News Kannada
Thursday, March 23 2023

ಕರ್ನಾಟಕ

ಗುಂಡ್ಲುಪೇಟೆಯಲ್ಲಿ ಮುಂದುವರೆದ ನಕ್ಸಲ್ ಕಾರ್ಯಾಚರಣೆ

Photo Credit :

ಗುಂಡ್ಲುಪೇಟೆಯಲ್ಲಿ ಮುಂದುವರೆದ ನಕ್ಸಲ್ ಕಾರ್ಯಾಚರಣೆ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೇರಳ ಹಾಗೂ ತಮಿಳುನಾಡು ಗಡಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹಪಡೆ ಸಿಬ್ಬಂದಿ ಕೂಂಬಿAಗ್ ಮುಂದುವರೆಸಿದ್ದಾರೆ.

ನಕ್ಸಲ್ ನಿಗ್ರಹದಳದ ಡಿವೈಎಸ್‌ಪಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಸಿಬ್ಬಂದಿ ಎರಡು ತಂಡಗಳಾಗಿ ತಮಿಳುನಾಡಿನ ಗಡಿಯಲ್ಲಿನ ಕೆಕ್ಕನಹಳ್ಳ ಹಾಗೂ ಕೇರಳ ಗಡಿಯ ಮೂಲೆಹೊಳೆ ಪ್ರದೇಶದಲ್ಲಿ ಮೂರನೇ ದಿನವೂ ಕೂಂಬಿAಗ್ ನಡೆಸುವ ಮೂಲಕ ನಕ್ಸಲರು ಕರ್ನಾಟಕದತ್ತ ನುಸುಳದಂತೆ ಎಚ್ಚರಿಕೆ ವಹಿಸಿದ್ದಾರೆ.

ಮದ್ದೂರು-ಮೂಲೆಹೊಳೆ ಹೆದ್ದಾರಿಯಿಂದ ಸ್ವಲ್ಪ ಒಳಭಾಗದಲ್ಲಿ ಕೆಲವು ದಿನಗಳ ಹಿಂದೆ ಆಗಂತಕರು ಸ್ಯಾಟಲೈಟ್ ಫೋನ್ ಬಳಸಿರುವುದು ಬಯಲಾದ ಹಿನ್ನಲೆಯಲ್ಲಿ ಈ ಪ್ರದೇಶದಲ್ಲಿ ಒಂದಿAಚು ಬಿಡದಂತೆ ವ್ಯಾಪಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮದ್ದೂರಿನಿಂದ ಮೂಲೆಹೊಳೆವರೆಗೆ ಸುಮಾರು ೨೨ ಕಿಲೋ ಮೀಟರ್ ಉದ್ದದ ರಸ್ತೆಲ್ಲಿ ಸಂಚರಿಸುವ ಎಲ್ಲ ವಾಹನಗಳ ಸವಾರರ ಮೇಲೆ ಕಣ್ಣಿಟ್ಟು ಕಾಯಲಾಗುತ್ತಿದೆ. ಇದಲ್ಲದೆ, ಕೇರಳ-ತಮಿಳುನಾಡು ಸಂಪರ್ಕಿಸುವ ಟ್ರೆöÊಜಂಕ್ಷನ್‌ನಲ್ಲಿ ಅರಣ್ಯ ಇಲಾಖೆ ಕಳ್ಳಬೇಟೆ ತಡೆ ಶಿಬಿರ ಪ್ರಾರಂಭಿಸಿದರೆ ಅನುಕೂಲವಾಗಲಿದೆ ಎಂಬುದು ಹೆಸರು ಬಹಿರಂಗಪಡಿಸಲು ಇಚ್ಚಿಸದ ಅಧಿಕಾರಿಯೊಬ್ಬರ ಅಭಿಪ್ರಾಯವಾಗಿದೆ.

See also  ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಇನ್ನಿಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು