ್ಲ ಆಹ್ವಾನ: ಕೊಡಗು ಜೆಡಿಎಸ್ ಅಸಮಾಧಾನ

Photo Credit :

ಮನೆಗಳ ಹಸ್ತಾಂತರಕ್ಕೆ ಮಾಜಿ ಸಿಎಂ ಹೆಚ್‍ಡಿಕೆಗೆ ಇಲ್ಲ ಆಹ್ವಾನ: ಕೊಡಗು ಜೆಡಿಎಸ್ ಅಸಮಾಧಾನ

ಮಡಿಕೇರಿ : ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ಮಹಾಮಳೆ ಹಾನಿಯ ಸಂದರ್ಭ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಕಾಲದಲ್ಲಿ ಸ್ಪಂದಿಸಿ ಸಂತ್ರಸ್ತರಿಗೆ ನೂತನ ಮನೆಗಳನ್ನು ನಿರ್ಮಿಸಿ ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಮನೆಗಳ ಹಸ್ತಾಂತರದ ಸಂದರ್ಭ ಇಂದಿನ ಬಿಜೆಪಿ ಸರ್ಕಾರ ಕುಮಾರಸ್ವಾಮಿ ಅವರನ್ನು ಕಡೆಗಣಿಸಿದೆ ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಅ.25 ರಂದು ಸಂತ್ರಸ್ತರಿಗಾಗಿ ಮೊದಲ ಹಂತದಲ್ಲಿ 35 ಮನೆಗಳನ್ನು ಹಸ್ತಾಂತರಿಸಲಾಗಿದೆ. ಆದರೆ ಈ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರನ್ನು ಆಹ್ವಾನಿಸದೇ ಇರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲೆ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿದಾಗ ಜನರಲ್ಲಿ ಆತ್ಮಸ್ಥೈರ್ಯ ತುಂಬಿದವರು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರುಗಳು. ಇಂದು ಜಿಲ್ಲೆಯ ವಿವಿಧೆಡೆ ನೊಂದ ಸಂತ್ರಸ್ತರಿಗಾಗಿ ಎಂಟುನೂರಕ್ಕೂ ಹೆಚ್ಚು ಸುಸಜ್ಜಿತ ಮತ್ತು ಗುಣಮಟ್ಟದ ಮನೆಗಳು ನಿರ್ಮಾಣಗೊಳ್ಳುತ್ತಿವೆ ಎಂದರೆ ಅದಕ್ಕೆ ಪ್ರಮುಖ ಕಾರಣ ಇವರಿಬ್ಬರು.

ಆದರೆ ಮನೆಗಳ ಹಸ್ತಾಂತರದ ಸಂದರ್ಭ ಸೌಜನ್ಯಕ್ಕಾದರೂ ಕುಮಾರಸ್ವಾಮಿ ಮತ್ತು ಸಾ.ರಾ.ಮಹೇಶ್ ಅವರನ್ನು ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಗಣೇಶ್ ಆರೋಪಿಸಿದ್ದಾರೆ.

2018ರಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಅಂದಿನ ಸಮ್ಮಿಶ್ರ ಸರ್ಕಾರ ಮನೆ ಬಾಡಿಗೆ ರೂಪದಲ್ಲಿ ಮಾಸಿಕ ತಲಾ 10 ಸಾವಿರ ರೂ. ನೀಡುತ್ತಾ ಬಂದಿತ್ತು. ಅಲ್ಲದೇ, ಎಂಟುನೂರಕ್ಕೂ ಹೆಚ್ಚಿನ ಕುಟುಂಬಗಳಿಗೆ ತಲಾ 10 ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆಗಳನ್ನು ನಿರ್ಮಿಸಲು ಆರಂಭಿಸಿತು. ಮಳೆಹಾನಿಗೆ ಸಿಲುಕಿದ ಪ್ರತಿಯೊಬ್ಬರಿಗೂ ತುರ್ತು ಪರಿಹಾರವಾಗಿ ತಲಾ 3,800 ರೂ. ಗಳನ್ನು ವಿತರಿಸಲಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವುದಕ್ಕಾಗಿ ಸುಮಾರು ಆರು ಭಾರಿ ಜಿಲ್ಲೆಗೆ ಭೇಟಿ ನೀಡಿದ್ದರು. ಇದೆಲ್ಲವನ್ನು ಸ್ಮರಿಸಿಕೊಳ್ಳದ ಜಿಲ್ಲೆಯ ಶಾಸಕರು ಹಾಗೂ ಸಚಿವರುಗಳು ಕುಮಾರಸ್ವಾಮಿ ಅವರನ್ನು ನಿರ್ಲಕ್ಷಿಸಿರುವುದು ಕೀಳು ಮಟ್ಟದ ರಾಜಕರಣದ ಒಂದು ಭಾಗವಾಗಿದೆ ಎಂದು ಗಣೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಸ್ತುತ ವರ್ಷ ಸಂಭವಿಸಿದ ಮಳೆಹಾನಿ ಸಂತ್ರಸ್ತರಿಗೆ ಕನಿಷ್ಟ ಸಾಂತ್ವನ ಹೇಳುವುದಕ್ಕು ಜಿಲ್ಲೆಗೆ ಆಗಮಿಸಿಲ್ಲ. ಸಂತ್ರಸ್ತರಿಗೆ ಸಕಾಲದಲ್ಲಿ ಪರಿಹಾರವನ್ನು ವಿತರಿಸುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರ ಕೊಡಗಿನ ನೊಂದ ಮಂದಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಟೀಕಿಸಿದ್ದಾರೆ.

ಈಗಿನ ಸರ್ಕಾರ ಮನೆ ಬಾಡಿಗೆ ಮೊತ್ತ ರೂ. 5 ಸಾವಿರ ಮತ್ತು ಮನೆ ನಿರ್ಮಾಣಕ್ಕೆ ಕೇವಲ ತಲಾ 5 ಲಕ್ಷ ರೂ. ನೀಡುವುದಾಗಿ ಹೇಳುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲವೆಂದು ತಿಳಿಸಿರುವ ಗಣೇಶ್, ಈ ಹಿಂದಿನ ಸರ್ಕಾರ ನೀಡುತ್ತಿದ್ದ ರೀತಿಯಲ್ಲೇ ಬಾಡಿಗೆ ತಲಾ 10 ಸಾವಿರ ರೂ. ಹಾಗೂ ನೂತನ ಮನೆ ನಿರ್ಮಾಣಕ್ಕೆ ತಲಾ 10 ಲಕ್ಷ ರೂ. ನೀಡಬೆಕೇಂದು ಒತ್ತಾಯಿಸಿದ್ದಾರೆ. ತಪ್ಪಿದಲ್ಲಿ ಸಂತ್ರಸ್ತರನ್ನು ಒಗ್ಗೂಡಿಸಿ ಜೆಡಿಎಸ್ ವತಿಯಿಂದ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

See also  ಭಟ್ಕಳದಲ್ಲಿ ತಡರಾತ್ರಿ ಯುವಕನ ಬರ್ಬರ ಕೊಲೆ

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು