News Kannada
Wednesday, March 29 2023

ಕರ್ನಾಟಕ

ಜಿ.ಪಂ ಇಇ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಜೆಡಿಎಸ್ ಆಗ್ರಹ

Photo Credit :

ಜಿ.ಪಂ ಇಇ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಜೆಡಿಎಸ್ ಆಗ್ರಹ

ಮಡಿಕೇರಿ: ಮಳೆಹಾನಿ ಪರಿಹಾರದ ಕಾಮಗಾರಿಗಳಿಗಾಗಿ ನೀಡಲಾದ ೨೧ ಕೋಟಿ ರೂ.ಗಳನ್ನು ಕಾನೂನಿಗೆ ವಿರುದ್ಧವಾಗಿ ಖಾಸಗಿ ಬ್ಯಾಂಕ್‌ನಲ್ಲಿ ಠೇವಣಿ ಇರಿಸಿದ ಜಿ.ಪಂ ಕಾರ್ಯಪಾಲಕ ಇಂಜಿನಿಯರ್ ಶ್ರೀಕಂಠಯ್ಯ ಅವರ ವಿರುದ್ಧದ ಆರೋಪ ಸಾಬೀತಾಗಿರುವುದರಿಂದ ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಸಂಕಷ್ಟದಲ್ಲಿರುವ ಸಂತ್ರಸ್ತರ ನೋವಿಗೆ ಸ್ಪಂದಿಸಬೇಕಾದ ಅಧಿಕಾರಿಗಳು ಪರಿಹಾರ ಕಾರ್ಯಗಳಿಗಾಗಿ ಬಂದ ಅನುದಾನವನ್ನು ಈ ರೀತಿ ನಿಯಮ ಬಾಹಿರವಾಗಿ ಠೇವಣಿ ಇರಿಸಿ ಅನ್ಯಾಯ ಮಾಡಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಜಿ.ಪಂ ಸದಸ್ಯರೊಬ್ಬರು ಕಳೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾರಣ ಈ ಪ್ರಕರಣ ಬೆಳಕಿಗೆ ಬಂದಿದೆ. ದಕ್ಷ ಅಧಿಕಾರಿಯಾಗಿರುವ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ ಅವರ ನಿರ್ದೇಶನದಂತೆ ಶ್ರೀಕಂಠಯ್ಯ ಅವರ ವಿರುದ್ಧದ ತನಿಖೆ ಚುರುಕುಗೊಂಡು ಇದೀಗ ಆರೋಪ ಸಾಬೀತಾಗಿದೆ. ಸರ್ಕಾರದ ಬರೋಬರಿ ೨೧ ಕೋಟಿ ರೂ.ಗಳನ್ನು ಯಾವುದೇ ಆತಂಕವಿಲ್ಲದೆ, ಮೇಲಾಧಿಕಾರಿಗಳ ಆದೇಶವಿಲ್ಲದೆ ಸ್ವ-ಇಚ್ಛೆಯಿಂದ ಖಾಸಗಿ ಬ್ಯಾಂಕ್‌ನಲ್ಲಿಟ್ಟಿರುವುದನ್ನು ಗಮನಿಸಿದರೆ ಈ ಪ್ರಕರಣದ ಹಿಂದೆ ದೊಡ್ಡ ಮಟ್ಟದ ಹಸ್ತಕ್ಷೇಪವಿದೆ ಎನ್ನುವುದು ತಿಳಿದು ಬರುತ್ತಿದೆ. ಅಲ್ಲದೆ ಶ್ರೀಕಂಠಯ್ಯ ಅವರಿಗೆ ಹಿರಿಯ ರಾಜಕಾರಣಿಯೊಬ್ಬರ ಕೃಪಾ ಕಟಾಕ್ಷವೂ ಇರುವ ಬಗ್ಗೆ ಸಂಶಯವಿದೆ ಎಂದು ಕೆ.ಎಂ.ಗಣೇಶ್ ಆರೋಪಿಸಿದ್ದಾರೆ.

ಶ್ರೀಕಂಠಯ್ಯ ಅವರನ್ನು ಅಮಾನತುಗೊಳಿಸಿರುವ ಕುರಿತು ಮಾಹಿತಿ ಇದೆ, ಆದರೆ ಈ ಕ್ರಮ ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಬಾರದು. ಬದಲಿಗೆ ಉನ್ನತ ಮಟ್ಟದ ತನಿಖೆ ನಡೆಸಿ ಕಾರ್ಯಪಾಲಕ ಇಂಜಿನಿಯರ್ ಈ ಹಿಂದೆಯೂ ಮಾಡಿರಬಹುದಾದ ಅಕ್ರಮಗಳನ್ನು ಬಯಲಿಗೆಳೆಯಬೇಕು ಮತ್ತು ಯಾವುದೇ ಕಾರಣಕ್ಕೂ ಮರಳಿ ಹುದ್ದೆಯನ್ನು ನೀಡಬಾರದೆಂದು ಅವರು ಒತ್ತಾಯಿಸಿದ್ದಾರೆ.

See also  ಬಂಡಾಯ ಶಾಸಕರ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು