News Kannada
Thursday, March 30 2023

ಕರ್ನಾಟಕ

ನಂಜನಗೂಡು: ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

Photo Credit :

ನಂಜನಗೂಡು: ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

ನಂಜನಗೂಡು: ಕಳೆದ ಕೆಲವು ದಿನಗಳಿಂದ ಎಲ್ಲೆಂದರಲ್ಲಿ ಅಲೆದಾಡುತ್ತಾ ರೈತರ ಸಾಕು ಪ್ರಾಣಿಗಳನ್ನು ಕೊಂದು ತಿಂದು ಹಾಕುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಬೋನು ಇರಿಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

 ತಾಲೂಕಿನ ಚಿನ್ನಂಬಳ್ಳಿ ಗ್ರಾಮದ ಜನ ಚಿರತೆಯ ಉಪಟಳದಿಂದ ಬೇಸತ್ತಿದ್ದರು, ಆಗಾಗ್ಗೆ ರೈತರ ಜಾನುವಾರು ಸೇರಿದಂತೆ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಸಾಯಿಸುತ್ತಿತ್ತು. ಇದರಿಂದ ಜನ ಭಯಭೀತರಾಗಿದ್ದರು. ಈ ನಡುವೆ  ಕಳೆದ ಮೂರು ದಿಗಳ ಹಿಂದೆ ತಗಡೂರು ಗ್ರಾಮದ ಗುರು ಮಲ್ಲೇಗೌಡ ಎಂಬುವರಿಗೆ ಸೇರಿದ ಐದು ಕುರಿಗಳನ್ನು ಇದೇ ಚಿರತೆ ಬಲಿ ಪಡೆದಿತ್ತು. ಜತೆಗೆ ಕಳೆದ 15 ದಿನಗಳಿಂದ ತಗಡೂರು, ಕೊಮ್ಮಗೆರೆ ಮತ್ತು ಚಿನ್ನಂಬಳಿ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ಕಾಣಿಸಿಕೊಂಡು ಜನರಲ್ಲಿ ಭೀತಿ ಹುಟ್ಟಿಸಿತ್ತು. ಚಿರತೆಗೆ ಹೆದರಿ ರೈತರು ಜಮೀನಿಗೆ ತೆರಳಲು ಭಯಪಡುವಂತಾಗಿತ್ತು.

 

ಚಿರತೆಯ ಉಪಟಳದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ವಲಯ ಅರಣ್ಯಾಧಿಕಾರಿ ಲೋಕೇಶ್ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗ್ರಾಮದ ಹೊರವಲಯದಲ್ಲಿರುವ ಮಹದೇವಪ್ಪ ಎಂಬುವವರ ಜಮೀನಿನಲ್ಲಿ ಬೋನು ಇರಿಸಿ ಚಿರತೆಯನ್ನು ಸೆರೆ ಹಿಡಿಯಲು ಮುಂದಾಗಿದ್ದರು

 ಬುಧವಾರ ತಡರಾತ್ರಿ ಅರಣ್ಯ ಇಲಾಖೆಯ ಇರಿಸಿದ್ದ ಬೋನಿಗೆ ಚಿರತೆ ಬಂದು ಬಿದ್ದಿದೆ. ಗುರುವಾರ ಬೆಳಿಗ್ಗೆ ಜಮೀನಿಗೆ ತೆರಳಿದವರಿಗೆ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು ಕಾಣಿಸಿದ್ದು ಇದರಿಂದ ರೈತರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

ಈ ವೇಳೆ ಸ್ಥಳಕ್ಕೆ ಉಪ ಅರಣ್ಯಾಧಿಕಾರಿ ಶಶಿಕುಮಾರ್, ಪುಟ್ಟರಾಜು ಮೊದಲಾದವರು ಭೇಟಿ ನೀಡಿದ್ದರು.

 

 

See also  ಜಾತಿ ಗಣತಿ ವರದಿ ಸಿದ್ದರಾಮಯ್ಯ ಹೇಳಿ ಬರೆಸಿದ ವರದಿ ; ಹೆಚ್‌ಡಿಕೆ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು