News Kannada
Friday, March 24 2023

ಕರ್ನಾಟಕ

ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

Photo Credit :

ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

ಮಡಿಕೇರಿ: ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಕನಕದಾಸರ ಸಂದೇಶಗಳನ್ನು ತಿಳಿದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ಮಾಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಡಿ.ದೇವರಾಜು ಅರಸು ಭವನದಲ್ಲಿ ಶುಕ್ರವಾರ ನಡೆದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕನಕದಾಸರು ‘ನಾನು ಹೋದರೆ, ಹೋದೇನೂ…’ ಎಂಬ ಸಂದೇಶ ಸಾರಿದ್ದಾರೆ. ‘ನಾನು’ ಎಂಬುದನ್ನು ಬಿಡಬೇಕು, ಇದರಿಂದ ಸಮಸ್ಯೆಗಳು ಹೆಚ್ಚಾಗುತ್ತವೆಯೇ ಹೊರತು, ಪರಿಹಾರವಾಗುವುದಿಲ್ಲ, ಆದ್ದರಿಂದ ಸೌಜನ್ಯ, ಭ್ರಾತೃತ್ವ, ಸಹೋದರತೆ ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ‘ನಾನು’ ಎಂಬುದನ್ನು ಬಿಟ್ಟರೆ, ಉತ್ತಮ ಜೀವನ ನಡೆಸಬಹುದು ಎಂಬುದನ್ನು ಕನಕದಾಸರು ಸಾರಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಮುಖ್ಯ ಭಾಷಣ ಮಾಡಿದ  ಸರಸ್ವತಿ ಡಿಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್ ಅವರು ದಾಸ ಸಾಹಿತ್ಯವು ಒಂದು ಸಾಲು, ನಾಲ್ಕು ಪದ ಹೊಂದಿದೆ ಎಂದು ಅವರು ತಿಳಿಸಿದರು.

ಭಕ್ತ ಕನಕದಾಸರು ಅಂಬಲಿ, ಕಂಬಳಿ, ಹಮ್ಮು ಮತ್ತು ಬಿಮ್ಮು ಈ ನಾಲ್ಕು ಪದಗಳಲ್ಲಿ ಸಾಕಷ್ಟು ಅರ್ಥಗಳನ್ನು ತಿಳಿಸಿದ್ದಾರೆ. ಪ್ರತಿಯೊಬ್ಬರಿಗೂ ಊಟ, ಬಟ್ಟೆ ಅತಿ ಅವಶ್ಯಕ, ಇವುಗಳನ್ನು ಗಳಿಸಲು ಹಮ್ಮು, ಬಿಮ್ಮು ಬಿಡಬೇಕು ಎಂದು ಭಕ್ತ ಕನಕದಾಸರು ಹೇಳಿದ್ದಾರೆ ಎಂದರು.

ಜನರ ನಾಯಕನಾಗಿ ಬೆಳೆದ ಕನಕದಾಸರು, ಇವರ ಕೀರ್ತನೆ ಮತ್ತು ಸಂದೇಶಗಳು 21 ನೇ ಶತಮಾನದಲ್ಲಿ ದಾಸ ಸಾಹಿತ್ಯ ಪ್ರಾಯೋಗಾಲಯವಿದ್ದಂತೆ. ಕನಕದಾಸ ಚಿಂತನೆಗಳನ್ನು ಅಧ್ಯಯನ ಮಾಡಬೇಕು. ‘ಕುಲ ಕುಲವೆಂದು ಹೊಡೆದಾಡದಿರಿ, ಕುಲ ಯಾವುದೆಂದು ಬಲ್ಲಿರ’ ಎಂಬ ಸಂದೇಶ ಸಾರುವ ಮೂಲಕ ಕನಕದಾಸರು ಎಲ್ಲರೂ ಸರಿ ಸಮಾನವಾಗಿ ಬದುಕಬೇಕು ಎಂಬುದನ್ನು ತಿಳಿಸಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಲೋಕೇಶ್ ಸಾಗರ್ ಅವರು ಮಾತನಾಡಿ ಕನಕದಾಸರ ಕೀರ್ತನೆಗಳು   ಪ್ರತಿಯೊಬ್ಬರೂ ಓದಬೇಕು. ಇದರಿಂದ ಸಮಾಜದಲ್ಲಿ ಬದಲಾವಣೆ ಕಾಣಬಹುದು ಎಂದರು. 

See also  ಮೂರು ಕೊಲೆ ಪ್ರಕರಣದ ಆರೋಪಿ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು